ದುರಭ್ಯಾಸ ಪ್ರಶ್ನಿಸಿದ್ದಕ್ಕೆ ಪತಿಯ ಗುಪ್ತಾಂಗಕ್ಕೆ ಸಿಗರೇಟ್‌ನಿಂದ ಚಿತ್ರಹಿಂಸೆ ನೀಡಿದ ಪತ್ನಿ: ವಿಡಿಯೋ ವೈರಲ್ ಬಳಿಕ ಬಂಧನ

Date:

Advertisements

ಮದ್ಯ ಹಾಗೂ ಸಿಗರೇಟ್‌ನ ಚಟ ಹೊಂದಿದ್ದ ಪತ್ನಿಯನ್ನು ಪತಿಯೋರ್ವ ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಪತ್ನಿ, ಪತಿಯನ್ನು ಕಟ್ಟಿ ಹಾಕಿ ಚಿತ್ರಹಿಂಸೆ ಕೊಟ್ಟ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದಿಂದ ವರದಿಯಾಗಿದೆ.

ಉತ್ತರ ಪ್ರದೇಶ ಸಿಯೋಹರಾ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ವಿಡಿಯೋ ವೈರಲಾದ ಬಳಿಕ ತಪ್ಪಿತಸ್ಥ ಮಹಿಳೆಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ.

ಬಂಧಿತ ಮಹಿಳೆಯನ್ನು ಮೆಹರ್‌ ಜಹಾನ್(30) ಎಂದು ಗುರುತಿಸಲಾಗಿದೆ. ಪತ್ನಿಯ ಚಿತ್ರಹಿಂಸೆಯಿಂದ ನಲುಗಿದ ಪತಿ ಮನ್ನಾನ್ ಝೈದಿ ಎಂಬಾತನನ್ನು ಸದ್ಯ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisements

ಏನಿದು ಘಟನೆ?

ಮೆಹರ್‌ ಜಹಾನ್ ಹಾಗೂ ಮನ್ನಾನ್ ಝೈದಿ ಪರಸ್ಪರ ಪ್ರೀತಿಸುತ್ತಿದ್ದರು. 2023ರ ನವೆಂಬರ್ 17ರಂದು ಉತ್ತರ ಪ್ರದೇಶದ ಬಿಜನೋರ್‌ನಲ್ಲಿ ವಿವಾಹವಾಗಿದ್ದರು. ಮದುವೆಯ ಬಳಿಕ ಕೌಟುಂಬಿಕ ಕಲಹದಿಂದಾಗಿ ಬೇರೆಯೇ ಮನೆ ಮಾಡಿಕೊಂಡು, ವಾಸವಾಗಿದ್ದರು.

ಇವರಿಬ್ಬರ ದಾಂಪತ್ಯದ ನಡುವೆ ಬಿರುಕು ಮೂಡಿದ ಬಳಿಕ ಮೆಹರ್‌ ಮದ್ಯಪಾನ ಹಾಗೂ ಸಿಗರೇಟ್‌ ಸೇದಲು ಆರಂಭಿಸಿದ್ದಾಳೆ. ಈ ದುರಭ್ಯಾಸವನ್ನು ನಿಲ್ಲಿಸಬೇಕು ಎಂದು ಗಂಡ ಬುದ್ಧಿಮಾತು ಹೇಳಿದ್ದರಿಂದ ಕೋಪಗೊಂಡ ಪತ್ನಿ, ನಿನ್ನ ಮೇಲೆ ವರದಕ್ಷಿಣೆ ಕಿರುಕುಳದ ಸುಳ್ಳು ಆರೋಪ ಹೊರಿಸಿ, ಜೈಲಿಗೆ ಕಳುಹಿಸುವುದಾಗಿ ಬೆದರಿಸಿದ್ದಾರೆ.

ಇದರಿಂದ ಸುಮ್ಮನಾಗಿದ್ದರೂ ಮತ್ತೆ ಮತ್ತೆ ದುರಾಭ್ಯಾಸವನ್ನು ನಿಲ್ಲಿಸಿರಲಿಲ್ಲ. ಈ ಮಧ್ಯೆ ಪತ್ನಿಯಿಂದಲೇ ತನಗೆ ಜೀವ ಬೆದರಿಕೆ ಇರುವುದನ್ನು ಅರಿತಿದ್ದ ಗಂಡ, ಆಕೆಗೆ ಗೊತ್ತಾಗದಂತೆ ಮನೆಯಲ್ಲಿ ಸಿಸಿಟಿವಿ ಅಳವಡಿಸಿದ್ದಾನೆ. ಈ ನಡುವೆ ಗಂಡ ಮತ್ತೆ ಬುದ್ಧಿಮಾತು ಹೇಳಿದ್ದಕ್ಕೆ, ದಂಪತಿಗಳ ನಡುವೆ ಜಗಳವಾಗಿದೆ.

ಈ ನಡುವೆ ಗಂಡನಿಗೆ ಹಾಲಿನಲ್ಲಿ ಮತ್ತು ಬರುವ ಔಷಧಿ ನೀಡಿದ ಆರೋಪಿ ಪತ್ನಿ, ಪ್ರಜ್ಞೆ ತಪ್ಪಿದ ಬಳಿಕ ಆತನ ಎರಡೂ ಕೈಗಳನ್ನು ಕಟ್ಟಿ ಹಾಕಿದ್ದಾಳೆ. ಆ ಬಳಿಕ ಗುಪ್ತಾಂಗಕ್ಕೆ ಸಿಗರೇಟ್‌ನಿಂದ ಚಿತ್ರಹಿಂಸೆ ನೀಡಿದ್ದಾಳೆ. ಈ ಎಲ್ಲ ಬೆಳವಣಿಗೆಯು ಗಂಡ ಮನೆಯಲ್ಲಿ ಹಾಕಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ಬಳಿಕ ಈ ವಿಡಿಯೋವನ್ನು ಆಧಾರವಾಗಿರಿಸಿ, ಗಂಡ ಪೊಲೀಸರಿಗೆ ದೂರು ನೀಡಿದ್ದಾನೆ.

ದೂರಿನಲ್ಲಿ, “ಪತ್ನಿ ಮೆಹರ್ ತನ್ನನ್ನು ದೈಹಿಕವಾಗಿ ನಿಂದಿಸಿದ್ದಾಳೆ. ತನ್ನ ಮೇಲೆ ಸುಳ್ಳು ಆರೋಪ ಹೊರಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ತನ್ನ ಖಾಸಗಿ ಅಂಗಗಳನ್ನು ಸಿಗರೇಟಿನಿಂದ ಸುಡುವ ಮುನ್ನ ನನ್ನ ಕೈಕಾಲುಗಳನ್ನು ಕಟ್ಟಿ ಹಾಕಿದ್ದಾಳೆ” ಎಂದು ಆರೋಪಿಸಿದ್ದಾನೆ.

ಪತಿ ದೂರು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸಲ್ಲಿಸಿದ ನಂತರ ಸಿಯೋಹರಾ ಜಿಲ್ಲಾ ಪೊಲೀಸರು ಕ್ರಮ ಕೈಗೊಂಡಿದ್ದು, ಭಾನುವಾರ ಮಹಿಳೆಯನ್ನು ಬಂಧಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯ ವಿರುದ್ಧ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್‌ ದಾಖಲಿಸಿಕೊಂಡಿದ್ದಾರೆ ಎಂದು ಎಸ್‌ಪಿ ಪೂರ್ವ ಧರಂಪಾಲ್ ಸಿಂಗ್ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X