ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ತುಷಾರ್ ಗಿರಿ ನಾಥ್

Date:

Advertisements

ಬೆಂಗಳೂರಿನಲ್ಲಿ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಂಬಂಧ ಮಂಗಳವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಆಯಾ ವಲಯ ವ್ಯಾಪ್ತಿಯ ಅಧಿಕಾರಿಗಳು ಮಳೆಗಾಲದ ವೇಳೆ ಎಲ್ಲಿಯೂ ಸಮಸ್ಯೆಯಾಗದಂತೆ ಕ್ರಮವಹಿಸಬೇಕು. ಮೆಟ್ರೋ ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಮಳೆ ನೀರಿನ ಸರಾಗ ಹರಿವಿಗೆ ಸಮಸ್ಯೆ ಆಗಲಿದೆಯೇ ಎಂಬುದನ್ನು ಪರಿಶೀಲಿಸಬೇಕು. ಏನಾದರು ಸಮಸ್ಯೆ ಇದ್ದಲ್ಲಿ ಮೆಟ್ರೋ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಸಮಸ್ಯೆಯನ್ನು ಬಗೆಹರಿಸಬೇಕು” ಎಂದು ತಿಳಿಸಿದ್ದಾರೆ.

“ರಾಜಕಾಲುವೆ ಹಾಗೂ ರಸ್ತೆ ಬದಿ ಚರಂಡಿಗಳಲ್ಲಿ ಹೂಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕು. ನಗರದಲ್ಲಿ ಜೋರು ಮಳೆಯಾಗುವ ಸಮಯದಲ್ಲಿ ರಸ್ತೆಗಳ ಮೇಲೆ ಹೆಚ್ಚು ನೀರು ನಿಂತು ವಾಹನಗಳ ಸಂಚಾರಕ್ಕೆ ಹೆಚ್ಚು ಸಮಸ್ಯೆಯಾಗುತ್ತದೆ. ಈ ನಿಟ್ಟಿನಲ್ಲಿ ರಸ್ತೆ ಮೇಲೆ ಬೀಳುವ ನೀರು ಚರಂಡಿಗಳಿಗೆ ಸರಾಗವಾಗಿ ಹರಿದು ಹೋಗುವ ನಿಟ್ಟಿನಲ್ಲಿ ಶೋಲ್ಡರ್ ಡ್ರೈನ್‌ಗಳ ಬಳಿ ಸ್ವಚ್ಚತೆ ಕಾಪಾಡಬೇಕು” ಎಂದು ಸೂಚಿಸಿದರು.

Advertisements

“ಪಾಲಿಕೆ 8 ವಲಯಗಳು ಹಾಗೂ ಕೇಂದ್ರ ಕಚೇರಿ ಸೇರಿದಂತೆ 9 ಶಾಶ್ವತ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಜತೆಗೆ ಮಳೆಗಾಲದ ವೇಳೆ ತಾತ್ಕಾಲಿಕವಾಗಿ 63 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿಕೊಂಡು, ಅಗತ್ಯವಿರುವ ಪಂಪ್‌ಸೆಟ್, ಸಲಕರಣೆಗಳು, ಗ್ಯಾಂಗ್ಸ್‌ಗಳನ್ನು ಸನ್ನದ್ಧ್ದವಾಗಿಟ್ಟುಕೊಳ್ಳಬೇಕು” ಎಂದು ಸೂಚಿಸಿದರು.

“ನಗರದಲ್ಲಿ ಮಳೆಗಾಲದ ವೇಳೆ ಬಿದ್ದಂತಹ ಮರಗಳು ಹಾಗೂ ರೆಂಬೆ/ಕೊಂಬೆಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸುವ ಸಲುವಾಗಿ 28 ತಂಡಗನ್ನು ಕಾರ್ಯನಿರ್ವಹಿಸುತ್ತಿವೆ. ಅದರ ಜತೆಗೆ ಹೆಚ್ಚುವರಿಯಾಗಿ 6 ತಂಡಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಅದಲ್ಲದೇ ರಸ್ತೆಗಳಲ್ಲಿ ಬಿದ್ದಂತಹ ಮರಗಳನ್ನು ಕೂಡಲೇ ತೆರವುಗೊಳಿಸಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ದೃಷ್ಠಿಯಿಂದ ವಲಯವಾರು 8 ದ್ವಿಚಕ್ರ ವಾಹನಗಳ ತಂಡಗಳನ್ನು ನಿಯೋಜನೆ ಮಾಡಿಕೊಳ್ಳಲಾಗುತ್ತದೆ. ಮರ, ರೆಂಬೆ/ಕೊಂಬೆ ತೆರವು ಕಾರ್ಯಾಚರಣೆಗಾಗಿ 8 ಟ್ರ್ಯಾಕ್ಟರ್, 2 ಜೆಸಿಬಿ, 2 ಕ್ರೇನ್, ಅವಶ್ಯಕ ಸಲಕರಣೆಗಳು ಹಾಗೂ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಬಿದ್ದಂತಹ ಮರ, ರೆಂಬೆ-ಕೊಂಬೆಗಳ ವಿಲೇವಾರಿಗಾಗಿ ಆಯಾ ವಲಯಗಳಲ್ಲಿ ಡಂಪಿಂಗ್ ಯಾರ್ಡ್‌ಗಳ ವ್ಯವಸ್ಥೆ ಮಾಡಿಕೊಳ್ಳಬೇಕು” ಎಂದು ಉಪ ಅರಣ್ಯ ಸಂರಕ್ಷಾಧಿಕಾರಿಗೆ ಸೂಚನೆ ನೀಡಿದರು.

“ಮಳೆಗಾಲದ ವೇಳೆ ಪಾಲಿಕೆಯ ಜೊತೆ ಅಗ್ನಿ ಶಾಮಕ ಠಾಣೆ ಹಾಗೂ ಎಸ್.ಡಿ.ಆರ್.ಎಫ್ ಇಲಾಖೆಗಳು ಕೈಜೋಡಿಸಲಿದ್ದಾರೆ. ಈ ಸಂಬಂಧ ಆಯಾ ವಲಯ ಆಯುಕ್ತರು ಅಗ್ನಿ ಶಾಮಕ ಠಾಣೆ ಸ್ಥಳಗಳಿಗೆ ಭೇಟಿ ನೀಡಿ ಸದರಿ ಇಲಾಖೆಗಳ ಜೊತೆ ನಿತ್ಯ ಸಂಪರ್ಕದಲ್ಲಿರಬೇಕು. ತುರ್ತು ಪರಿಸ್ಥಿತಿಯ ವೇಳೆ ಸದರಿ ಇಲಾಖೆಗಳ ಸಹಾಯ ಪಡೆದು ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕೆಂದು” ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಿಟ್ ಕಾಯಿನ್ ಹಗರಣ | ವಿಚಾರಣೆಗೆ ಗೈರಾಗಿದ್ದ ಪ್ರಮುಖ ಆರೋಪಿ ಶ್ರೀಕಿ ಬಂಧನ

“ಸಮಸ್ಯೆಗೆ ಕೂಡಲೆ ಸ್ಪಂದಿಸುವ ನಿಟ್ಟಿನಲ್ಲಿ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಸೇರಿದಂತೆ ಇನ್ನಿತರೆ ಇಲಾಖೆಗಳನ್ನು ಒಳಗೊಂಡಂತೆ ಆಯಾ ವಲಯದ ಉಪ ವಿಭಾಗವಾರು ವ್ಯಾಟ್ಸ್‌ಆಪ್ ಗ್ರೂಪ್‌ಗಳನ್ನು ರಚಿಸಿಕೊಂಡು, ಅದರ ಮೂಲಕ ಬಂದಂತರ ದೂರು, ಸಮಸ್ಯೆಗಳನ್ನು ಕೂಡಲೇ ಇತ್ಯರ್ಥಪಡಿಸಬೇಕು” ಎಂದು ಸೂಚನೆ ನೀಡಿದರು.

“ನಗರದ ರಸ್ತೆ ಬದಿ, ಇಕ್ಕೆಲಗಳಲ್ಲಿ, ರಾಜಕಾಲುವೆಗಳಲ್ಲಿ/ರಾಜಕಾಲುವೆಗಳ ಪಕ್ಕದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಭಗ್ನಾವಶೇಷಗಳನ್ನು ಹಾಕಿದರೆ ದಂಡ ವಿಧಿಸಬೇಕು. ಈ ಸಂಬಂಧ ಕಟ್ಟಡ ಭಗ್ನಾವಶೇಷಗಳ ವಿಲೇವಾರಿ ಮಾಡುವವರ ಮೇಲೆ ಘನತ್ಯಾಜ್ಯ ವಿಭಾಗವು ಸಕ್ರಿಯವಾಗಿ ನಿಗಾವಹಿಸಿ ಅನಧಿಕೃತ ಸ್ಥಳದಲ್ಲಿ ಸುರಿಯದಂತಹವರಿಗೆ ದಂಡ ವಿಧಿಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ವಿಪತ್ತು ನಿರ್ವಹಣೆಯ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್, ಎಲ್ಲ ವಲಯ ಆಯುಕ್ತರು, ಎಲ್ಲ ವಲಯ ಜಂಟಿ ಆಯುಕ್ತರು, ಪ್ರಧಾನ ಅಭಿಯಂತರರು, ಎಲ್ಲ ವಲಯ ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X