ಐಪಿಎಲ್ | ಸೂರ್ಯ ಕುಮಾರ್ ಶತಕದಾಟ: ಮುಂಬೈ ವಿರುದ್ಧ ಹೈದರಾಬಾದ್‌ಗೆ ಸೋಲು: ಪ್ಲೇ-ಆಫ್ ಕನಸು ಭಗ್ನ?

Date:

Advertisements

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಐಪಿಎಲ್‌ನ 55ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೂರ್ಯ ಕುಮಾರ್ ಯಾದವ್ ಅವರ ಶತಕದಾಟದ ನೆರವಿನಿಂದ ಮುಂಬೈ ಇಂಡಿಯನ್ಸ್‌ ತಂಡವು ಭರ್ಜರಿಯಾಗಿ ಸೋಲಿಸಿದೆ.

ಹೈದರಾಬಾದ್‌ ವಿರುದ್ಧ ಸೂರ್ಯಕುಮಾರ್‌ ಯಾದವ್‌ ಅಬ್ಬರದ ಶತಕ ಸಿಡಿಸಿ ಮುಂಬೈಗೆ ಗೆಲುವು ತಂದು ಕೊಟ್ಟರು. ಹೀಗಾಗಿ ಹೈದರಾಬಾದ್‌ ನೀಡಿದ 174 ರನ್‌ ಗುರಿಯನ್ನು ಬೆನ್ನಟ್ಟಿದ್ದ‌ ಮುಂಬೈ ಕೇವಲ 3 ವಿಕೆಟ್‌ಗಳನ್ನು ಕಳೆದುಕೊಂಡು 17.2 ಓವರ್‌ಗಳಲ್ಲಿ ಜಯ ದಾಖಲಿಸಿತು.


ಹೈದರಾಬಾದ್‌ ನೀಡಿದ್ದ 174 ರನ್ ಗುರಿಯನ್ನು ಬೆನ್ನಟ್ಟಲು ಪ್ರಾರಂಭಿಸಿದಾಗ ಆರಂಭದಲ್ಲಿ ಮುಂಬೈ ಇಂಡಿಯನ್ಸ್‌ ಎಡವಿತ್ತು.

Advertisements

ಮುಂಬೈ ಪರ ಆರಂಭಿಕ ಬ್ಯಾಟರ್ ಇಶಾನ್‌ ಕಿಶನ್‌ 9 ರನ್‌ಗಳಿಸಿ ಮಾರ್ಕೊ ಜಾನ್ಸೆನ್ ಬೌಲಿಂಗ್‌ನಲ್ಲಿ ಔಟಾದರೆ, ಆ ಬಳಿಕ ಮಾಜಿ ನಾಯಕ ರೋಹಿತ್‌ ಶರ್ಮಾ ಕೂಡ ಕೇವಲ 5 ರನ್‌ಗೆ ಪ್ಯಾಟ್ ಕಮಿನ್ಸ್ ಬೌಲಿಂಗ್‌ನಲ್ಲಿ ವಿಕೆಟ್‌ ಕಳೆದುಕೊಂಡರು.

ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ನಡೆಸಲು ಬಂದ ನಮನ್ ಧೀರ್ ಕೂಡ ಶೂನ್ಯಕ್ಕೆ ಭುವನೇಶ್ವರ್ ಕುಮಾರ್ ಬೌಲಿಂಗ್‌ನಲ್ಲಿ ಔಟ್‌ ಆಗಿ ನಿರಾಸೆ ಮೂಡಿಸಿದರು. ಈ ಹಂತದಲ್ಲಿ ಮುಂಬೈ 31 ರನ್‌ಗಳಿಗೆ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ವೇಳೆ ಒಂದಾದ ಮುಂಬೈನ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಮತ್ತು ಎಡಗೈ ಬ್ಯಾಟರ್ ತಿಲಕ್ ವರ್ಮಾ ಹೈದರಾಬಾದ್‌ ಬೌಲರ್‌ಗಳನ್ನು ಕಾಡಲು ಶುರುವಿಟ್ಟರು.

ಸೂರ್ಯಕುಮಾರ್‌ ಯಾದವ್‌, ತಾನು ಎದುರಿಸಿದ 51 ಎಸೆತಗಳಲ್ಲಿ 12 ಬೌಂಡರಿ ಮತ್ತು 6 ಸಿಕ್ಸರ್‌ ನೆರವಿನಿಂದ 102* ಶತಕ ಹೊಡೆದು ಸಂಭ್ರಮಿಸಿದರು. ಇನ್ನೊಂದೆಡೆ ಸೂರ್ಯಕುಮಾರ್‌ ಯಾದವ್‌ ಅವರಿಗೆ ಸಾಥ್‌ ನೀಡಿದ್ದ ತಿಲಕ್‌ ವರ್ಮಾ ಅಜೇಯ 37 ರನ್‌ ಹೊಡೆದು ಮುಂಬೈ ಗೆಲುವಿಗೆ ಶ್ರಮವಹಿಸಿದರು. ಇವರಿಬ್ಬರ ಈ ಜೋಡಿಯು ಮುರಿಯದ ನಾಲ್ಕನೇ ವಿಕೆಟ್‌ಗೆ 143 ರನ್‌ಗಳ ಬೃಹತ್ ಜೊತೆಯಾಟ ನಡೆಸಿದರು.

ಹೈದರಾಬಾದ್‌ ಪರ ಮಾರ್ಕೊ ಜಾನ್ಸೆನ್, ಪ್ಯಾಟ್ ಕಮಿನ್ಸ್ ಮತ್ತು ಭುವನೇಶ್ವರ್ ಕುಮಾರ್ ತಲಾ 1 ವಿಕೆಟ್ ಪಡೆದರು.

ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು, ಹೈದರಾಬಾದ್ ವಿರುದ್ಧ ಕಳೆದ ಪಂದ್ಯದ ಸೋಲಿಗೆ ಸೇಡು ತೀರಿಸಿತು.

ಈವರೆಗೆ ಒಟ್ಟು 11 ಪಂದ್ಯಗಳನ್ನು ಆಡಿರುವ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಹೈದರಾಬಾದ್ ತಂಡವು, 6 ಗೆಲುವು ಹಾಗೂ 5 ಸೋಲಿನೊಂದಿಗೆ 4ನೇ ಸ್ಥಾನದಲ್ಲಿದ್ದರೂ ಪ್ಲೇ ಆಫ್‌ಗೆ ತಲುಪುವ ವಿಚಾರದಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಬೆಂಗಳೂರು, ಲಕ್ನೋ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇ ಆಫ್‌ಗೆ ಏರುವ ಕನಸು ಕಾಣುತ್ತಿದೆ. ಆದರೆ ಯಾರು ಪ್ರವೇಶಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X