ಉತ್ತರ ಪ್ರದೇಶದ ಅಮೇಥಿಯಲ್ಲಿರುವ ಕಾಂಗ್ರೆಸ್ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ಕೆಲವು ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ದುಷ್ಕರ್ಮಿಗಳು ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿದ್ದು ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಘಟನೆಯ ನಂತರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರದೀಪ್ ಸಿಂಗಲ್ ಪಕ್ಷದ ಕಚೇರಿಗೆ ದೌಡಾಯಿಸಿದ್ದಾರೆ.
यूपी के अमेठी में स्मृति ईरानी और BJP के कार्यकर्ता बुरी तरह डरे हुए हैं।
सामने दिख रही हार से बौखलाए BJP के गुंडे लाठी-डंडों से लैस होकर अमेठी में कांग्रेस कार्यालय के बाहर पहुंचे और वहां खड़ी गाड़ियों में तोड़फोड़ की।
कांग्रेस के कार्यकर्ताओं और अमेठी के लोगों पर भी जानलेवा… pic.twitter.com/Knv7BBN8bk
— Congress (@INCIndia) May 5, 2024
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, “ಉತ್ತರಪ್ರದೇಶದ ಅಮೇಥಿಯಲ್ಲಿ ಸ್ಮೃತಿ ಇರಾನಿ ಮತ್ತು ಬಿಜೆಪಿ ಕಾರ್ಯಕರ್ತರು ತೀವ್ರ ಭಯಭೀತರಾಗಿದ್ದಾರೆ. ಸೋಲಿನಿಂದ ಹತಾಶರಾದ ಬಿಜೆಪಿ ಗೂಂಡಾಗಳು ಲಾಠಿ ಹಿಡಿದು ಅಮೇಥಿಯ ಕಾಂಗ್ರೆಸ್ ಕಚೇರಿಯ ಹೊರಗೆ ಬಂದು ನಿಲ್ಲಿಸಿದ್ದ ವಾಹನಗಳನ್ನು ಧ್ವಂಸಗೊಳಿಸಿದರು” ಎಂದು ಆರೋಪಿಸಿದೆ.
ಇದನ್ನು ಓದಿದ್ದೀರಾ? ಉಡುಪಿ | ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು
“ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಮೇಥಿ ಜನರ ಮೇಲೆ ಮಾರಣಾಂತಿಕ ಹಲ್ಲೆ ಕೂಡ ನಡೆದಿದೆ. ಈ ದಾಳಿಯಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಸ್ಥಳೀಯರ ವಾಹನಗಳಿಗೂ ಹಾನಿಯಾಗಿದೆ” ಎಂದು ದೂರಿದ್ದಾರೆ.
“ಈ ಇಡೀ ಘಟನೆಯಲ್ಲಿ ಪೊಲೀಸ್ ಆಡಳಿತ ಮೂಕಪ್ರೇಕ್ಷಕನಂತೆ ನಿಂತಿತ್ತು. ಅಮೇಥಿಯಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಇದನ್ನು ಓದಿದ್ದೀರಾ? ಪ್ರಜ್ವಲ್ ಲೈಂಗಿಕ ಹಗರಣ | ರೇವಣ್ಣ ಕುಟುಂಬದ ಫಾರ್ಮ್ ಹೌಸ್ಗಳ ಮೇಲೆ ಎಸ್ಐಟಿ ದಾಳಿ
ಘಟನೆ ಬಳಿಕ ನಗರದ ಸರ್ಕಲ್ ಇನ್ಸ್ಪೆಕ್ಟರ್ (ಸಿಒ) ಮಯಾಂಕ್ ದ್ವಿವೇದಿ ಅವರೊಂದಿಗೆ ಭಾರೀ ಪೊಲೀಸ್ ಪಡೆ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತ ಪಕ್ಷದ ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಯತ್ನಿಸಿದೆ.
ಈ ಬಗ್ಗೆ ತನಿಖೆ ನಡೆಸಿ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಒ ದ್ವಿವೇದಿ ಭರವಸೆ ನೀಡಿದ್ದಾರೆ. ಸದ್ಯ ಘಟನೆ ನಡೆದ ಸ್ಥಳದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.