ಬೆಂಗಳೂರು | ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಸಿಕ್ಕಿದ್ದ ಹೆಣ್ಣು ಭ್ರೂಣದ ತಾಯಿ ಪತ್ತೆ

Date:

Advertisements

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಮಂಗಳವಾರ 5 ತಿಂಗಳ ಹೆಣ್ಣು ಭ್ರೂಣ ಪತ್ತೆಯಾಗಿತ್ತು. ಆಸ್ಪತ್ರೆ ಸಿಬ್ಬಂದಿ ಮತ್ತು ಪೊಲೀಸರು ಭ್ರೂಣದ ತಾಯಿಯನ್ನು ಪತ್ತೆ ಮಾಡಿದ್ದಾರೆ.

5 ತಿಂಗಳ ಭ್ರೂಣದ ತಾಯಿ 18 ವರ್ಷದ ಯುವತಿಯಾಗಿದ್ದು, ಈಕೆ ಮೂಲತಃ ಕಲಬುರಗಿಯವರು ಎಂದು ತಿಳಿದುಬಂದಿದೆ.

ಯುವತಿ ಯುವಕನೊಬ್ಬನನ್ನು ಪ್ರೀತಿ ಮಾಡುತ್ತಿದ್ದಳು. ನಾಲ್ಕು ತಿಂಗಳ ಹಿಂದೆಯಷ್ಟೇ ಬೆಂಗಳೂರಿನ ನೆಲಮಂಗಲಕ್ಕೆ ಬಂದಿದ್ದ ಆಕೆ, ಬೇಗೂರಿನಲ್ಲಿ ತನ್ನ ತಾಯಿಯೊಂದಿಗೆ ನೆಲೆಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಯುವತಿ ಮದುವೆಗೂ ಮುನ್ನ ಗರ್ಭ ಧರಿಸಿದ್ದಳು. ಹೀಗಾಗಿ, ಮಗುವನ್ನು ತೆಗೆಸಲು ಯುವತಿ ಗರ್ಭನಿರೋಧಕ ಮಾತ್ರೆ ಸೇವಿಸಿ ಹೊಟ್ಟೆ ನೋವಿನಿಂದ ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಳು. ಈ ವೇಳೆ, ಶೌಚಾಲಯಕ್ಕೆ ಹೋದಾಗ ಯುವತಿಗೆ ಗರ್ಭಪಾತವಾಗಿದೆ ಎಂದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರತಿಷ್ಠಿತ ಬ್ರ್ಯಾಂಡ್‌ಗಳ ನಕಲು ದಂಧೆ : ಸಿಸಿಬಿ ಬಲೆಗೆ ಬಿದ್ದ ಗ್ಯಾಂಗ್

ಬಳಿಕ ಯುವತಿ ಹೆಣ್ಣು ಭ್ರೂಣವನ್ನು ಶೌಚಾಲಯದಲ್ಲಿ ಹಾಕಿ ಆಸ್ಪತ್ರೆಯಿಂದ ಹೊರಟು ಹೋಗಿದ್ದಾಳೆ. ಆಸ್ಪತ್ರೆ ಸಿಬ್ಬಂದಿ ಶೌಚಾಲಯಕ್ಕೆ ತೆರಳಿದಾಗ ಭ್ರೂಣ ಪತ್ತೆಯಾಗಿದ್ದು, ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಮೇರೆಗೆ ಆಸ್ಪತ್ರೆಗೆ ಬಂದ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಈ ವೇಳೆ, ಸಿಸಿಟಿವಿ ಕ್ಯಾಮೆರಾ ಆಧರಿಸಿ ಯುವತಿಯನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಯುವತಿಗೆ ಬಾಣಾಂತಿ ಆರೈಕೆ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನೆಲಮಂಗಲ ಟೌನ್ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X