ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿಜೆಪಿಗೆ ಸೇರ್ಪಡೆ

Date:

Advertisements

ದೆಹಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅರ್ವಿಂದರ್‌ ಸಿಂಗ್‌ ಲವ್ಲಿ ಅವರು ಇಂದು ಕೆಲವು ನಾಯಕರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಕೇಸರಿ ಪಕ್ಷಕ್ಕೆ ಸೇರ್ಪಡೆಯಾದವರಲ್ಲಿ ಮಾಜಿ ಸಚಿವ ರಾಜ್‌ ಕುಮಾರ್‌ ಚೌಹಾಣ್‌ ಹಾಗೂ ಮಾಜಿ ಶಾಸಕರಾದ ನೀರಜ್‌ ಬಸೋಯಾ ಹಾಗೂ ನಸೀಬ್‌ ಸಿಂಗ್‌ ಕೂಡ ಸೇರಿದ್ದಾರೆ.

ದೆಹಲಿ ಲೋಕಸಭಾ ಚುನಾವಣೆಯಲ್ಲಿ ಎಎಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವುದನ್ನು ಖಂಡಿಸಿದ ಈ ನಾಯಕರು ಕೇಂದ್ರ ಸಚಿವ ಹರ್‌ದೀಪ್‌ ಸಿಂಗ್‌ ಪೂರಿ ಹಾಗೂ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾವ್ಡೆ ಉಪಸ್ಥಿತಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಕಮಲ ಪಕ್ಷವನ್ನು ಹೊಗಳಿದ ಅರ್ವಿಂದರ್‌ ಸಿಂಗ್‌ ಲವ್ಲಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅತೀ ಹೆಚ್ಚು ಬಹುಮತದಿಂದ ಪುನಃ ಅಧಿಕಾರಕ್ಕೆ ಬರುತ್ತಾರೆ ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ

ಎಎಪಿಯೊಂದಿಗಿನ ಮೈತ್ರಿಯನ್ನು ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಷ್ಟ್ರ ರಾಜಧಾನಿಯಲ್ಲಿ ಕನ್ಹಯ್ಯ ಕುಮಾರ್‌ ಹಾಗೂ ಉದಿತ್‌ ರಾಜ್‌ ಅವರಿಗೆ ಟಿಕೆಟ್‌ ನೀಡಿರುವುದನ್ನು ವಿರೋಧಿಸಿ ಪಕ್ಷದಿಂದ ಹೊರಬಂದಿದ್ದರು.

ಅರ್ವಿಂದರ್‌ ಸಿಂಗ್‌ ಲವ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ಇದು ಎರಡನೇ ಬಾರಿಯಾಗಿದೆ. 2017ಕ್ಕೂ ಮುನ್ನ ಕೆಲ ಕಾಲ ಬಿಜೆಪಿಯಲ್ಲಿದ್ದ ಲವ್ಲಿ 2018ರಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X