ಕಳಪೆ ಶಿಕ್ಷಣ ವ್ಯವಸ್ಥೆಯಿಂದ ಮಕ್ಕಳ ಭವಿಷ್ಯವನ್ನು ಸರ್ಕಾರ ಅಂಧಕಾರಕ್ಕೆ ತಳ್ಳಿದೆ; ಎಎಪಿ ಆರೋಪ

Date:

Advertisements
  • ದೆಹಲಿಯಲ್ಲಿ 2021ರಲ್ಲಿ 99.96%ರಷ್ಟು ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಬಂದಿದೆ
  • ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ 63.63% ಪಿಯುಸಿ ಫಲಿತಾಂಶ ಬಂದಿದೆ

ಸರ್ಕಾರದ ಕಳಪೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯಿಂದಾಗಿ ಪಿಯುಸಿ ಮಕ್ಕಳ ಭವಿಷ್ಯವನ್ನು ಸರ್ಕಾರ ಅಂಧಕಾರಕ್ಕೆ ತಳ್ಳಿದೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ.

ಬೆಂಗಳೂರಿನ ಎಎಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಎಎಪಿ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ, “ಕರ್ನಾಟಕದಲ್ಲಿ ಪಿಯುಸಿ ಫಲಿತಾಂಶ ಬಂದಿದೆ. ಖಾಸಗಿ ಶಾಲೆಗಳಲ್ಲಿ 76.67% ಫಲಿತಾಂಶ, ಸರ್ಕಾರಿ ಶಾಲೆಗಳಲ್ಲಿ 63.63% ಫಲಿತಾಂಶ ಬಂದಿದೆ. ಖಾಸಗಿ ಮತ್ತು ಸರ್ಕಾರಿ ಶಾಲೆಗಳ ನಡುವೆ ಹೋಲಿಕೆ ಮಾಡುವುದು ತುಂಬಾ ಅವಶ್ಯಕ. ಏಕೆಂದರೆ, ಎಎಪಿ ನಿಂತಿರುವುದೇ ಸರ್ಕಾರಿ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಯ ವಿಚಾರದ ಮೇಲೆ” ಎಂದರು.

“ಕಳೆದ ಕೊವಿಡ್ ಸಮಯದಲ್ಲಿ ಎಲ್ಲ ರಾಜ್ಯದಲ್ಲೂ ಮಕ್ಕಳನ್ನ ತೇರ್ಗಡೆ ಮಾಡಲಾಗಿತ್ತು. ಆದರೆ, ದೆಹಲಿಯಲ್ಲಿ 2021ರಲ್ಲಿ 99.96% ರಷ್ಟು ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಬಂದಿದೆ. ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ 63.63% ಪಿಯುಸಿ ಫಲಿತಾಂಶ ಬಂದಿದೆ” ಎಂದು ಹೇಳಿದರು.

Advertisements

“ದೆಹಲಿಯಲ್ಲಿ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳ ಅಂಕಗಳೇ ಹೆಚ್ಚಾಗಿವೆ. ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳಾಗಿ ಮಾಡಬಹುದು. ಬೆಂಗಳೂರು ದಕ್ಷಿಣ ವಿಭಾಗದ ಸಂಸದ ‘ಪಂಚರ್ ಸೂರ್ಯ’ (ತೇಜಸ್ವಿ ಸೂರ್ಯ) ಅವರು ಈ ಹಿಂದೆ ಪಂಚರ್ ಹಾಕುವವರು ಏನ್ರಿ ಮಾಡ್ತಾರೆ ಎಂದಿದ್ದರು. ಆದರೆ, ನಿನ್ನೆ ಬಂದಿರುವ ಫಲಿತಾಂಶದಲ್ಲಿ ಅವರದೇ ಕ್ಷೇತ್ರದ ತಬಸುಮ್ ಶೇಖ್ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ. ಕನಿಷ್ಠ ಪಕ್ಷ ಅವರಿಗೆ ಮಾನವೀಯತೆ ಇದ್ದರೆ, ಅವರನ್ನ ಭೇಟಿ ಮಾಡಿ ಕ್ಷಮೆಯಾಚಿಸಿ, ಶುಭಾಷಯ ತಿಳಿಸಲಿ” ಎಂದು ಬ್ರಿಜೇಶ್‌ ಕಾಳಪ್ಪ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಇನ್ಮುಂದೆ ಬೆಂಗಳೂರಿನ ಆಟೋಗಳಲ್ಲಿ ‘ಸೀಟ್‌ ಬೆಲ್ಟ್‌’: ಪ್ರಯಾಣಿಕರ ಸುರಕ್ಷತೆ ಮೊದಲ ಆದ್ಯತೆ ಎಂದ ರ‍್ಯಾಪಿಡೋ

ಸುದ್ದಿಗೋಷ್ಠಿಯಲ್ಲಿ ಎಎಪಿ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ಹಾಗೂ ಗಂಗಾದರ್ ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X