ಗರ್ಭಿಣಿ ಮೇಲೆ ಅತ್ಯಾಚಾರ – ಹತ್ಯೆ; ಉದ್ವಿಗ್ನಗೊಂಡ ಗ್ರಾಮ ತೊರೆದ ಪುರುಷರು

Date:

Advertisements

ಗರ್ಭಿಣಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ, ಹತ್ಯೆ ಮಾಡಿರುವ ಅಮಾನುಷ ಘಟನೆ ನಡೆದಿದೆ. ಕಾಮಕನ್ನು ಪೊಲೀಸರು ಬಂಧಿಸಿದ್ದು, ಆತನ ಮನೆಯನ್ನು ಕೆಲ ಗ್ರಾಮಸ್ಥರು ಸುಟ್ಟು ಹಾಕಿದ್ದಾರೆ. ಆರೋಪಿ ಮನೆಯನ್ನು ನಾಶ ಮಾಡಿದ ಬಳಿಕ, ತಮ್ಮನ್ನು ಪೊಲೀಸರು ಬಂಧಿಸುತ್ತಾರೆಂದು ಹೆದರಿ ಗ್ರಾಮದ ಸುಮಾರು 20% ಪುರುಷರು ಮೇ 3ರಂಉ ಗ್ರಾಮವನ್ನೇ ತೊರೆದಿದ್ದಾರೆ.

ರಾಜಸ್ಥಾನ ದೌಸಾ ಜಿಲ್ಲೆಯ ಗ್ರಾಮವೊಂದರಲ್ಲಿ ಏಪ್ರಿಲ್ 29ರಂದು 26 ವರ್ಷದ ಗರ್ಭಿಣಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದಾನೆ. ಅದೇ ದಿನ, ಜಗ್ರಾಮ್ ಮೀನಾ ಎಂಬ ಅರೋಪಿಯನ್ನು ಬಂಧಿಸಿದ್ದಾರೆ. ಘಟನೆಯಿಂದಾಗಿ ಒಂದು ವಾರದಿಂದ ಗ್ರಾಮವು ಉದ್ವಿಘ್ನಗೊಂಡಿದೆ.

ಆರೋಪಿಯನ್ನು ಬಂಧಿಸಿದ ಬಳಿಕ, ಮೇ 2ರಂದು ಆತನ ಮನೆ ಬಳಿ ಗ್ರಾಮಸ್ಥರ ಗುಂಪೊಂದು ಜಮಾಯಿಸಿತ್ತು. ಆ ವೇಳೆಗಾಗಲೇ ಆರೋಪಿಯ ಸಂಬಂಧಿಗಳು ಮನೆ ತೊರೆದು ಹೊರಟು ಹೋಗಿದ್ದರು. ಮನೆಯಲ್ಲಿ ಯಾರು ಇಲ್ಲದ್ದನ್ನು ಕಂಡ ಗುಂಪು, ಆರೋಪಿಯ ಮನೆ ಮತ್ತು ಆತನ ಕುಟುಂಬಕ್ಕೆ ಸಂಬಂಧಿಸಿದ್ದ ಅಕ್ಕ-ಪಕ್ಕದ ಎರಡು ಮನೆಗಳನ್ನು ಸುಟ್ಟು ಹಾಕಿದ್ದಾರೆ.

Advertisements

ಬೆಂಕಿ ಹಚ್ಚಿದ ಘಟನೆಯಲ್ಲಿ ಸುಮಾರು 7 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ, ಬಂಧನ ಭೀತಿಯಲ್ಲಿ ಹಲವಾರು ಮಂದಿ ಊರು ತೊರೆದಿದ್ದಾರೆ.

ಗ್ರಾಮಸ್ಥರು ಊರು ತೊರೆದ ಮೂರು ದಿನಗಳ ಬಳಿಕ, ರಾಜಸ್ಥಾನದ ಸಚಿವ ಕಿರೋಡಿ ಲಾಲ್ ಮೀನಾ ಅವರು “ಗ್ರಾಮವನ್ನು ತೊರೆದಿರುವ ಯಾವುದೇ ಅಮಾಯಕರನ್ನು ಬಂಧಿಸುವುದಿಲ್ಲ. ತಪ್ಪಿತಸ್ಥರಿಗೆ ಮಾತ್ರವೇ ಶಿಕ್ಷೆಯಾಗಬೇಕು. ಅಮಾಕರಿಗೆ ತೊಂದರೆ ನೀಡುವುದಿಲ್ಲ” ಎಂದು ಭರವಸೆ ನೀಡಿದ್ದು, ಇದೀಗ, ಹಲವಾರು ಮಂದಿ ಪುರುಷರು ಗ್ರಾಮಕ್ಕೆ ಮರಳುತ್ತಿದ್ದಾರೆ.

“ಆರೋಪಿಯನ್ನು ಬಂಧಿಸಲಾಗಿತ್ತು. ಆದರೆ, ಗ್ರಾಮದ ಗುಂಪೊಂದು ಕಾನೂನನ್ನು ತನ್ನ ಕೈಗೆ ತೆಗೆದುಕೊಂಡಿದ್ದು, ಮನೆಗಳನ್ನು ಸುಟ್ಟುಹಾಕಿತು. ಗುಂಪಿನಲ್ಲಿದ್ದ ಸುಮಾರು ಏಳು ಮಂದಿ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಅವರು ಆಸ್ಪತ್ರೆಯಲ್ಲಿದ್ದಾರೆ” ಎಂದು ದೌಸಾ ಸಹಾಯಕ ಪೊಲೀಸ್ ಅಧೀಕ್ಷಕ ದಿನೇಶ್ ಅಗರ್ವಾಲ್ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X