ದೆಹಲಿ| ಚುನಾವಣೆ ಹೊಸ್ತಿಲಲ್ಲೇ ಐವರು ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ

Date:

Advertisements

ದೆಹಲಿಯಲ್ಲಿ ಮತದಾನಕ್ಕೆ ಕೇವಲ 20 ದಿನಗಳ ಮೊದಲು ಇತ್ತೀಚೆಗೆ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಅರವಿಂದರ್ ಸಿಂಗ್ ಲವ್ಲಿ ಕೆಳಗಿಳಿದಿದ್ದು, ಶನಿವಾರ ಲವ್ಲಿ ಅವರು ಇತರ ನಾಲ್ವರು ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ ಆಗಿದ್ದಾರೆ.

“ನಾವು ಎಲ್ಲಾ 70 ದೆಹಲಿ ವಿಧಾನಸಭಾ ಕ್ಷೇತ್ರಗಳಲ್ಲಿ ಜನರೊಂದಿಗೆ ಸಂಪರ್ಕ ಹೊಂದಿದ್ದೇವೆ. ರಾಜೀನಾಮೆ ನೀಡಿದ ನಂತರ ಪ್ರಾಮಾಣಿಕವಾಗಿ ಮನೆಯಲ್ಲಿ ಕುಳಿತುಕೊಳ್ಳಲು ಯೋಚಿಸಿದ್ದೆ. ಆದರೆ ಅವರೆಲ್ಲರೂ ದೆಹಲಿ ಮತ್ತು ದೇಶಕ್ಕಾಗಿ ಹೋರಾಡಲು ನಾನು ಬಲವಾದ ಪಕ್ಷವನ್ನು ಸೇರಬೇಕೆಂದು ಹೇಳಿದರು” ಎಂದು ಬಿಜೆಪಿ ಸೇರಿದ ಬಳಿಕ ಲವ್ಲಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ಕಾಂಗ್ರೆಸ್‌ಗೆ ‘ಕೈ’ ಕೊಟ್ಟ ಮಾಜಿ ಮೇಯರ್ ಕವಿತಾ ಸನಿಲ್; ಬಿಜೆಪಿ ಸೇರ್ಪಡೆ

Advertisements

“ನಾವು ಐವರು ಮಾತ್ರವಲ್ಲ ಇನ್ನೂ ಹಲವಾರು ಕಾಂಗ್ರೆಸ್‌ ನಾಯಕರು ಬಿಜೆಪಿ ಸೇರಲಿದ್ದಾರೆ. ಮುಂಬರುವ ದಿನಗಳಲ್ಲಿ ದೆಹಲಿಯ ಜನರ ಪರವಾಗಿ ಹೋರಾಡಲು ಹಲವಾರು ನಾಯಕರು ಈಗಾಗಲೇ ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಸೇರಲಿದ್ದಾರೆ” ಎಂದು ತಿಳಿಸಿದರು.

ಕೇಂದ್ರ ಸಚಿವ ಹರ್ದೀಪ್ ಪುರಿ ಅವರ ಸಮ್ಮುಖದಲ್ಲಿ ಮಾಜಿ ಕಾಂಗ್ರೆಸ್ ಶಾಸಕರಾದ ರಾಜ್‌ಕುಮಾರ್ ಚೌಹಾಣ್, ನೀರಜ್ ಬಸೋಯಾ, ನಸೀಬ್ ಸಿಂಗ್ ಬಿಜೆಪಿ ಸೇರಿದ್ದಾರೆ. ದೆಹಲಿ ಯುವ ಕಾಂಗ್ರೆಸ್ ಮುಖ್ಯಸ್ಥ ಅಮಿತ್ ಮಲಿಕ್ ಕೂಡಾ ಬಿಜೆಪಿ ಸೇರಿದ್ದಾರೆ. ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ.

ದೆಹಲಿ ಕಾಂಗ್ರೆಸ್‌ನ ಬಲ ಕ್ಷೀಣ?

ಕಾಂಗ್ರೆಸ್‌ನಲ್ಲಿದ್ದ ಲವ್ಲಿ 2017 ರಲ್ಲಿ ಬಿಜೆಪಿ ಸೇರಿದ್ದು ಬಳಿಕ ಮತ್ತೆ ಕಾಂಗ್ರೆಸ್‌ಗೆ ಮರಳಿದ್ದಾರೆ. ಅವರು 2023 ರಲ್ಲಿ ನಗರ ಘಟಕದ ಮುಖ್ಯಸ್ಥರಾಗಿದ್ದರು. ಆದರೆ ಇತ್ತೀಚೆಗೆ ಆ ಸ್ಥಾನವನ್ನು ತೊರೆದಿದ್ದ ಲವ್ಲಿ ಈಗ ಚುನಾವಣೆ ಹೊಸ್ತಿಲಲ್ಲಿ ಮತ್ತೆ ಬಿಜೆಪಿ ಸೇರಿದ್ದಾರೆ.

ಕಾಂಗ್ರೆಸ್‌ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಒಂದು ದಶಕದಲ್ಲಿ ಯಾವುದೇ ವಿಧಾನಸಭೆ ಚುನಾವಣೆ ಅಥವಾ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿಲ್ಲ. ಈಗ ಕಾಂಗ್ರೆಸ್ ನಾಯಕರು ಬಿಜೆಪಿಗೆ ಪಳಾಯನ ಆಗುತ್ತಿರುವುದು ಕಾಂಗ್ರೆಸ್‌ ಬಲವನ್ನು ಮತ್ತಷ್ಟು ಕುಗ್ಗಿಸುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X