ಕೇರಳ | ಅಲ್ಪಸಂಖ್ಯಾತರ ಮೇಲಿನ ಸಂಘ ಪರಿವಾರದ ದಾಳಿ ಬಗ್ಗೆ ವ್ಯಾಪಕ ಪ್ರಚಾರಕ್ಕೆ ಕಾಂಗ್ರೆಸ್‌ ಸಿದ್ಧತೆ

Date:

Advertisements
  • ಕೇರಳ ರಾಜ್ಯದಲ್ಲಿ ಬಿಜೆಪಿಗೆ ಪ್ರತಿಯಾಗಿ ಮುಂದಿನ ತಿಂಗಳು ಯುವ ಸಮ್ಮೇಳನ
  • ರಾಜ್ಯದಲ್ಲಿ ಎಲ್ಲ ಸಮುದಾಯಗಳ ನಾಯಕರ ಜತೆ ಸಭೆ ನಡೆಸಲು ಕಾಂಗ್ರೆಸ್‌ ಚಿಂತನೆ

ಕೇರಳ ರಾಜ್ಯದಲ್ಲಿ ಅಲ್ಪಸಂಖ್ಯಾತರ ಮತಗಳಿಕೆಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ಯೋಜನೆ ರೂಪಿಸುತ್ತಿವೆ.

ಅಲ್ಪಸಂಖ್ಯಾತರ ಮೇಲಿನ ದಾಳಿಯ ಕುರಿತು ಕೇರಳ ರಾಜ್ಯದಲ್ಲಿ ಬೃಹತ್‌ ಅಭಿಯಾನದ ಮೂಲಕ ಪ್ರಚಾರ ನಡೆಸಲು ಕಾಂಗ್ರೆಸ್ ಅಣಿಯಾಗಿದೆ. ಅತ್ತ ಬಿಜೆಪಿ ಕೂಡ ಅಲ್ಪಸಂಖ್ಯಾತರ ಮತಬ್ಯಾಂಕ್‌ಗಾಗಿ ರಾಜ್ಯದಲ್ಲಿ ನ ಅಲ್ಪಸಂಖ್ಯಾತರ ಸಂಪರ್ಕ ಕಾರ್ಯಕ್ರಮ ಯೋಜಿಸಿದೆ.

“ಉತ್ತರ ಭಾರತದಲ್ಲಿ ಕ್ರಿಶ್ಚಿಯನ್‌ ಹಾಗೂ ದಲಿತರ ಮೇಲಿನ ಸಂಘ ಪರಿವಾರದ ದಾಳಿ ಬಹಿರಂಗಪಡಿಸಲು ಕೇರಳದಲ್ಲಿ ಅಭಿಯಾನದ ಮೂಲಕ ವ್ಯಾಪಕ ಪ್ರಚಾರ ನಡೆಸಬೇಕು” ಎಂದು ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ ಗುರುವಾರ (ಏಪ್ರಿಲ್‌ 20) ನಿರ್ಧರಿಸಿದೆ.

Advertisements

ಕೇರಳ ರಾಜ್ಯದಲ್ಲಿ ನಾನಾ ಸಮುದಾಯಗಳೊಂದಿಗೆ ಬಾಂಧವ್ಯ ವೃದ್ಧಿಸಿಕೊಳ್ಳಲು ಕಾಂಗ್ರೆಸ್‌ ಯೋಜಿಸುತ್ತಿದೆ.

ಇದೇ ವೇಳೆ ಬಿಜೆಪಿಯ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಕ್ರಿಶ್ಚಿಯನ್‌ ಸಮುದಾಯ ನಾಯಕರೊಂದಿಗೆ ಸರಣಿ ಸಭೆ ನಡೆಸಿದ್ದಾರೆ. ಕೇರಳ ರಾಜ್ಯಕ್ಕೆ ಸೋಮವಾರ (ಏಪ್ರಿಲ್ 24) ಭೇಟಿ ನೀಡಿದಾಗ ಕೊಚ್ಚಿಯಲ್ಲಿ ಕ್ರಿಶ್ಚಿಯನ್‌ ಬಿಷಪ್‌ಗಳನ್ನು ಭೇಟಿ ಮಾಡುವುದಾಗಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯು ಏಪ್ರಿಲ್‌ 24ರಂದು ಕೊಚ್ಚಿಯಲ್ಲಿ ಯುವ ಸಮ್ಮೇಳನ ಆಯೋಜಿಸಿದೆ. ಈ ವೇಳೆ ಪ್ರಧಾನಿ ಮೋದಿ ಯುವ ಜನತೆಯೊಂದಿಗೆ ಸಂವಾದ ನಡೆಸಲಿದ್ದಾರೆ ಎನ್ನಲಾಗಿದೆ.

ಕೇರಳ ರಾಜ್ಯದಲ್ಲಿ ಪಕ್ಷ ಎಲ್ಲ ಸಮುದಾಯಗಳ ನಾಯಕರೊಂದಿಗೆ ಚರ್ಚೆ ನಡೆಸಲಿದೆ ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಕೆ.ಸುಧಾಕರನ್ ಗುರುವಾರ ಹೇಳಿದ್ದಾರೆ. “ಎಲ್ಲ ಸಮುದಾಯಗಳ ನಾಯಕರ ಜತೆ ಸಭೆ ನಡೆಯಲಿದೆ. ರಾಜ್ಯದಲ್ಲಿ ಇದನ್ನು ಪಕ್ಷದ ದೈನಂದಿನ ಕಾರ್ಯದ ಭಾಗವನ್ನಾಗಿ ಮಾಡಲಾಗುವುದು” ಎಂದು ಅವರು ಹೇಳಿದರು.

“ಕೇರಳ ರಾಜ್ಯದಲ್ಲಿ ನಾವು ಕ್ರಿಶ್ಚಿಯನ್‌ ಅಲ್ಪಸಂಖ್ಯಾತರ ಮೇಲೆ ಬಿಜೆಪಿ ಹಾಗೂ ಸಂಘ ಪರಿವಾರ ಸಂಸ್ಥೆಯಿಂದ ದಾಳಿ ಆಗುವುದನ್ನು ಜನರಿಗೆ ತಿಳಿಸುತ್ತೇವೆ. ಇದಕ್ಕಾಗಿ ರಾಜ್ಯದಲ್ಲಿ ವಸ್ತುಪ್ರದರ್ಶನ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ ಏರ್ಪಾಡು ಮಾಡಲಾಗುವುದು. ಇದಕ್ಕಾಗಿ ಪಕ್ಷದ ವತಿಯಿಂದ ಸಮಿತಿಯೊಂದನ್ನು ರಚಿಸಲಾಗುವುದು” ಎಂದು ಕೆ ಸುಧಾಕರನ್‌ ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಪ್ರಭಾವವನ್ನು ಕ್ಷೀಣಿಸಲು ಬಿಜೆಪಿ ಹಾಗೂ ಸಿಪಿಐ ಒಂದಾಗಿವೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್‌ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಾನನಷ್ಟ ಮೊಕದ್ದಮೆ; ದೋಷಾರೋಪಣೆಗೆ ತಡೆ ಕೋರಿ ಹೈಕೋರ್ಟ್‌ಗೆ ರಾಹುಲ್ ಗಾಂಧಿ ಅರ್ಜಿ

ರಾಜ್ಯ ಕಾಂಗ್ರೆಸ್‌ ಸಹ ಮುಂದಿನ ತಿಂಗಳು ಕೊಚ್ಚಿಯಲ್ಲಿ ಇದೇ ಮಾದರಿಯ ಯುವ ಸಮ್ಮೇಳನ ಆಯೋಜಿಸಲು ಯೋಜಿಸಿದೆ. ಈ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ತಿಳಿಸಿದೆ.

“ಯುವ ಸಮ್ಮೇಳನದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಯುವ ಜನಾಂಗ ವಿರೋಧಿ ನೀತಿಗಳ ಬಗ್ಗೆ ಚರ್ಚಿಸಲಾಗುವುದು. ರಾಹುಲ್‌ ಗಾಂಧಿ ಅವರು ಸಮ್ಮೇಳನದ ನೇತೃತ್ವ ವಹಿಸಲಿದ್ದಾರೆ. ಇದು ಬಿಜೆಪಿಯ ಯುವ ಸಮ್ಮೇಳನಕ್ಕೆ ಪ್ರತಿಯಾಗಿ ಇರಲಿದೆ” ಎಂದು ಕಾಂಗ್ರೆಸ್‌ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಈ ರೀತಿ ಅಲ್ಲೊಂದು ಇಲ್ಲೊಂದು ಸಮ್ಮೇಳನಗಳನ್ನು ಆಯೋಜಿಸಿ ಕಾಂಗ್ರೆಸ್ ಪಕ್ಷ ಕೇರಳದಲ್ಲಿ ಜನರ ಮನ ಗೆದ್ದು ಅಧಿಕಾರಕ್ಕೆ ಬಂದರೆ ಅದೇ ಒಂದು ಸಾಧನೆ…

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X