ಖಲಿಸ್ತಾನ್ ಪರ ಹಣ ಸಹಾಯ ಆರೋಪ: ಕೇಜ್ರಿವಾಲ್ ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸ್ಸು

Date:

Advertisements

ಅಮೆರಿಕ ಮೂಲದ ನಿಷೇಧಿತ ಖಲಿಸ್ತಾನ್‌ ಗುಂಪಿನ ‘ಸಿಖ್ಖರಿಗೆ ನ್ಯಾಯ’ ಚಳುವಳಿಯ ಸಂಘಟನೆಯಿಂದ ಹಣಕಾಸು ನೆರವು ಸ್ವೀಕರಿಸಿದ ಸಿಎಂ ಅರವಿಂದ್‌ ಕೇಜ್ರಿವಾಲ್ ಹಾಗೂ ದೆಹಲಿ ಎಎಪಿ ಸರ್ಕಾರದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ನಡೆಸುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಶಿಫಾರಸ್ಸು ಮಾಡಿದ್ದಾರೆ.

1993 ದೆಹಲಿ ಸ್ಫೋಟಗಳ ಆರೋಪಿ ಹಾಗೂ ಭಯೋತ್ಪಾದಕ ದೇವೇಂದ್ರ ಪಾಲ್‌ ಬುಲ್ಲರ್ ಬಿಡುಗಡೆ ಹಾಗೂ ಖಲಿಸ್ತಾನ ಪರ ಭಾವನೆಗಳನ್ನು ಪ್ರತಿಪಾದಿಸಲು ಖಲಿಸ್ತಾನ್‌ ಪರ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ ಹಣ ಸ್ವೀಕರಿಸಿರುವ ಬಗ್ಗೆ ಸಕ್ಸೇನಾ ಅವರು ದೂರು ಸ್ವೀಕರಿಸಿದ್ದರು.

ಅರವಿಂದ್‌ ಕೇಜ್ರಿವಾಲ್ ಅವರು ನಿಷೇಧಿತ ಗುಂಪುಗಳಿಂದ ರಾಜಕೀಯ ಹಣ ಸಹಾಯ ಸಂಬಂಧ ದೂರು ನೀಡಲಾಗಿದೆ. ದೂರುದಾರರು ಸೇರಿಸಿರುವ ವಿದ್ಯುನ್ಯಾನ ಪುರಾವೆಗಳಿಗೆ ಫಾರೆನ್ಸಿಕ್ ಪರೀಕ್ಷೆ ಒಳಗೊಂಡ ತನಿಖೆಯ ಅಗತ್ಯವಿದೆ ಎಂದು ಲೆಫ್ಟಿನೆಂಟ್ ಗನರ್ನರ್ ತಿಳಿಸಿದ್ದಾರೆ.

Advertisements

ಕೇಜ್ರಿವಾಲ್ ಅವರು 2014ರ ಜನವರಿಯಲ್ಲಿ ಇಕ್ಬಾಲ್‌ ಸಿಂಗ್‌ ಎಂಬುವವರಿಗೆ ಬರೆದಿದ್ದ ಪತ್ರ ಹಾಗೂ ದೇವೇಂದ್ರ ಪಾಲ್‌ ಬುಲ್ಲರ್ ಎಂಬುವವರನ್ನು ಬಿಡುಗಡೆ ಕೋರಿ ಎಎಪಿ ಸರ್ಕಾರ ರಾಷ್ಟ್ರಪತಿಗೆ ಶಿಫಾರಸ್ಸು ಒಳಗೊಂಡ ವಿಷಯಗಳ ಬಗ್ಗೆ ತನಿಖೆ ಕೈಗೊಳ್ಳುವಂತೆ ಲೆಫ್ಟಿನೆಂಟ್ ಗವರ್ನರ್ ಅವರು ಗೃಹ ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜ್ವಲ್ ಪ್ರಕರಣ, ಒಕ್ಕಲಿಗರ ನಾಯಕತ್ವ ಮತ್ತು ಮನುಷ್ಯತ್ವ

ಬುಲ್ಲರ್ ಬಿಡುಗಡೆ ಸಂಬಂಧ ಇಕ್ಬಾಲ್‌ ಸಿಂಗ್‌ ಜಂತರ್‌ ಮಂತರ್‌ನಲ್ಲಿ ಉಪವಾಸ ಕುಳಿತ್ತಿದ್ದರು.  ಆಗ ಉಪವಾಸ ನಿಲ್ಲಿಸುವಂತೆ ಕೇಜ್ರಿವಾಲ್‌ ಪತ್ರ ಬರೆದಿದ್ದರು ಎಂದು ಸಕ್ಸೇನಾ ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದು, ಏಪ್ರಿಲ್ 1ರಿಂದ ತಿಹಾರ್‌ ಸೆರೆಮನೆಯಲ್ಲಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X