ಪಕ್ಷದ ಚಿಹ್ನೆ ಇರುವ ಪೆನ್ನು ಬಳಸಿ ಮತದಾರರಿಗೆ ಬೆದರಿಕೆ ಹಾಕಿದ ಬಿಜೆಪಿ ಏಜೆಂಟರು

Date:

Advertisements

ಬಿಜೆಪಿಯ ಮತಗಟ್ಟೆ ಏಜೆಂಟರು ತಮ್ಮ ಪಕ್ಷದ ಚಿಹ್ನೆ ಇರುವ ಪೆನ್ನು ಬಳಸಿದ್ದು, ಏಜೆಂಟರು ಮತ್ತು ಮತಗಟ್ಟೆ ಅಧಿಕಾರಿಗಳಿಂದ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಯಾಗಿದೆ ಎಂದು ಗುಜರಾತ್ ಕಾಂಗ್ರೆಸ್ ಮಂಗಳವಾರ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಬಿಜೆಪಿ ಕಾರ್ಯಕರ್ತರು ಮತದಾರರಿಗೆ ‘ಬೆದರಿಕೆ’ ಹಾಕುತ್ತಿದ್ದಾರೆ. ಇನ್ನು ಸಮಾಜ ವಿರೋಧಿಗಳು ಕೆಲವು ಪ್ರದೇಶಗಳಲ್ಲಿ ಮತದಾನ ಪ್ರಕ್ರಿಯೆಯನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮತ್ತು ಅದರ ಮುಖಂಡರು ಆರೋಪಿಸಿದ್ದಾರೆ.

“ಬಿಜೆಪಿ ರಾಜಕೀಯ ಪಕ್ಷದ ಚಿಹ್ನೆ ಹೊಂದಿರುವ ಸಾಮಾಗ್ರಿ ಮತ್ತು ಪೆನ್ನುಗಳ ಬಳಕೆಯನ್ನು ಮತಗಟ್ಟೆಯಲ್ಲಿ ಮಾಡಿದೆ. ಈ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಮತಗಟ್ಟೆ ಏಜೆಂಟರು ಮತ್ತು ಅಧಿಕಾರಿಗಳು ಉಲ್ಲಂಘಿಸಿರುವುದು ಕಂಡು ಬಂದಿದೆ. ಪೆನ್ನುಗಳು ಬಿಜೆಪಿಯ ಚಿತ್ರ/ಚಿಹ್ನೆಯನ್ನು ಹೊಂದಿವೆ ಮತ್ತು ಅದನ್ನು ಮತಗಟ್ಟೆಗಳಲ್ಲಿ ಬಳಸಲಾಗುತ್ತಿದೆ” ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದೆ.

Advertisements

ಇದನ್ನು ಓದಿದ್ದೀರಾ?  ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ಪ್ರತಿ ಮತಗಟ್ಟೆಯನ್ನು ಬಿಜೆಪಿಯ ಚಿಹ್ನೆಯ ಧ್ವಜ ಮತ್ತು ತೋರಣಗಳಿಂದ ಅಲಂಕರಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಚುನಾವಣಾ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಲು ಬಿಜೆಪಿ ಹೀಗೆ ಮಾಡಿದೆ ಎಂದು ಕೂಡಾ ದೂರಿನಲ್ಲಿ ತಿಳಿಸಲಾಗಿದೆ.

19 ದೂರುಗಳನ್ನು ದಾಖಲಿಸಿದ ಕಾಂಗ್ರೆಸ್!

ಗುಜರಾತ್‌ನಲ್ಲಿ ಮೇ 7ರಂದು ಲೋಕಸಭೆ ಚುನಾವಣೆ ನಡೆದಿದ್ದು, ಕಾಂಗ್ರೆಸ್‌ ಒಟ್ಟು 19 ದೂರುಗಳನ್ನು ದಾಖಲಿಸಿದೆ. ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಶಕ್ತಿಸಿನ್ಹ ಗೋಹಿಲ್ ದೂರು ದಾಖಲು ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಕಚೇರಿಗಳಲ್ಲಿ ಯುಎಸ್‌ಬಿ, ಪೆನ್‌ಡ್ರೈವ್‌ಗಳ ಬಳಕೆ ನಿಷೇಧಿಸಿದ ಜಮ್ಮು ಕಾಶ್ಮೀರ ಸರ್ಕಾರ

ಸೂಕ್ಷ್ಮವಾಗಿರುವ ಸರ್ಕಾರಿ ಮಾಹಿತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದ...

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

ಅಂಗವಿಕಲರ ಕುರಿತು ಹಾಸ್ಯ: ಕ್ಷಮೆಯಾಚಿಸಲು ಕಾಮಿಡಿಯನ್‌ಗಳಿಗೆ ಸುಪ್ರೀಂ ಸೂಚನೆ

ನೀವು ಮಾತುಗಳನ್ನು ವಾಣಿಜ್ಯೀಕರಣಗೊಳಿಸುವಾಗ ಯಾವುದೇ ಒಂದು ಸಮುದಾಯದ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ...

Download Eedina App Android / iOS

X