ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ: ಗೃಹ ಸಚಿವ ಜಿ ಪರಮೇಶ್ವರ್‌

Date:

Advertisements

ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣನ ವಿರುದ್ಧ ಇಂಟರ್‌ಪೋಲ್‌ ಸಹಾಯದ ಮೂಲಕ ಭಾರತಕ್ಕೆ ಕರೆತರಲು ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಟರ್‌ಪೋಲ್‌ ಸಂಸ್ಥೆಯ ಮೂಲಕ ಬ್ಲೂ ಕಾರ್ನರ್‌ ನೋಟಿಸ್‌ ತಲುಪಿಸಲಾಗಿದೆ. ಆರೋಪಿಯ ಪತ್ತೆ, ಸ್ಥಳ ಅಥವಾ ಅಪರಾಧ ಸಂಬಂಧಿತ ಮಾಹಿತಿ ಬಗ್ಗೆ ಇಂಟರ್‌ಪೋಲ್‌ ಸದಸ್ಯ ರಾಷ್ಟ್ರಗಳು ಹೆಚ್ಚುವರಿ ಮಾಹಿತಿ ರವಾನಿಸಿ ಆರೋಪಿ ಬೇಕಾದ ರಾಷ್ಟ್ರಕ್ಕೆ ತಿಳಿಸುತ್ತವೆ.

ನಂತರ ಇಲ್ಲಿನ ಪೊಲೀಸರು ಅರೋಪಿಯಿರುವ ರಾಷ್ಟ್ರಕ್ಕೆ ತೆರಳಿ ಅಲ್ಲಿನ ಪೊಲೀಸರ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಿ ಕರೆತರುತ್ತಾರೆ.

Advertisements

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್ ಲೈಂಗಿಕ ಹಗರಣದ ಸಂತ್ರಸ್ತೆಯರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಆರ್ಥಿಕ ನೆರವು

“ಈಗಾಗಲೇ ಬ್ಲೂ ಕಾರ್ನರ್ ನೋಟಿಸ್‌ ಜಾರಿಗೊಳಿಸಲಾಗಿದ್ದು, ಇಂಟರ್‌ಪೋಲ್‌ ಸಂಸ್ಥೆ ತನ್ನ ಸದಸ್ಯ ರಾಷ್ಟ್ರಗಳಿಗೆ ಆರೋಪಿ ಪತ್ತೆಯ ಬಗ್ಗೆ ಮಾಹಿತಿ ನೀಡುತ್ತವೆ” ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಈಗಾಗಲೇ ರಚಿಸಲಾಗಿರುವ ವಿಶೇಷ ತನಿಖಾ ತಂಡ ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಪ್ರಜ್ವಲ್‌ ರೇವಣ್ಣನನ್ನು ಹೇಗೆ ಭಾರತಕ್ಕೆ ವಾಪಸ್‌ ಕರೆತರಬೇಕೆಂದು ನಿರ್ಧರಿಸುತ್ತವೆ. ತನಿಖಾ ಸಂಸ್ಥೆಯು ತನ್ನ ಕೆಲಸ ನಿರ್ವಹಿಸಲಿದ್ದು,ಕಾನೂನಿನ ಪ್ರಕಾರ ದೂರು ಸ್ವೀಕರಿಸಿ ಕ್ರಮ ಕೈಗೊಳ್ಳಲಿದೆ ಎಂದು ಪರಮೇಶ್ವರ್ ತಿಳಿಸಿದರು.

ಪ್ರಜ್ವಲ್‌ ರೇವಣ್ಣನ ತಂದೆ ಹೆಚ್‌ ಡಿ ರೇವಣ್ಣ ಅವರನ್ನು ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಸ್‌ಐಟಿ ತಂಡ ಬಂಧಿಸಿದೆ. ಹೆಚ್‌ ಡಿ ರೇವಣ್ಣ ಅವರ ಮೇಲೆ ಕೂಡ ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣಗಳನ್ನು ದಾಖಲಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X