ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಮಿತ್ರಪಕ್ಷ ಆರ್‌ಎಲ್‌ಡಿ ವಕ್ತಾರ ರಾಜೀನಾಮೆ

Date:

Advertisements

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಬಿಜೆಪಿ ಮಿತ್ರಪಕ್ಷ ರಾಷ್ಟ್ರೀಯ ಲೋಕದಳದ (ಆರ್‌ಎಲ್‌ಡಿ) ವಕ್ತಾರ ರೋಹಿತ್ ಜಾಖರ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

“ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿರುವುದು ಮಹಿಳಾ ಕುಸ್ತಿಪಟುಗಳಿಗೆ ಮಾಡಿದ ಅವಮಾನವಾಗಿದೆ. ನನಗೆ ದೇಶದ ಗೌರವ ಎಂದಿಗೂ ಕೂಡಾ ಮೊದಲ ಸ್ಥಾನದಲ್ಲಿರುತ್ತದೆ” ಎಂದು ರೋಹಿತ್ ಜಾಖರ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಬ್ರಿಜ್ ಭೂಷಣ್‌ಗೆ ತಪ್ಪಿದ ಲೋಕಸಭಾ ಟಿಕೆಟ್: ಪುತ್ರನಿಗೆ ಮಣೆ ಹಾಕಿದ ಬಿಜೆಪಿ

Advertisements

“ನಾನು ಬೇರೆ ಯಾವುದೇ ರಾಜಕೀಯ ಪಕ್ಷಗಳಿಗೆ ಸೇರ್ಪಡೆಯಾಗುವುದಿಲ್ಲ. ಆದರೆ ಸಾಮಾಜಿಕ ಸಮಸ್ಯೆಗಳ ವಿರುದ್ಧ ನನ್ನ ಹೋರಾಟವನ್ನು ನಾನು ಮುಂದುವರಿಸುತ್ತೇನೆ” ಎಂದೂ ಜಾಖರ್ ತಿಳಿಸಿದ್ದಾರೆ.

ಆರ್‌ಎಲ್‌ಡಿಯ ಪ್ರಮುಖ ನಾಯಕರುಗಳಲ್ಲಿ ಜಾಕರ್ ಕೂಡಾ ಒಬ್ಬರು. ಹಾಗೆಯೇ ರಾಷ್ಟ್ರೀಯ ಜಟ್ ಫೆಡರೇಶನ್‌ನ ರಾಜ್ಯ ಅಧ್ಯಕ್ಷರೂ ಆಗಿದ್ದಾರೆ. ಒಂದು ದಶಕಗಳ ಕಾಲದಿಂದ ಆರ್‌ಎಲ್‌ಡಿಯಲ್ಲಿರುವ ಜಾಕರ್‌ ರೈತರ ಆಂದೋಲನದ ಜೊತೆಯೂ ಕೈಜೋಡಿಸಿದ್ದಾರೆ.

ಬಿಜೆಪಿ ಗುರುವಾರ ಕರಣ್ ಭೂಷಣ್ ಸಿಂಗ್ ಅವರನ್ನು ಉತ್ತರ ಪ್ರದೇಶದ ಕೈಸರ್‌ಗಂಜ್ ಕ್ಷೇತ್ರದ ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಮಾಜಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಬದಲಿಗೆ ಅವರ ಪುತ್ರನಿಗೆ ಬಿಜೆಪಿ ಮಣೆ ಹಾಕಿದೆ.

ಇದನ್ನು ಓದಿದ್ದೀರಾ?  ಕುಸ್ತಿ ಫೆಡರೇಷನ್‌ನ ನೂತನ ಅಧ್ಯಕ್ಷನಾಗಿ ಬ್ರಿಜ್‌ ಭೂಷಣ್ ಆಪ್ತ: ಕುಸ್ತಿ ತ್ಯಜಿಸುವುದಾಗಿ ಘೋಷಿಸಿದ ಸಾಕ್ಷಿ ಮಲಿಕ್

ಕುಸ್ತಿ ಫೆಡರೇಶನ್ ಅಧ್ಯಕ್ಷ ಸ್ಥಾನದಲ್ಲಿದ್ದಾಗ ಬ್ರಿಜ್ ಭೂಷಣ್ ಸಿಂಗ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕುಸ್ತಿಪಟುಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಾ ಬಂದಿದ್ದಾರೆ. ಆದರೆ ಬ್ರಿಜ್ ಭೂಷಣ್ ಈ ಆರೋಪವನ್ನು ಅಲ್ಲಗಳೆದಿದ್ದಾರೆ. ದೆಹಲಿ ಪೊಲೀಸರು ಬ್ರಿಜ್ ಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಇನ್ನು ಈ ಹಿಂದೆ ಬಿಜೆಪಿಯೊಂದಿಗೆ ಆರ್‌ಎಲ್‌ಡಿ ಮೈತ್ರಿ ಮಾಡಿಕೊಂಡ ಬಳಿಕ ಆರ್‌ಎಲ್‌ಡಿ ರಾಷ್ಟ್ರೀಯ ಉಪಾಧ್ಯಕ್ಷ ಶಾಹಿದ್ ಸಿದ್ಧಿಕಿ ರಾಜೀನಾಮೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X