ಮೋದಿ ರಾಜಕೀಯ ಇತಿಹಾಸ ‘ಹಿಂದು-ಮುಸ್ಲಿಂ ವಿವಾದ’ವನ್ನ ಆಧರಿಸಿದೆ: ದಿಗ್ವಿಜಯ ಸಿಂಗ್

Date:

Advertisements

ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಇತಿಹಾಸವು ಹಿಂದು-ಮುಸ್ಲಿಂ ವಿವಾದವನ್ನು ಆಧರಿಸಿದೆ. ಇದರಿಂದ ಯಾರಿಗೆ ಲಾಭವಾಗಿದೆ – ಯಾರಿಗೆ ತೊಂದರೆಯಾಗಿದೆ ಎಂಬುದನ್ನು ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೇಳಿದ್ದಾರೆ.

ಮಧ್ಯಪ್ರದೇಶದ ರಾಜ್‌ಗಢ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಕಣಕ್ಕಿಳಿದಿರುವ ಸಿಂಗ್, “ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪಿನ ಬಗ್ಗೆ ಅಸಮಾಧಾನವಿದೆ” ಎಂದು ಹೇಳಿದ್ದಾರೆ.

“ಬಿಜೆಪಿ ನಿಜವಾದ ಸಮಸ್ಯೆಗಳ ಬದಲಿಗೆ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಮತ ಕೇಳುತ್ತಿದೆ. ನೈಜ ಸಮಸ್ಯೆಗಳ ಆಧಾರದ ಮೇಲೆ ಎಲ್ಲಿ ಚುನಾವಣೆ ನಡೆಸಲಾಗುತ್ತಿದೆ. ಕಾಂಗ್ರೆಸ್‌ ವಿರುದ್ಧ ಬಿಜೆಪಿ ಸುಳ್ಳು ಆರೋಪಗಳನ್ನು ಮಾಡುತ್ತಿದೆ” ಎಂದು ಕಿಡಕಾರಿದ್ದಾರೆ.

Advertisements

ಗುಜರಾತ್ ಮಾದರಿ ಬಗ್ಗೆ ವ್ಯಂಗ್ಯವಾಡಿದ ಸಿಂಗ್, “ನೀವು ಗುಜರಾತ್‌ನ ಮಾನವ ಅಭಿವೃದ್ಧಿ ಸೂಚ್ಯಂಕವನ್ನು (ಎಚ್‌ಡಿಐ) ನೋಡಿದರೆ, ಅದು ದೇಶದ ಟಾಪ್ 10 ರಾಜ್ಯಗಳಲ್ಲಿ ಸ್ಥಾನವನ್ನೇ ಪಡೆದಿಲ್ಲ. ಹಾಗಿದ್ದರೆ, ಗುಜರಾತ್ ಮಾದರಿ ಎಂದರೆ ಏನು” ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿಯ ಚುನಾವಣಾ ಯಶಸ್ಸಿನಲ್ಲಿ ಇವಿಎಂಗಳ ಪಾತ್ರವಿದೆ ಎಂಬುದನ್ನು ನಾನು ನಂಬುತ್ತೇನೆ. ಇವಿಎಂಗಳ ಕುರಿತು ಸುಪ್ರೀಂ ಕೋರ್ಟ್‌ ನೀಡಿದ ಇತ್ತೀಚಿನ ತೀರ್ಪಿನ ಬಗ್ಗೆ ಅಸಮಾಧಾನವಿದೆ. ಈ ಬಗ್ಗೆ ಚುನಾವಣೆ ಮುಗಿದ ಬಳಿಕ ಮಾತನಾಡುತ್ತೇನೆ” ಎಂದಿದ್ದಾರೆ.

ಕಳೆದ ಬಾರಿ ಭೋಪಾಲ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಸೋತಿದ್ದ ಸಿಂಗ್, ಈ ಬಾರಿ ಹಾಲಿ ಬಿಜೆಪಿ ಸಂಸದ ರೋಡ್ಮಲ್ ನಗರ್‌ ವಿರುದ್ಧ ಕಣಕ್ಕಿಳಿದಿದ್ದಾರೆ. ನಗರ್ ಅವರು 2014ರಿಂದ ರಾಜ್‌ಗಢವನ್ನು ಪ್ರತಿನಿಧಿಸುತ್ತಿದ್ದಾರೆ. ಇದೇ ಕ್ಷೇತ್ರದಲ್ಲಿ ಸಿಂಗ್ ಅವರು 1984 ಮತ್ತು 1991ರಲ್ಲಿ ಗೆದ್ದಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X