ನೋಯ್ಡಾ| ಚರಂಡಿ ಸ್ವಚ್ಛಗೊಳಿಸುತ್ತಿದ್ದ ಇಬ್ಬರು ಪೌರ ಕಾರ್ಮಿಕರು ಮೃತ್ಯು

Date:

Advertisements

ನೋಯ್ಡಾದ ಮನೆಯೊಂದರಲ್ಲಿ ಚರಂಡಿ ಸ್ವಚ್ಛ ಮಾಡುತ್ತಿದ್ದ ಸಂದರ್ಭದಲ್ಲಿ ವಿಷಕಾರಿ ಅನಿಲ ಉಸಿರಾಡಿದ ಕಾರಣ ಪಶ್ಚಿಮ ಬಂಗಾಳ ಮೂಲದ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ಸಂಜೆ ನೂನಿ ಮಂಡಲ್ ಮತ್ತು ತಪನ್ ಮಂಡಲ್ ಸೆಕ್ಟರ್ 26 ರಲ್ಲಿ ಸುಮಿತ್ ಚಾವ್ಲಾ ಎಂಬ ವ್ಯಕ್ತಿಯ ನಿವಾಸದಲ್ಲಿ ಕೆಲಸ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಇಬ್ಬರೂ ಕಾರ್ಮಿಕರು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯವರು ಮತ್ತು ನೋಯ್ಡಾ ಸೆಕ್ಟರ್ 9 ರ ಕೊಳೆಗೇರಿಯ ನಿವಾಸಿಗಳು ಆಗಿದ್ದರು.

Advertisements

ಇದನ್ನು ಓದಿದ್ದೀರಾ?  ದೇಶಾದ್ಯಂತ ಕಳೆದ 5 ವರ್ಷಗಳಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ 443 ಮಂದಿ ಸಾವು

“ನೋಯ್ಡಾ ಸೆಕ್ಟರ್ 26ರಲ್ಲಿ ವ್ಯಕ್ತಿಯೊಬ್ಬರು ತಮ್ಮ ಮನೆಯಲ್ಲಿನ ಸೆಪ್ಟಿಕ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇಬ್ಬರು ಪೌರ ಕಾರ್ಮಿಕರನ್ನು ನೇಮಿಸಿಕೊಂಡಿದ್ದರು. ನಿನ್ನೆ (ಶುಕ್ರವಾರ) ರಾತ್ರಿ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಇಬ್ಬರಿಗೂ ಪ್ರಜ್ಞೆ ತಪ್ಪಿತ್ತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಕಾರ್ಮಿಕರು ಬದುಕುಳಿಯಲಿಲ್ಲ” ಎಂದು ಉಪ ಪೊಲೀಸ್ ಆಯುಕ್ತ (ನೋಯ್ಡಾ) ವಿದ್ಯಾ ಸಾಗರ್ ಮಿಶ್ರಾ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಇನ್ನೊರ್ವ ಪೊಲೀಸ್ ಅಧಿಕಾರಿ, “ಮೃತರಿಬ್ಬರು ಶುಕ್ರವಾರ ಸಂಜೆ 7 ಗಂಟೆಗೆ ಮನೆಗೆ ಬಂದು ಸ್ವಚ್ಛತೆ ಆರಂಭಿಸಿದ್ದಾರೆ. ರಾತ್ರಿ 11.15 ರ ನಂತರ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವೈದ್ಯರು ಪರೀಕ್ಷಿಸುವ ವೇಳೆಗಾಗಲೇ ಮೃತಪಟ್ಟಿದ್ದರು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ದಾವಣಗೆರೆ | ಕಾರ್ಮಿಕರೊಬ್ಬರಿಂದ ಒಳಚರಂಡಿ ಸ್ವಚ್ಛತೆ; ಎಫ್‌ಐಆರ್‌ ದಾಖಲು

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶ

ಚರಂಡಿಗೆ ಜನರು ಇಳಿದು ಶುಚಿಗೊಳಿಸುವುದನ್ನು 25 ವರ್ಷಗಳ ಹಿಂದೆ ನಿಷೇಧಿಸಲಾಗಿದೆ. ಆದರೂ ಕೂಡಾ ಇಂದಿಗೂ ಈ ಕಾರ್ಯವನ್ನು ಪೌರ ಕಾರ್ಮಿಕರಿಂದ ಮಾಡಿಸಲಾಗುತ್ತಿದೆ. ಇನ್ನು ಕಳೆದ ಐದು ವರ್ಷಗಳಲ್ಲಿ ಒಳ ಚರಂಡಿ ಸ್ವಚ್ಛಗೊಳಿಸುವಾಗ ಕನಿಷ್ಠ 443 ಮಂದಿ ಸಾವನ್ನಪ್ಪಿದ್ದಾರೆ. ಈ ಉದ್ಯೋಗ ನಿಷೇಧಿಸುವ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಈ ಹಿಂದೆ 2023ರ ಅಕ್ಟೋಬರ್‌ನಲ್ಲಿ ಸುಪ್ರಿಂ ಕೋರ್ಟ್ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X