ಬೀದರ್‌ | ಭಗವಂತ ಖೂಬಾ ಕುಟುಂಬದ ಮತ್ತೊಂದು ವಂಚನೆ ಬಯಲಿಗೆ: ಕ್ರಮಕ್ಕೆ ಆಗ್ರಹ

Date:

Advertisements

ಸುಳ್ಳು ಹೇಳುವುದು, ಸುಳ್ಳು ದಾಖಲೆ ನೀಡಿ ಸರ್ಕಾರಕ್ಕೆ ವಂಚಿಸಿ ಕೋಟಿ ಕೋಟಿ ಲೂಟಿ ಮಾಡುವುದೇ ಭಗವಂತ ಖೂಬಾ ಮತ್ತು ಸೋದರರ ಕಾಯಕವಾಗಿದ್ದು, ಇಡೀ ಖೂಬಾ ಕುಟುಂಬ ರಾಜ್ಯದಲ್ಲಿ ಹಗಲು ದರೋಡೆ ಮಾಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಅರವಿಂದ ಅರಳಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಆರೋಪಿಸಿದ್ದಾರೆ.

ಶನಿವಾರ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕೇಂದ್ರ ಸಚಿವ ಭಗವಂತ ಖೂಬಾ 2 ಎಕರೆ ಯಲ್ಲಿ ಗಣಿಗಾರಿಕೆಗೆ ಅನುಮತಿ ಪಡೆದು, 8 ಎಕರೆಯಲ್ಲಿ ಅಕ್ರಮ ಗಣಿಗಾರಿಕೆ ಮಾಡಿದ್ದು, ಕಲಬುರಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ 25 ಕೋಟಿ ರೂ.ದಂಡ ವಿಧಿಸಿ ನೋಟಿಸ್ ನೀಡಿರುವ ಬೆನ್ನಲ್ಲೇ ಈಗ ಭಗವಂತ ಖೂಬಾ ಅವರ ಸೋದರ ಸಂಬಂಧಿ ಜಗದೀಶ್ ಖೂಬಾ ಕರ್ಮಕಾಂಡ ಬಯಲಾಗಿದೆ” ಎಂದು ತಿಳಿಸಿದ್ದಾರೆ.

“ಬೀದರ್ ಜೆಪಿ ನಗರ ನಿವಾಸಿಯಾಗಿರುವ ಭಗವಂತ ಖೂಬಾ ಸೋದರ ಸಂಬಂಧಿ ಜಗದೀಶ್ ಖೂಬಾ ತಮ್ಮ ಬಳಿ ನಿಗದಿತ ಅರ್ಹತೆ ಇಲ್ಲದಿದ್ದರೂ, ಸುಳ್ಳು ದಾಖಲೆ ನೀಡಿ ಪ್ರಥಮ ದರ್ಜೆ ಗುತ್ತಿಗೆದಾರರು ಎಂದು ಸರ್ಕಾರಿ ಕಾಮಗಾರಿಗಳ ಗುತ್ತಿಗೆ ಪಡೆದಿದ್ದಾರೆ ಎಂದು ಬೆಂಗಳೂರು ದಕ್ಷಿಣ ವಿಭಾಗದ ಸಂಪರ್ಕ ಮತ್ತು ಕಟ್ಟಡ ವಿಭಾಗದ ಮುಖ್ಯ ಎಂಜಿನಿಯರ್ ಅವರು, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಲೋಕೋಪಯೋಗಿ ಇಲಾಖೆ ಇವರಿಗೆ ಪತ್ರ ಬರೆದಿದ್ದಾರೆ. ಇದರಿಂದ ಇವರ ಇಡೀ ಕುಟುಂಬ ಸುಳ್ಳು ದಾಖಲೆ ನೀಡಿ ಸರ್ಕಾರಕ್ಕೆ ವಂಚನೆ ಮಾಡುವುದು ಸಾಬೀತಾಗಿದೆ” ಎಂದು ಗಂಭೀರವಾಗಿ ಆರೋಪಿಸಿದರು.

Advertisements

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಹಂತ 4 ಅಡಿ ಪ್ಯಾಕೇಜ್ 371 ಬೀದರ್ ಜಿಲ್ಲೆ, ಔರಾದ್ ತಾಲೂಕಿನ ಮಹಾರಾಷ್ಟ್ರ ಬಾರ್ಡರ್ -ಮುರ್ಕಿ-ಹಂದರ್ಕಿ ರಾಜ್ಯ ಹೆದ್ದಾರಿ 122 ಕಿ.ಮೀ 0.00ರಿಂದ ಕಿ.ಮೀ.18.00 ರಸ್ತೆ ಅಭಿವೃದ್ಧಿ ಪಡಿಸುವ ಕಾಮಗಾರಿ ಪಡೆಯಲು ತಮ್ಮ ಬಳಿ ನಿಗದಿತ ಪ್ರಮಾಣದ ವಾಹನ ಮತ್ತು ಉಪಕರಣ ಇಲ್ಲದಿದ್ದರೂ ನಕಲಿ ದಾಖಲೆ ಕೊಟ್ಟು ಸರ್ಕಾರಕ್ಕೆ ಮೋಸ ಮಾಡಿದ್ದಾರೆ. ತಮ್ಮ ಬಳಿ ವಾಹನಗಳು ಇಲ್ಲದಿದ್ದರೂ ಕೊಟ್ಟಿ ದಾಖಲೆ ಸೃಷ್ಟಿಸಿ ಮೋಸ ಮಾಡಿ ಟೆಂಡರ್ ಪಡೆದಿದ್ದು, ಇದು ವಂಚನೆ ಪ್ರಕರಣವಾಗಿದೆ. ಇಲಾಖೆ ಕೂಡಲೇ ಪೊಲೀಸ್ ಠಾಣೆಗೆ ದೂರು ನೀಡಿ, ಸುಳ್ಳು ದಾಖಲೆ ಸೃಷ್ಟಿಸಿ, ಸರ್ಕಾರಕ್ಕೆ ವಂಚನೆ ಮಾಡಿರುವ ಜಗದೀಶ್ ಖೂಬಾ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಉಳಿಯುವುದಿಲ್ಲ : ಮಲ್ಲಿಕಾರ್ಜುನ ಖರ್ಗೆ

“ಭಗವಂತ ಖೂಬಾ ಮತ್ತೊಬ್ಬ ಸೋದರನಿಗೆ ಬ್ರಿಮ್ಸ್ ಆಸ್ಪತ್ರೆಯ ಹೊರಗುತ್ತಿಗೆ ನೌಕರರನ್ನು ಒದಗಿಸುವ ಗುತ್ತಿಗೆ ಕೊಡಿಸಿದ್ದು, ಬಡವರಿಗೆ, ದಲಿತರಿಗೆ ಕನಿಷ್ಠ ವೇತನ ನೀಡದೆ, ವಂಚಿತರ, ಶೋಷಿತರ ಸಂಬಳವನ್ನು ಗುಳಂ ಮಾಡಿರುವ ಖೂಬಾ ಕುಟುಂಬ ರಾಜ್ಯದ ಎಲ್ಲೆಡೆ ಇಂತಹ ದ್ರೋಹ, ವಂಚನೆ ಮಾಡುತ್ತಿದೆ. ಖೂಬಾ ಮತ್ತು ಸೋದರರ ಎಲ್ಲ ಗುತ್ತಿಗೆ, ಸರ್ಕಾರಿ ಕಾಮಗಾರಿಯ ಕುರಿತಂತೆ ಸಮಗ್ರ ತನಿಖೆ ಮಾಡಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X