ಸಂದೇಶ್‌ಖಾಲಿಯಲ್ಲಿ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದ ಬಿಜೆಪಿ ನಾಯಕ; ವಿಡಿಯೋ ಹಂಚಿಕೊಂಡ ಟಿಎಂಸಿ

Date:

Advertisements

ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಮೇಲೆ ಬಿಜೆಪಿಯು ಸಂದೇಶಖಾಲಿ ಅತ್ಯಾಚಾರ ಪ್ರಕರಣದ ವಿಚಾರದಲ್ಲಿ ನಿರಂತರ ದಾಳಿಯನ್ನು ನಡೆದುತ್ತಿದ್ದು, ಲೋಕಸಭೆ ಚುನಾವಣೆಯ ಪ್ರಮುಖ ವಿಚಾರವೇ ಇದಾಗಿತ್ತು. ಆದರೆ ಶನಿವಾರ ಈ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ.

ಶನಿವಾರ ಈ ಪ್ರಕರಣಕ್ಕೆ ಸಂಬಂಧಿಸಿದ ಸ್ಟಿಂಗ್ ಆಪರೇಷನ್ ಒಂದರಲ್ಲಿ “ಸಂದೇಶ್‌ಖಾಲಿಯಲ್ಲಿ ಯಾವುದೇ ಅತ್ಯಾಚಾರ ನಡೆದಿಲ್ಲ” ಎಂದು ಬಿಜೆಪಿ ನಾಯಕರೊಬ್ಬರು ಒಪ್ಪಿಕೊಂಡಿರುವುದು ಕಂಡು ಬಂದಿದೆ.

“ಇಲ್ಲಿ ಯಾವುದೇ ಅತ್ಯಾಚಾರ ಅಥವಾ ಲೈಂಗಿಕ ಕಿರುಕುಳಗಳು ನಡೆದಿಲ್ಲ. ಪಕ್ಷದ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ನಿರ್ದೇಶನದ ಮೇರೆಗೆ ಮಹಿಳೆಯರು ಅಂತಹ ದೂರುಗಳನ್ನು ನೀಡುವಂತೆ ಮನವೊಲಿಸಲಾಗಿದೆ” ಎಂದು ಬಿಜೆಪಿ ನಾಯಕ ಗಂಗಾಧರ್ ಕೋಯಲ್ ಹೇಳಿರುವ ವಿಡಿಯೋ ವೈರಲ್ ಆಗಿದೆ. ಆದರೆ ಬಿಜೆಪಿ ಮತ್ತು ಗಂಗಾಧರ್ ಕೋಯಲ್ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.

Advertisements

ಈ ವಿಡಿಯೋ ವೈರಲ್ ಆದ ನಂತರ ಬಿಜೆಪಿ ವಿರುದ್ಧ ತೃಣಮೂಲ ಕಾಂಗ್ರೆಸ್ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಾಗ್ದಾಳಿ ನಡೆಸಿದ್ದಾರೆ. “ಇಡೀ ಘಟನೆಯು ಪಶ್ಚಿಮ ಬಂಗಾಳವನ್ನು ದೂಷಿಸಲು ಬಿಜೆಪಿ ಮಾಡಿದ ಪಿತೂರಿ ಎಂದು ಸಾಬೀತುಪಡಿಸುತ್ತದೆ” ಎಂದು ಟಿಎಂಸಿ ಹೇಳಿದೆ.

ಇದನ್ನು ಓದಿದ್ದೀರಾ?  ಸಂದೇಶಖಾಲಿ ಪ್ರಕರಣದ ಹಿಂದೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ: ಟಿಎಂಸಿ ಆರೋಪ

ವೈರಲ್ ಆಗುತ್ತಿರುವ ವಿಡಿಯೋದ ಸತ್ಯಾಸತ್ಯತೆ ಇನ್ನೂ ತಿಳಿದುಬಂದಿಲ್ಲ. ಆದರೆ ಧ್ವನಿಯನ್ನು ಎಡಿಟ್ ಮಾಡಲಾಗಿದೆ ಎಂದು ಬಿಜೆಪಿ ಮತ್ತು ವಿಡಿಯೋದಲ್ಲಿರುವ ಬಿಜೆಪಿ ಮುಖಂಡರು ಹೇಳಿದ್ದಾರೆ.

ಈ ಹಿಂದೆ ಶಹಜಹಾನ್ ಮತ್ತು ಆತನ ಇಬ್ಬರು ಸಹಾಯಕರು ತಮ್ಮ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದರು. ಈ ಪ್ರಕರಣವನ್ನು ಮುಂದಿಟ್ಟುಕೊಂಡೇ ಸದ್ಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಾರಕ್ಕೆ ಇಳಿದಿದೆ. ಸಂದೇಶಖಾಲಿ ಸಂತ್ರಸ್ತೆಗೆ ಬಿಜೆಪಿ ಟಿಕೆಟ್ ಕೂಡಾ ನೀಡಿದೆ.

ಇನ್ನು ಈ ಸ್ಟಿಂಗ್ ಆಪರೇಷನ್ ವಿಡಿಯೋ ಬಿಡುಗಡೆಯಾದ ನಂತರ ಗಂಗಾಧರ್ ಕೋಯಲ್ “ಇದು ಪಿತೂರಿ, ನನ್ನ ಧ್ವನಿಯನ್ನು ತಂತ್ರಜ್ಞಾನ ಬಳಸಿ ವಿಡಿಯೋದಲ್ಲಿ ಬಳಸಲಾಗಿದೆ” ಎಂದು ಹೇಳಿದ್ದಾರೆ. ಜೊತೆಗೆ ಸಂದೇಶಖಾಲಿ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳಕ್ಕೆ ದೂರನ್ನೂ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

Download Eedina App Android / iOS

X