ಉತ್ತರಾಖಂಡ್ ಅರಣ್ಯದಲ್ಲಿ ಕಾಡ್ಗಿಚ್ಚು: ಐವರು ಸಾವು, ಸಾವಿರಾರು ಎಕರೆ ಕಾಡು ನಾಶ

Date:

Advertisements

ಉತ್ತರಾಖಂಡ್‌ ಅರಣ್ಯಗಳಲ್ಲಿ ಕಾಡ್ಗಿಚ್ಚು ಸಂಭವಿಸಿ ಐವರು ಮೃತಪಟ್ಟು, ಸಾವಿರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಗಾಗಿದೆ.

ಪಿತೋರಾಘರ್‌ ಜಿಲ್ಲೆಯ ಗಂಗೋಲಿಹಟ್‌ ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮಾನವ ನಿರ್ಮಿತವಾದ ಈ ಘಟನೆಗೆ ಸಂಬಂಧಿಸಿದಂತೆ ಭಾರತೀಯ ಅರಣ್ಯ ಕಾಯ್ದೆಯಡಿ ಪಿಯೂಶ್ ಸಿಂಗ್, ಆಯೂಶ್ ಸಿಂಗ್‌, ರಾಹುಲ್ ಸಿಂಗ್‌ ಹಾಗೂ ಅಂಕಿತ್‌ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಡೆಹರಾಡೂನ್‌ನ ಹವಾಮಾನ ಕೇಂದ್ರದ ನಿರ್ದೇಶಕ ಬಿಕ್ರಮ್‌ ಸಿಂಗ್‌ ಮಾತನಾಡಿ, ಮೇ 7 ರಿಂದ ಮೇ 8 ಹಾಗೂ ಮೇ 11 ರಿಂದ ಉತ್ತರಾಖಂಡ್‌ನಲ್ಲಿ ಮಳೆಬರುವ ಸಾಧ್ಯತೆಯಿದ್ದು, ಕಾಡ್ಗಿಚ್ಚು ಶಮನಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

Advertisements

ಹಿಮಾಲಯದ ಕಣಿವೆಯ ರಾಜ್ಯದಲ್ಲಿ ಸಂಭವಿಸುವ ಕಾಡ್ಗಿಚ್ಚು ತಿಂಗಳುಗಳ ಕಾಲ ಮುಂದುವರೆಯುತ್ತದೆ. 2023ರ ನವೆಂಬರ್‌ 1ರಂದ 910 ಅರಣ್ಯಗಳಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ 1145 ಹೆಕ್ಟೇರ್‌ ಅರಣ್ಯ ನಾಶವಾಗಿತ್ತು. ಇದರಿಂದ ಸರ್ಕಾರಕ್ಕೆ ಲಕ್ಷಾಂತರ ರೂ. ನಷ್ಟವಾಗಿತ್ತು ಎಂದು ಅರಣ್ಯ ಇಲಾಖೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜ್ವಲ್ ಪ್ರಕರಣ, ಒಕ್ಕಲಿಗರ ನಾಯಕತ್ವ ಮತ್ತು ಮನುಷ್ಯತ್ವ

ಕಾಡ್ಗಿಚ್ಚು ವಸತಿ ಪ್ರದೇಶದಲ್ಲಿ ವಾಸಿಸುವ ಜನರಿಗೂ ಅಪಾಯ ತಂದೊಡ್ಡಲಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕೆಂದು ಉತ್ತರಾಖಂಡ್‌ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

ಮಾನವ ನಿರ್ಮಿತದಿಂದ ಸಂಭವಿಸುವ ಕಾಡ್ಗಿಚ್ಚಿನ ಪ್ರಕರಣದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮೇ 8 ರಂದು ತುರ್ತಾಗಿ ಪರಿಗಣಿಸಲು ಇಂದು ಒಪ್ಪಿಗೆ ಸೂಚಿಸಿದೆ.ಕಾಡ್ಗಿಚ್ಚಿನಿಂದ ಸಂಭವಿಸುವ ಅನಾಹುತದಲ್ಲಿ ಶೇ.90 ರಷ್ಟು ಮಾನವ ನಿರ್ಮಿತವಾಗಿರುತ್ತದೆ.

ನ್ಯಾಯಮೂರ್ತಿ ಬಿ ಆರ್‌ ಗವಾಯಿ ನೇತೃತ್ವದ ಪೀಠ ಹಿರಿಯ ನ್ಯಾಯವಾದಿ ರಾಜೀವ್‌ ದತ್ತ, ವಕೀಲ ಕೆ ಪರಮೇಶ್ವರ್‌ ಒಳಗೊಂಡ ಅರ್ಜಿದಾರರಿಗೆ ಸೂಚನೆ ನೀಡಿದೆ.

ಘಟನೆಯು ಆಘಾತಕಾರಿಯಾಗಿದ್ದು, ಅರಣ್ಯದ ಎಲ್ಲಡೆ ಇಂಗಾಲದ ಡೈಆಕ್ಸೈಡ್‌ ಹೊಗೆ ಆವರಿಸಿದೆ. ಕಳೆದ 6 ತಿಂಗಳಲ್ಲಿ ಸಂಭವಿಸಿದ ಅಗ್ನಿ ಅನಾಹುತಗಳಲ್ಲಿ 900ಕ್ಕೂ ಹೆಚ್ಚು ಘಟನೆಗಳು ಮಾನವ ನಿರ್ಮಿತವಾಗಿದ್ದು, ಇದರಿಂದ ಸಾವಿರಾರು ಎಕರೆ ಅರಣ್ಯ ನಾಶವಾಗಿದೆ ಎಂದು ಹಿರಿಯ ನ್ಯಾಯವಾದಿ ರಾಜೀವ್‌ ದತ್ತ ಕೋರ್ಟ್‌ಗೆ ಮಾಹಿತಿ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X