ಮತದಾನ ಗೌಪ್ಯತೆ ಕಾಪಾಡದ ಆರೋಪ; ಬಿಜೆಪಿ ಸಂಸದ ಜಿ ಎಂ ಸಿದ್ದೇಶ್ವರ ವಿರುದ್ಧ ದೂರು ದಾಖಲು

Date:

Advertisements

ಮತದಾನ ಗೌಪ್ಯತೆ ಕಾಪಾಡದ ಆರೋಪದ ಮೇಲೆ ದಾವಣಗೆರೆ ಬಿಜೆಪಿ ಸಂಸದ ಜಿ ಎಂ ಸಿದ್ದೇಶ್ವರ ವಿರುದ್ಧ ನಗರದ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ತೋಟಗಾರಿಕೆ ಸಹಾಯಕ ನಿರ್ದೇಶಕ, ಎಫ್ ಎಸ್ ಟಿ ಮುಖ್ಯಸ್ಥ ರಾಜೇಶ್ ಕುಮಾರ್ ಅವರು ಸಂಸದರ ವಿರುದ್ಧ  ಮತದಾನ ಗೌಪ್ಯತೆ ಕಾಪಾಡಿಲ್ಲ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

ದಾವಣಗೆರೆ ಲೋಕಸಭಾ ಕ್ಷೇತ್ರದ 106ನೇ ವೃತ್ತದ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಪಿಎಸ್- 236 ಮಾಗನೂರು ಬಸಪ್ಪ ಪಬ್ಲಿಕ್ ಶಾಲೆಯ ಕೊಠಡಿ ಸಂಖ್ಯೆ- 1ರಲ್ಲಿ ಜಿ ಎಂ ಸಿದ್ದೇಶ್ವರ್ ಅವರು ಮತ ಚಲಾಯಿಸಿದರು. ಇದೇ ವೇಳೆ ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ತಮ್ಮ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರೊಂದಿಗೆ ಹಾಲಿ ಬಿಜೆಪಿ ಸಂಸದರು ಮತದಾನ ಮಾಡಿದರು.

Advertisements

ಮೊದಲು ಮತದಾನ ಮಾಡಿದ ಸಿದ್ದೇಶ್ವರ ಅವರು, ಗಾಯತ್ರಿಯವರ ಮತದಾನ ಆಗುವವರೆಗೆ ಅಲ್ಲೇ (ಮತಯಂತ್ರದ ಪಕ್ಕದಲ್ಲೇ) ಉಳಿದಿದ್ದರು. ಅಲ್ಲದೆ, ಗಾಯಿತ್ರಿ ಸಿದ್ದೇಶ್ವರ್ ರವರು ಮತದಾನ ಮಾಡುತ್ತಿರುವುದನ್ನು ಸಿದ್ದೇಶ್ವರ್ ಜಿಎಂ ರವರು ಪಕ್ಕದಲ್ಲೇ ನಿಂತು ನೋಡಿದರು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಈ ವಿಡಿಯೋ ತುಣುಕು ಜಿಲ್ಲೆಯ ಸಹಾಯಕ ಚುನಾವಣಾಧಿಕಾರಿಗಳಿಗೂ ತಲುಪಿದ್ದು, ಆ ಹಿನ್ನೆಲೆಯಲ್ಲಿ ಅವರು ದೂರು ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.

ಬಳ್ಳಾರಿಯಲ್ಲಿ ಕಾರ್ಪೊರೇಟರ್ ವಿರುದ್ಧ ಕ್ರಮ

ಮೇ 7ರಂದು ನಡೆದಿದ್ದ ಲೋಕಸಭಾ ಚುನಾವಣೆಯ ಮತದಾನದ ಸಂದರ್ಭದಲ್ಲಿ ಮತದಾನದ ಗೌಪ್ಯತೆ ನಿಯಮ ಉಲ್ಲಂಘಿಸಿದ್ದ ಬಳ್ಳಾರಿಯ ಕಾರ್ಪೋರೇಟರ್ ಒಬ್ಬರ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಬಳ್ಳಾರಿ ಪಾಲಿಕೆ 10 ನೇ ವಾರ್ಡ್ ನ ಬಿಜೆಪಿ ಸದಸ್ಯ ಕೋನಂಕಿ ತಿಲಕ್ ಅವರು ಮತದಾನದ ನಂತರ ಮತದಾರರ ಮೇಲೆ ಪ್ರಭಾವ ಬೀರುವಂಥ ಕೆಲಸ ಮಾಡಿದ್ದಾರೆಂಬ ಅವರ ಮೇಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X