ಮಧ್ಯಪ್ರದೇಶ | ಚುನಾವಣಾಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಬೆಂಕಿ, ಇವಿಎಂಗಳಿಗೆ ಹಾನಿ

Date:

Advertisements

ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ಮತ್ತು ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಸಾಗಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವು ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಚುನಾವಣಾಧಿಕಾರಿಗಳಿಗೆ ಮತ್ತು ಬಸ್ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಬೆತುಲ್ ಜಿಲ್ಲಾಧಿಕಾರಿ ನರೇಂದ್ರ ಸೂರ್ಯವಂಶಿ ಪಿಟಿಐಗೆ ತಿಳಿಸಿರುವುದಾಗಿ ವರದಿಯಾಗಿದೆ.

ಜಿಲ್ಲೆಯ ಗೋಲಾ ಗ್ರಾಮದ ಬಳಿ ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಬಸ್‌ನಲ್ಲಿ ಕಿಡಿ ಕಾಣಿಸಿಕೊಂಡಿದ್ದು ಅದು ಹಬ್ಬಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಬೀದರ್‌ | ಮಹಾರಾಷ್ಟ್ರದಲ್ಲಿ ಮೀಸಲಾತಿ ಹೋರಾಟ; ರಾಜ್ಯದ ಬಸ್‌ಗೆ ಬೆಂಕಿ

ಬೂತ್ ಸಂಖ್ಯೆ 275, 276, 277, 278, 279 ಮತ್ತು 280 ಸೇರಿದಂತೆ ನಾಲ್ಕು ಮತಗಟ್ಟೆಗಳ ಇವಿಎಂಗಳಿಗೆ ಈ ಬೆಂಕಿ ಅವಘಡದಿಂದಾಗಿ ಹಾನಿಯಾಗಿದೆ. ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿದ್ದು ಬಸ್ ಸಂಪೂರ್ಣರ್ವಾಗಿ ಸುಟ್ಟು ಹೋಗಿದೆ ಎಂದು ವರದಿಯಾಗಿದೆ.

ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಆರು ಮತಗಟ್ಟೆಗಳ ಅಧಿಕಾರಿಗಳು ಮತ್ತು ಆ ಮತಗಟ್ಟೆಗಳ ಇವಿಎಂಗಳು ಇದ್ದವು. ಈ ಪೈಕಿ ನಾಲ್ಕು ಇವಿಎಂಗಳು ಹಾನಿಗೊಳಗಾಗಿವೆ ಮತ್ತು ಎರಡು ಸುರಕ್ಷಿತವಾಗಿವೆ ಎಂದು ಸೂರ್ಯವಂಶಿ ಹೇಳಿದರು.

ಇದನ್ನು ಓದಿದ್ದೀರಾ? ವಿಜಯಪುರ | ಟೈರ್ ಸ್ಪೋಟದಿಂದ ಹೊತ್ತಿದ ಬೆಂಕಿ; ಖಾಸಗಿ ಬಸ್‌ ಭಸ್ಮ

ಘಟನೆಯಿಂದ ಇವಿಎಂಗಳಲ್ಲಿ ದಾಖಲಾದ ಮತ ಎಣಿಕೆಯ ಮೇಲೆ ಪರಿಣಾಮ ಬೀರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ, ಈ ಕುರಿತು ಚುನಾವಣಾ ಆಯೋಗಕ್ಕೆ ವರದಿ ಕಳುಹಿಸಲಾಗುವುದು ಮತ್ತು ಹಾನಿಗೊಳಗಾದ ಮತಗಟ್ಟೆಗಳಲ್ಲಿ ಮರು ಮತದಾನದ ಬಗ್ಗೆ ಚುನಾವಣಾ ಸಂಸ್ಥೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಬೇತುಲ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ.72.65ರಷ್ಟು ಮತದಾನವಾಗಿದೆ ಎಂದು ಚುನಾವಣಾಧಿಕಾರಿಯೊಬ್ಬರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X