ಸಾಮೂಹಿಕ ‘ಸಿಕ್ ಲೀವ್’ ಹಾಕಿಕೊಂಡ ಸಿಬ್ಬಂದಿಗಳು; 78 ವಿಮಾನಗಳು ರದ್ದು!

Date:

Advertisements

ಸಿಬ್ಬಂದಿಗಳು ಯಾವುದೇ ಸೂಚನೆಯಿಲ್ಲದೆ ಸಾಮೂಹಿಕವಾಗಿ ‘ಸಿಕ್ ಲೀವ್’ (Mass Sick Leave) ತೆಗೆದುಕೊಂಡ ಕಾರಣದಿಂದಾಗಿ ಕನಿಷ್ಠ 78 ಅಂತರರಾಷ್ಟ್ರೀಯ ಮತ್ತು ದೇಶೀಯ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಸಿಬ್ಬಂದಿಗಳು ವೇತನ ಮತ್ತು ಪ್ರೋತ್ಸಾಹಧನದ ವಿಚಾರದಲ್ಲಿ ಅತೃಪ್ತರಾಗಿದ್ದಾರೆಂದು ಶಂಕಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಇಂಡಿಯಾ ಟುಡೆ ಟಿವಿ ವರದಿ ಮಾಡಿದೆ.

ವಿಮಾನ ನಿಲ್ದಾಣಗಳಲ್ಲಿ ಅವ್ಯವಸ್ಥೆಯನ್ನೂ ಸರಿಪಡಿಸಲು ಸಿಬ್ಬಂದಿಗಳು ಬಯಸಿದ್ದರು. ಈಗ ಪ್ರತಿಭಟನೆಯ ಭಾಗವಾಗಿ ಎಲ್ಲ ಸಿಬ್ಬಂದಿಗಳು ಏಕಾಏಕಿ ರಜೆ ಹಾಕಿಕೊಂಡಿದ್ದಾರೆ. ಅಲ್ಲದೆ, ತಮ್ಮ ಫೋನ್‌ಗಳನ್ನು ಕೂಡಾ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

Advertisements

ಇದನ್ನು ಓದಿದ್ದೀರಾ? ಮಂಗಳೂರು | ಬೆಂಗಳೂರಿಗೆ ತೆರಳಬೇಕಿದ್ದ ಏರ್‌ಇಂಡಿಯಾ ವಿಮಾನ ಕೊನೆ ಕ್ಷಣದಲ್ಲಿ ರದ್ದು: ಪ್ರಯಾಣಿಕರಿಂದ ಆಕ್ರೋಶ

“ನಮ್ಮ ಸಂಸ್ಥೆಯ ಸಿಬ್ಬಂದಿಗಳ ಒಂದು ವಿಭಾಗವು ಕೊನೆಯ ಕ್ಷಣದಲ್ಲಿ ಅನಾರೋಗ್ಯಕ್ಕೆ ಒಳಗಾಗಿರುವುದಾಗಿ ತಿಳಿಸಿದೆ. ಇದರಿಂದಾಗಿ ವಿಮಾನ ವಿಳಂಬ ಮತ್ತು ರದ್ದತಿಯಾಗಿದೆ. ನಾವು ಪ್ರಯಾಣಿಕರಿಗೆ ಇದರಿಂದ ಉಂಟಾಗುವ ಅನಾನುಕೂಲತೆಗಳನ್ನು ತಪ್ಪಿಸಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇವೆ. ಜೊತೆಗೆ ಸಿಬ್ಬಂದಿಗಳು ದಿಢೀರ್ ರಜೆ ಹಾಕಲು ಕಾರಣವೇನು ಎಂದು ತಿಳಿಯುವ ಪ್ರಯತ್ನ ಮಾಡುತ್ತೇವೆ” ಎಂದು ಏರ್ ಇಂಡಿಯಾ ಹೇಳಿದೆ.

“ಈ ಅನಿರೀಕ್ಷಿತ ಅಡಚಣೆಗಾಗಿ ನಾವು ನಮ್ಮ ಪ್ರಯಾಣಿಕರಿಗೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಅಡಚಣೆಯು ನಾವು ಒದಗಿಸಲು ಶ್ರಮಿಸುವ ಸೇವೆಯ ಗುಣಮಟ್ಟವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಒತ್ತಿಹೇಳುತ್ತೇವೆ. ಈ ವಿಮಾನ ರದ್ದಾದ ಬಳಿಕ ತೊಂದರೆಗೆ ಒಳಗಾದ ಪ್ರಯಾಣಿಕರಿಗೆ ನಾವು ಪೂರ್ಣ ಮರುಪಾವತಿ ಅಥವಾ ಇನ್ನೊಂದು ದಿನಾಂಕಕ್ಕೆ ಟಿಕೆಟ್ ವರ್ಗಾವಣೆ ಮಾಡುತ್ತೇವೆ” ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ಕೆಟ್ಟಿದ್ಯಾ ಶಿವಮೊಗ್ಗ ಏರ್‌ಪೋರ್ಟ್‌ ನಸೀಬು; ಬೆಂಗಳೂರಿಗೆ ಹಾರಬೇಕಿದ್ದ ವಿಮಾನ ರದ್ದು

ಇನ್ನು 200ಕ್ಕೂ ಹೆಚ್ಚು ಕ್ಯಾಬಿನ್ ಸಿಬ್ಬಂದಿ ಅನಾರೋಗ್ಯ ಕಾರಣ ನೀಡಿ ರಜೆ ಹಾಕಿದ್ದಾರೆ. ಇದರಿಂದಾಗಿ ಕೊಚ್ಚಿ, ಕ್ಯಾಲಿಕಟ್ ಮತ್ತು ಬೆಂಗಳೂರು ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಮಾನ ಹಾರಾಟಕ್ಕೆ ಅಡಚಣೆಯಾಗಿದೆ.

ಈ ಪ್ರತಿಭಟನೆಗೆ ಕಾರಣವೇನು?

ಮೂಲಗಳ ಪ್ರಕಾರ, ಟಾಟಾ ಗ್ರೂಪ್‌ನೊಂದಿಗೆ ವಿಲೀನಗೊಂಡ ನಂತರ ಸಿಬ್ಬಂದಿಗಳನ್ನು ಸಮಾನವಾಗಿ ನೋಡಲಾಗುತ್ತಿಲ್ಲ. ಇಂಟರ್‌ವೀವ್‌ನಲ್ಲಿ ಪಾಸ್ ಆಗಿದ್ದರೂ ಕೂಡಾ ಕೆಲವು ಸಿಬ್ಬಂದಿಗೆ ಕಡಿಮೆ ದರ್ಜೆಯ ಉದ್ಯೋಗ ನೀಡಲಾಗಿದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಸಿಬ್ಬಂದಿ ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X