‘ನಾಡಾ’ದಿಂದ ಬಜರಂಗ್ ಪುನಿಯಾ ಅಮಾನತು: ಅನ್ಯಾಯದ ವಿರುದ್ಧ ಕೋರ್ಟ್‌ಗೆ ಹೋಗುತ್ತೇನೆಂದ ಕುಸ್ತಿಪಟು

Date:

Advertisements

ಒಲಿಂಪಿಕ್‌ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ರನ್ನು ರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ಪ್ರಾಧಿಕಾರ(ನಾಡಾ) ಮಾದಕವಸ್ತು ಪತ್ತೆ ಪರೀಕ್ಷೆಗೆ ಮೂತ್ರ ಮಾದರಿಯನ್ನು ಸೂಕ್ತ ಸಮಯಕ್ಕೆ ನೀಡದ ಕಾರಣ ಅಮಾನತುಗೊಳಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಬಜರಂಗ್‌ ಪುನಿಯಾ, ಮಾದಕ ವಸ್ತು ಪರೀಕ್ಷೆ ಪತ್ತೆಗೆ ಕೇಳಿರುವ ಪ್ರಶ್ನೆಯ ಬಗ್ಗೆ ನಾನು ಸ್ಪಷ್ಟಪಡಿಸುತ್ತೇನೆ.ನಾನು ನಾಡಾ ಅಧಿಕಾರಿಗಳಿಗೆ ನನ್ನ ಮಾದರಿಗಳನ್ನು ನೀಡಲು ತಿರಸ್ಕರಿಸಲಿಲ್ಲ. ನನ್ನ ಮಾದರಿಗಳನ್ನು ಹಾಗೂ ಮಾದಕ ದ್ರವ್ಯ ಪತ್ತೆ ಪರೀಕ್ಷೆ ನಡೆಸಲು ಅವಧಿ ಮೀರಿದ ಕಿಟ್‌ಗಳನ್ನು ತಂದು ಅದರ ಬಗ್ಗೆ ಕೈಗೊಂಡ ಕ್ರಮಗಳ ನನ್ನ ಪ್ರಶ್ನೆಗೆ ಉತ್ತರಿಸಲು ಅವರಲ್ಲಿ ಮನವಿ ಮಾಡುತ್ತೇನೆ. ಅಮಾನತು ಪತ್ರಕ್ಕೆ ನನ್ನ ವಕೀಲರು ಉತ್ತರ ನೀಡಲಿದ್ದಾರೆ” ಎಂದು ತಿಳಿಸಿದ್ದಾರೆ.

ಅಮಾನತುಗೊಂಡ ಕಾರಣ ಜುಲೈ 26ರಿಂದ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳವ ಅವಕಾಶ ಕಳೆದುಕೊಳ್ಳುವ ಸಾಧ್ಯತೆಯಿದೆ.

Advertisements

ಬಜರಂಗ್‌ ಪುನಿಯಾ 2020ರ ಟೊಕಿಯೋ ಒಲಿಂಪಿಕ್ಸ್‌ನಲ್ಲಿ 65 ಕೆಜಿ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X