ಖಾಸಗಿಯವರಿಗೆ ನೀಡಿದ ಗುತ್ತಿಗೆಗಳನ್ನು ಕಾರಣಗಳನ್ನು ನೀಡದೆ ರದ್ದುಗೊಳಿಸಬಾರದು: ಸುಪ್ರೀಂ ಕೋರ್ಟ್

Date:

Advertisements

ಖಾಸಗಿಯವರೆಗೆ ನೀಡಿರುವ ಗುತ್ತಿಗೆಗಳನ್ನು ಕಾರಣಗಳನ್ನು ನೀಡದೆ ರದ್ದುಗೊಳಿಸಬಾರದು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಕಲ್ಕತ್ತಾ ಹೈಕೋರ್ಟ್ ನೀಡಿದ ಆದೇಶದ ವಿರುದ್ಧದ ತೀರ್ಪನ್ನು ಕಾಯ್ದಿರಿಸಿದೆ.

ಮುಖ್ಯ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಹಾಗೂ ಮನೋಜ್‌ ಮಿಶ್ರಾ ಅವರಿದ್ದ ಪೀಠವು, ಒಪ್ಪಂದ ಪಡೆದ ನಂತರ ಬಂಡವಾಳಗಳನ್ನು ಹೂಡುವವರು ರದ್ದುಗೊಳ್ಳುವಾಗ ಸಮಂಜಸವಾದ ಕಾರಣಗಳನ್ನು ನಿರೀಕ್ಷಿಸುತ್ತಾರೆ ಎಂದು ತಿಳಿಸಿತು.

“ಹೇಗೆ ಯಾವುದೇ ಕಾರಣವಿಲ್ಲದೆ ಒಪ್ಪಂದಗಳನ್ನು ರದ್ದುಗೊಳಿಸುತ್ತೀರಿ? ಒಬ್ಬ ಖಾಸಗಿ ವ್ಯಕ್ತಿಯು ಒಪ್ಪಂದದ ಅನುಸಾರವಾಗಿ ಗುತ್ತಿಗೆ ಪಡೆದಿರುತ್ತಾನೆ” ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದರು.

Advertisements

ಪ್ರಕರಣದ ವಾಸ್ತವಗಳನ್ನು ಉಲ್ಲೇಖಿಸಿದ ಮುಖ್ಯ ನ್ಯಾಯಮೂರ್ತಿಗಳು, ಕಾರಣಗಳನ್ನು ನೀಡದೆ ಗುತ್ತಿಗೆಗಳನ್ನು ರದ್ದುಗೊಳಿಸಬಾರದು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

ಮೇ 25, 2023 ರಂದು ಏಕ ಸದಸ್ಯತ್ವದ ಕಲ್ಕತ್ತಾ ಹೈಕೋರ್ಟ್ ಪೀಠ ಕಂಪನಿಯೊಂದಕ್ಕೆ ಯಾವುದೇ ಕಾರಣ ನೀಡದೆ ಒಪ್ಪಂದವನ್ನು ರದ್ದುಗೊಳಿಸಿದ್ದನ್ನು ಎತ್ತಿಹಿಡಿದಿತ್ತು.

ಒಪ್ಪಂದ ಪಡೆದಿದ್ದ ಕಂಪನಿಯು ಕೋಲ್ಕತ್ತಾದ ಪಶ್ಚಿಮ ನಗರದ ಬೈಪಾಸ್‌ ಕೆಳರಸ್ತೆಗಳನ್ನು ನಿರ್ವಹಿಸಲು  ಹತ್ತು ವರ್ಷಗಳವರೆಗೆ ಗುತ್ತಿಗೆ ಪಡೆದುಕೊಂಡಿತ್ತು. ಒಪ್ಪಂದದಂತೆ ಕಂಪನಿಗೆ ಕೆಳರಸ್ತೆಯ ಎರಡು ಭಾಗಗಳಲ್ಲಿ ಜಾಹೀರಾತು ನೀಡಲು ಅನುಮೋದಿಸಲಾಗಿತ್ತು. ಇದಕ್ಕಾಗಿ ಕೆಲ ಕಾಮಗಾರಿ ಕೆಲಸವನ್ನು ನಿರ್ವಹಿಸುವುದು ಅಗತ್ಯವಾಗಿತ್ತು.

ಆದಾಗ್ಯೂ, ಕೋಲ್ಕತ್ತಾ ಮಹಾನಗರ ಅಭಿವೃದ್ಧಿ ಪ್ರಾಧಿಕಾರ(ಕೆಎಂಡಿಎ) ಫೆ.7,2023 ರಂದು ಒಪ್ಪಂದವನ್ನು ರದ್ದುಗೊಳಿಸಿತ್ತು. ಅಲ್ಲದೆ ಇಲ್ಲಿಯವರೆಗೂ ಕಾಮಗಾರಿ ಹಾಗೂ ನಿರ್ವಹಣೆಗಾಗಿ ವೆಚ್ಚ ಮಾಡಿದ್ದ ಹಣ ಹಾಗೂ ಠೇವಣಿಯಿಟ್ಟಿದ್ದ ಪರವಾನಗಿ ಶುಲ್ಕವನ್ನು ಹಿಂತಿರುಗಿಸುವುದಾಗಿ ಕೆಎಂಡಿಎ ತಿಳಿಸಿತ್ತು.

ಕೆಎಂಡಿಎ ಕಾರಣ ತಿಳಿಸದೆ ಒಪ್ಪಂದವನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಅರ್ಜಿದಾರರು ಕೋರ್ಟ್‌ ಮೆಟ್ಟಿಲೇರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X