50% ಮಿತಿಯನ್ನು ತೆಗೆಯುತ್ತೇವೆ, ಅಗತ್ಯವಿರುವಷ್ಟು ಮೀಸಲಾತಿ ನೀಡುತ್ತೇವೆ: ರಾಹುಲ್ ಗಾಂಧಿ

Date:

Advertisements

ಜಾತಿ ಆಧಾರಿತ ಮೀಸಲಾತಿಗೆ ಇರುವ ಶೇ.50 ರಷ್ಟು ಮಿತಿಯನ್ನು ಕಾಂಗ್ರೆಸ್‌ ತೆಗೆದುಹಾಕುತ್ತದೆ. ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ಜನರಿಗೆ ಅಗತ್ಯವಿರುವಷ್ಟ ಮೀಸಲಾತಿ ಕೋಟಾವನ್ನು ಹೆಚ್ಚಿಸುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಮಧ್ಯಪ್ರದೇಶದ ರತ್ಲಾಮ್‌ನಲ್ಲಿ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಅವರು ಮಾತನಾಡಿದರು. “ಈ ಚುನಾವಣೆಯು ಸಂವಿಧಾನದ ಉಳಿವಿಗಾಗಿನ ಹೋರಾಟವಾಗಿದೆ. ಸಂವಿಧಾನವನ್ನು ಬದಲಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಬಯಸಿವೆ. ಕಾಂಗ್ರೆಸ್‌ ಮತ್ತು ‘ಇಂಡಿಯಾ’ ಮೈತ್ರಿಕೂಟವು ಸಂವಿಧಾನವನ್ನು ಉಳಿಸಲು ಹೋರಾಡುತ್ತಿವೆ. ನಮ್ಮ ಸಂವಿಧಾನವು ದೇಶದ ಜನರಿಗೆ ನೀರು, ಅರಣ್ಯ, ಭೂಮಿ ಮೇಲೆ ಹಕ್ಕುಗಳನ್ನು ನೀಡಿದೆ. ಈ ಹಕ್ಕುಗಳನ್ನು ತೆಗೆದು ಹಾಕಲು ಮತ್ತು ಸಂಪೂರ್ಣ ಅಧಿಕಾರಕ್ಕಾಗಿ ನರೇಂದ್ರ ಮೋದಿ ಬಯಸುತ್ತಾರೆ” ಎಂದು ಆರೋಪಿಸಿದ್ದಾರೆ.

“ಗೆದ್ದರೆ ಸಂವಿಧಾನ ಬದಲಿಸುತ್ತೇವೆ ಎಂದು ಬಿಜೆಪಿ ನಾಯಕರು ಘೋಷಿಸಿದ್ದರು. ಅದಕ್ಕಾಗಿಯೇ ಅವರು ‘400 ಸೀಟು’ ಘೋಷಣೆ ಮಾಡಿದರು. ಆದರೆ, 400 ಸ್ಥಾನವನ್ನು ಮರೆತುಬಿಡಿ, ಅವರಿಗೆ 150 ಸೀಟುಗಳು ಸಿಗುತ್ತಿಲ್ಲ” ಎಂದು ಹೇಳಿದರು.

Advertisements

” ಅವರು ಮೀಸಲಾತಿಯನ್ನು ತೆಗೆದುಹಾಕುತ್ತೇವೆ ಎಂದು ಹೇಳುತ್ತಾರೆ. ನಾನು ಈಗಲೇ ಭರವಸೆ ನೀಡುತ್ತಿದ್ದೇನೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಮೀಸಲಾತಿಯ 50% ಮಿತಿಯನ್ನು ತೆಗೆದು, ಮೀಸಲಾತಿಯ್ನು ಹೆಚ್ಚಿಸುತ್ತೇವೆ. ಬಡವರು, ಹಿಂದುಳಿದವರು, ದಲಿತರು, ಆದಿವಾಸಿಗಳಿಗೆ ಅಗತ್ಯವಿರುವಷ್ಟು ಮೀಸಲಾತಿ ನೀಡುತ್ತೇವೆ,’’ ಎಂದು ರಾಹುಲ್ ಭರವಸೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ, ‘ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ನೀಡುತ್ತದೆ’ ಎಂದು ಆರೋಪಿಸುತ್ತಿದೆ. ಈ ಆರೋಪವನ್ನು ಕಾಂಗ್ರೆಸ್ ನಿರಾಕರಿಸಿದೆ.

ಆದಿವಾಸಿಗಳ ಮೇಲಿನ ದೌರ್ಜನ್ಯಗಳ ಬಗ್ಗೆ ಮಾಧ್ಯಮಗಳು ಸುದ್ದಿ ಮಾಡದೇ ಇರುವ ಬಗ್ಗೆ ಮಾತನಾಡಿದ ರಾಹುಲ್, “ನಿಮ್ಮ (ಆದಿವಾಸಿಗಳು) ಮಕ್ಕಳ ಮೇಲೆ ಅತ್ಯಾಚಾರ ಎಸಗಲಾಗಿದೆ. ನಿಮ್ಮ ಭೂಮಿ ಕಿತ್ತುಕೊಳ್ಳಲಾಗಿದೆ. ಆದರೆ ಮಾಧ್ಯಮಗಳು ವರದಿ ಮಾಡುವುದಿಲ್ಲ. ಯಾಕೆಂದರೆ, ಈ ಮಾಧ್ಯಮ ಸಂಸ್ಥೆಗಳಲ್ಲಿ ಆದಿವಾಸಿಗಳಿಲ್ಲ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X