ಸುದ್ದಿ ವಿವರ | ಬರಲಿದೆ ಗುಲಾಬಿ ಬಣ್ಣ ಲೇಪಿತ ‘ಆಯುಷ್ಮತಿ ಮಹಿಳಾ ಕ್ಲಿನಿಕ್’ ಏನೆಲ್ಲ ಸೌಲಭ್ಯವಿದೆ?

Date:

Advertisements
ಆರ್ಥಿಕವಾಗಿ ಹಿಂದುಳಿದ ವರ್ಗದ ಮಹಿಳೆಯರಿಗೆ, ತುಟ್ಟಿಯಾಗಿರುವ ವೈದ್ಯಕೀಯ ಚಿಕಿತ್ಸೆಯನ್ನು, ಉಚಿತವಾಗಿ ನೀಡುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಏಪ್ರಿಲ್ ವೇಳೆಗೆ ನಗರದ 57 ಪ್ರದೇಶಗಳಲ್ಲಿ ‘ಆಯುಷ್ಮತಿ ಮಹಿಳಾ ಕ್ಲಿನಿಕ್’ ಆರಂಭಿಸುತ್ತಿದೆ… ಯಾವ್ಯಾವ ಚಿಕಿತ್ಸೆಗಳಿರಲಿವೆ ಎಂಬ ಪೂರ್ಣ ವಿವರ ಇಲ್ಲಿದೆ.

ಏನಿದು ಆಯುಷ್ಮತಿ ಮಹಿಳಾ ಕ್ಲಿನಿಕ್?

‘ಆಯುಷ್ಮತಿ ಮಹಿಳಾ ಕ್ಲಿನಿಕ್’ ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳ ಮೇಲೆ ಕೇಂದ್ರೀಕರಿಸುತ್ತವೆ. ಪ್ರತಿ ಅರೋಗ್ಯ ಕೇಂದ್ರದದಲ್ಲಿ ಸ್ತ್ರೀರೋಗತಜ್ಞರು ಇರಲಿದ್ದಾರೆ. ಮಹಿಳೆಯರಿಗೆ ಚಿಕಿತ್ಸೆ ಮತ್ತು ತಪಾಸಣೆಯನ್ನು ನೀಡುತ್ತಾರೆ. ಮಕ್ಕಳಿಂದ ವೃದ್ಧರವರೆಗೆ, ಎಲ್ಲ ವಯೋಮಾನದ ಮಹಿಳೆಯರಿಗೂ ಚಿಕಿತ್ಸೆ ಲಭ್ಯವಾಗಲಿದೆ. ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಕ್ಲಿನಿಕ್‌ ಸೌಲಭ್ಯದ ಫಲಾನುಭವಿಗಳಾಗಬಹುದಾಗಿದೆ.

ಕ್ಲಿನಿಕ್ ತೆರೆಯಲು ಕಾರಣವೇನು?

Advertisements

ಇತ್ತೀಚಿನ ಜೀವನ ಶೈಲಿಯಲ್ಲಿ ಮಹಿಳೆಯರು ಹೆಚ್ಚಾಗಿ ರಕ್ತ ಹೀನತೆಯಿಂದ ಬಳಲುತ್ತಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಆರು ವರ್ಷಗಳಲ್ಲಿ 305 ತಾಯಂದಿರು ಮೃತಪಟ್ಟಿದ್ದರು. ಹೀಗಾಗಿ, ಗರ್ಭಿಣಿಯರಿಗೆ ಆತ್ಮಸ್ಥೈರ್ಯ ತುಂಬುವುದು. ಯಾವೆಲ್ಲ ಆಹಾರ ತಿನ್ನಬೇಕು. ಆರೋಗ್ಯ ಕಾಪಾಡಿಕೊಳ್ಳುವುದು. ಆಗಾಗ್ಗೆ ತಪಾಸಣೆ ಏರ್ಪಾಟು ಮಾಡುವ ಉದ್ಧೇಶದಿಂದ ಚಿಕಿತ್ಸಾಲಯ ಸ್ಥಾಪನೆಯಾಗಲಿದೆ.

ಯಾವೆಲ್ಲ ಚಿಕಿತ್ಸೆ ಇರಲಿದೆ?

ಋತುಚಕ್ರ, ಮಾನಸಿಕ ಆರೋಗ್ಯ, ಸಂತಾನೋತ್ಪತ್ತಿ ನಾಳದ ಸೋಂಕುಗಳು (ಆರ್‌ಟಿಐ) ಅಥವಾ ಲೈಂಗಿಕವಾಗಿ ಹರಡುವ ರೋಗಗಳು, ಹೃದಯ ರಕ್ತನಾಳದ ಕಾಯಿಲೆ, ದೀರ್ಘಕಾಲದ ಕಾಯಿಲೆಗಳು, ಗರ್ಭಿಣಿಯರು ಮತ್ತು ಮಕ್ಕಳು, ಕ್ಯಾನ್ಸರ್ ಮತ್ತು ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ಇತರ ಆರೋಗ್ಯ ಸಮಸ್ಯೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಗರ್ಭಿಣಿಯರಿಗೆ ಅವರ ಆಹಾರ, ಪೋಷಣೆ ಮತ್ತು ವೈಯಕ್ತಿಕ ನೈರ್ಮಲ್ಯದ ಬಗ್ಗೆಯೂ ಸಲಹೆ ನೀಡಲಾಗುತ್ತದೆ. ಇದನ್ನು ಹೊರತುಪಡಿಸಿ ಮಧುಮೇಹ, ರಕ್ತದೊತ್ತಡ ಸಮಸ್ಯೆಗಳಿಗಗೂ ಚಿಕಿತ್ಸೆ ನೀಡಲಾಗುತ್ತದೆ.

ಎಲ್ಲೆಲ್ಲಿ ಆಸ್ಪತ್ರೆ ಸ್ಥಾಪನೆ?

ಆರ್‌ ಆರ್‌ ನಗರ ಸುತ್ತಮುತ್ತಲಿರುವ ಮಲ್ಲತ್ತ್ ಹಳ್ಳಿ, ನಂದಿನಿ ಲೇಔಟ್, ಮತ್ತಿಕೆರೆ, ಹಾರೋಹಳ್ಳಿ ಕೆಂಗೇರಿಯಲ್ಲಿ ಆಯುಷ್ಮತಿ ಕ್ಲಿನಿಕ್ ಇರಲಿದೆ. ಬೊಮ್ಮನ ಹಳ್ಳಿಯ ಸುತ್ತಮುತ್ತ ಪ್ರದೇಶಗಳಾದ ಬೇಗೂರು, ಅರೆಕೆರೆ, ಸಿಂಗಸಂದ್ರ, ಕೋಣನಕುಂಟೆ, ಯಲಚೇನಹಳ್ಳಿ ಬಳಿ ಇರಲಿದೆ. ಮಹದೇವಪುರ ಕಾಡುಗೋಡಿ, ವರ್ತೂರು, ದೊಡ್ಡನೆಕ್ಕುಂದಿ, ಮಾರತ್ ಹಳ್ಳಿ, ವಿಭೂತಿ ಪುರ, ನಾರಾಯಣ ಪುರ, ತಾವರೆಕೆರೆ, ಎನ್‌ ಎಸ್ ಪಾಳ್ಯ, ವಿದ್ಯಾ ಪೀಠ, ವಿಲ್ಸನ್ ಗಾರ್ಡನ್‌, ಯಡಿಯೂರು ಆವಲಹಳ್ಳಿ, ಬಾಪೂಜಿ ನಗರ, ಆಡುಗೋಡಿ, ಯಲಹಂಕ, ಎಂ ಎಸ್ ಪಾಳ್ಯ, ತಣಿಸಂದ್ರ, ಅಮೃತ ಹಳ್ಳಿ, ಕೋಡಿಗೆ ಹಳ್ಳಿ ತಿಂಡ್ಲು ದಾಸರಹಳ್ಳಿ ಮತ್ತಿತ್ತರ ಪ್ರದೇಶಗಳಲ್ಲಿ ಆಯುಷ್ಮತಿ ಕ್ಲಿನಿಕ್‌ಗಳು ಇರಲಿವೆ.

ಅಧಿಕಾರಿಗಳು ಹೇಳೋದೇನು?

“ಈಗಾಗಲೇ ಇರುವಂತಹ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಳಿ, ಲಭ್ಯವಿರುವ ಕಟ್ಟಡಕ್ಕೆ ಗುಲಾಬಿ ಬಣ್ಣ ಬಳಿದು ಮಹಿಳೆಯರಿಗಾಗಿ ಎಂದು ಗುರುತಿಸಲಾಗುತ್ತದೆ. ಎಲ್ಲವು ಗುಲಾಬಿ ಬಣ್ಣದಿಂದ ಕೂಡಿರುತ್ತದೆ. ಮಹಿಳೆಯರಿಗಾಗಿ ವಿಶೇಷಸ್ಥಾನ ಕೊಡುವ ನಿಟ್ಟಿನಲ್ಲಿ ಪ್ರತ್ಯೇಕ ಕ್ಲಿನಿಕ್ ಮಾಡುವ ಆಶಯ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಮಹಿಳೆಯರಲ್ಲಿ ಅಪೌಷ್ಠಿಕತೆ ಇದೆ. ಮಹಿಳೆಯರು ಯಾವುದೇ ಸಮಯದಲ್ಲಿ ಆಸ್ಪತ್ರೆಗೆ ಬಂದರೂ ಸಹ ವೈದ್ಯರು ಲಭ್ಯವಿರುತ್ತಾರೆ. ವೈದ್ಯರು, ನೇತ್ರ ತಜ್ಞರು, ಸ್ತ್ರೀರೋಗ ತಜ್ಞರು ಮತ್ತು ಪ್ರಸೂತಿ ತಜ್ಞರು, ಇಎನ್‌ಟಿ ತಜ್ಞರು, ಮಕ್ಕಳ ತಜ್ಞರು ಮತ್ತು ಚರ್ಮರೋಗ ತಜ್ಞರನ್ನು ಸಲಹಾ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಮೂಲಸೌಕರ್ಯ ಕಲ್ಪಿಸಲು ಸರ್ಕಾರ ಪ್ರತಿ ಕ್ಲಿನಿಕ್‌ಗೆ 1.60 ಲಕ್ಷ ರೂಪಾಯಿ ನೀಡುತ್ತಿದೆ. ವೈದ್ಯರು ಮತ್ತು ಇತರ ಸಿಬ್ಬಂದಿಗೆ ಸರ್ಕಾರದಿಂದ ಗೌರವ ವೇತನ ಮತ್ತು ವೇತನ ನೀಡಲಾಗುವುದು. ವಿಶೇಷ ಮಹಿಳಾ ಚಿಕಿತ್ಸಾಲಯಗಳನ್ನು ಸ್ಥಾಪಿಸಲು ಪಾಲಿಕೆಯು 93 ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ,” ಎಂದು ಈ ದಿನ.ಕಾಮ್‌ನ ಸಂಪರ್ಕಕ್ಕೆ ಸಿಕ್ಕ ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ಈ ಬಗ್ಗೆ ವಿವರಿಸಿದರು.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊರೋನಾ ಸಮಯದಲ್ಲಿ ತಬ್ಲಿಘಿ ಸಭೆ: 70 ಜನರ ವಿರುದ್ಧದ FIR ರದ್ದು; ಕೋರ್ಟ್‌ ಆದೇಶ

ದೇಶದಲ್ಲಿ ಕೊರೋನಾ ಆಕ್ರಮಣ ಆರಂಭವಾಗಿದ್ದ ಸಮಯ 2020ರ ಮಾರ್ಚ್‌ನಲ್ಲಿ ದೆಹಲಿಯಲ್ಲಿ ತಬ್ಲಿಘಿ...

ದಾವಣಗೆರೆ | ಹೃದಯಾಘಾತಕ್ಕೆ ಯುವಕ ಬಲಿ

ದಾವಣಗೆರೆಯ ಉದ್ಯಮಿಯೊಬ್ಬರ ಪುತ್ರ ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ (Heart Attack) ಕುಸಿದು...

ಮಹಿಳೆಯರನ್ನು ಗರ್ಭಕೋಶ ಕ್ಯಾನ್ಸರ್‌ನಿಂದ ರಕ್ಷಿಸಲು ಎಚ್‌ಪಿವಿ ಲಸಿಕೆ ಅತ್ಯಗತ್ಯ: ಡಾ. ಮಂಗಳ

ಮಹಿಳೆಯರಲ್ಲಿ ಗರ್ಭಕೋಶದ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತಿದೆ. ಈ ಸಮಸ್ಯೆಯಿಂದ ರಕ್ಷಣೆ ಪಡೆಯಲು...

ಕೋವಿಡ್ ಲಸಿಕೆಗೂ ಹಠಾತ್ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ: ಆರೋಗ್ಯ ಸಚಿವಾಲಯ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ...

Download Eedina App Android / iOS

X