ಲೋಕಸಭೆ ಚುನಾವಣೆ| ರಾಜ್ಯದ ಒಟ್ಟು ಮತದಾನ ಪ್ರಮಾಣ ವಿವರ ಇಲ್ಲಿದೆ

Date:

Advertisements

ರಾಜ್ಯದಲ್ಲಿ ಎರಡನೇ ಹಂತದ ಮತದಾನವು ಮಂಗಳವಾರ (ಮೇ 7) ನಡೆದಿದ್ದು, ಶೇ. 70.41ರಷ್ಟು ಮತದಾನ ನಡೆದಿದೆ. ಯುವಕರು ಹೆಚ್ಚಾಗಿ ಉತ್ಸಾಹದಿಂದ ಮತದಾನ ಮಾಡಿದ್ದಾರೆ, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿದ ಯುವಕರಿಗೆ ಅಭಿನಂದನೆ ತಿಳಿಸುವುದಾಗಿ ಎಂದು ಚುನಾವಣಾ ಆಯೋಗ ಹೇಳಿದೆ.

12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿರುವ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಮಂಗಳವಾರ ನಡೆದಿದ್ದರೆ, ಕರ್ನಾಟಕದಲ್ಲಿ ಎರಡನೇ ಹಂತದ ಮತದಾನ ಇದಾಗಿದೆ. ದೇಶದಲ್ಲಿ ಮೂರನೇ ಹಂತದಲ್ಲಿ ಒಟ್ಟಾಗಿ ಶೇ.65ರಷ್ಟು ಮತದಾನವಾಗಿದೆ.


ಲೋಕಸಭೆ ಚುನಾವಣೆ 2024 ಮತದಾನ ವಿವರ

Advertisements

1. ಚಿಕ್ಕೋಡಿ 76.99%
2. ಬೆಳಗಾವಿ 71%
3. ಬಾಗಲಕೋಟೆ 70.1%
4. ಬಿಜಾಪುರ 64.71%
5. ಗುಲ್ಬರ್ಗ 61.73%
6. ರಾಯಚೂರು 61.81%
7. ಬೀದರ್ 63.55%
8. ಕೊಪ್ಪಳ 69.87%
9. ಬಳ್ಳಾರಿ 72.35%
10. ಹಾವೇರಿ 74.75%
11. ಧಾರವಾಡ 72.12%
12. ಉತ್ತರ ಕನ್ನಡ 73.52%
13. ದಾವಣಗೆರೆ 76.23%
14. ಶಿವಮೊಗ್ಗ 76.05%
15. ಉಡುಪಿ ಚಿಕ್ಕಮಗಳೂರು 77.15%
16. ಹಾಸನ 77.68%
17. ದಕ್ಷಿಣ ಕನ್ನಡ 77.56%
18. ಚಿತ್ರದುರ್ಗ 73.30%
19. ತುಮಕೂರು 78.05%
20. ಮಂಡ್ಯ 81.67%
21. ಮೈಸೂರು 70.62%
22. ಚಾಮರಾಜನಗರ 76.81%
23. ಬೆಂಗಳೂರು ಗ್ರಾಮಾಂತರ 68.30%
24. ಬೆಂಗಳೂರು ಉತ್ತರ 54.45%
25. ಬೆಂಗಳೂರು ನಗರ 54.06%
26. ಬೆಂಗಳೂರು ದಕ್ಷಿಣ 53.17%
27. ಚಿಕ್ಕಬಳ್ಳಾಪುರ 77.00%
28. ಕೋಲಾರ 78.27%

ಇದನ್ನು ಓದಿದ್ದೀರಾ?  ಮತದಾನದ ಪ್ರಮಾಣಕ್ಕೂ ಬಿಡುಗಡೆಯಾಗಿರೋ ಡೇಟಾದಲ್ಲಿ ಭಾರೀ ವ್ಯತ್ಯಾಸ

ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಏಪ್ರಿಲ್ 26ರಂದು ನಡೆದಿದ್ದು, 14 ಕ್ಷೇತ್ರಗಳಲ್ಲಿ ಶೇಕಡಾ 69.56 ರಷ್ಟು ಮತದಾನವಾಗಿತ್ತು. ಎರಡನೇ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಶೇ. 70.41ರಷ್ಟು ಮತದಾನವಾಗಿದೆ. ಒಟ್ಟಾರೆಯಾಗಿ ರಾಜ್ಯದಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ಶೇ. 69.96ರಷ್ಟು ಮತದಾನವಾಗಿದೆ. ಮತ ಎಣಿಕೆ ಪ್ರಕ್ರಿಯೆ ಜೂನ್ 4ರಂದು ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X