ಮೋದಿ ಕುರ್ಚಿ ಅಲುಗಾಡುತ್ತಿದೆ, ಅಂಬಾನಿ – ಅದಾನಿಗಳ ವಿರುದ್ಧವೇ ವಾಗ್ದಾಳಿ ಆರಂಭಿಸಿದ್ದಾರೆ: ಖರ್ಗೆ

Date:

Advertisements

ಮೂರು ಹಂತದ ಲೋಕಸಭಾ ಚುನಾವಣೆಗಳು ನಡೆದ ನಂತರ ಪ್ರಧಾನಿ ನರೇಂದ್ರ ಮೋದಿ ಕುರ್ಚಿ ಅಲುಗಾಡುತ್ತಿದ್ದು, ಇವರು ತಮ್ಮ ಸ್ನೇಹಿತರ ವಿರುದ್ಧವೇ ವಾಗ್ದಾಳಿ ಆರಂಭಿಸಿದ್ದಾರೆ. ಇವೆಲ್ಲವೂ ಫಲಿತಾಂಶದ ನಿಜವಾದ ದಿಕ್ಸೂಚಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಈ ಬಗ್ಗೆ ‘ಎಕ್ಸ್‌’ನಲ್ಲಿ ಟ್ವೀಟ್‌ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಕಾಲ ಬದಲಾಗುತ್ತದೆ. ಸ್ನೇಹಿತರು ಸ್ನೇಹಿತರಾಗಿರುವುದಿಲ್ಲ. ಮೂರು ಸುತ್ತಿನ ಲೋಕಸಭಾ ಚುನಾವಣೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ನೇಹಿತರ ವಿರುದ್ಧವೇ ದಾಳಿ ಆರಂಭಿಸಿದ್ದಾರೆ.ಇದು ಮೋದಿಯವರ ಕುರ್ಚಿ ಅಲುಗಾಡುತ್ತಿರುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಇದು ಫಲಿತಾಂಶದ ನಿಜವಾದ ದಿಕ್ಸೂಚಿಯನ್ನು ಸೂಚಿಸುತ್ತದೆ ಎಂದು  ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಪ್ರಚಾರ ಕೈಗೊಂಡಿದ್ದ ಸಂದರ್ಭದಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸನ್ನು ಟೀಕಿಸುವ ಸಂದರ್ಭದಲ್ಲಿ ಅಂಬಾನಿ ಹಾಗೂ ಅದಾನಿ ವಿರುದ್ಧವು ವಾಗ್ದಳಿ ನಡೆಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

“ಚುನಾವಣೆ ಘೋಷಣೆಯಾದಗಿನಿಂದಲೂ ಕಾಂಗ್ರೆಸ್ ಅಂಬಾನಿ –ಅದಾನಿಯನ್ನು ತೆಗಳುವುದನ್ನು ಬಿಟ್ಟಿಲ್ಲ. ನಾನು ತೆಲಂಗಾಣ ಮಣ್ಣಿನ ಜನರನ್ನು ಕೇಳುತ್ತೇನೆ, ಅಂಬಾನಿ-ಅದಾನಿಯಿಂದ ಎಷ್ಟು ಪಡೆದುಕೊಂಡಿದ್ದಾರೆ ಎಂಬುದನ್ನು ಮಹಾರಾಜರು ಘೋಷಿಸಲಿ. ಟೆಂಪೋ ಲೋಡುಗಟ್ಟಲೆ ಹಣ ಕಾಂಗ್ರೆಸಿಗೆ ತಲುಪಿದೆಯಲ್ಲವೆ? ರಾತ್ರೋರಾತ್ರಿ ಒಳ ಒಪ್ಪಂದವಾದ ನಂತರ ಅದಾನಿ ವಿರುದ್ಧ ದಾಳಿ ಮಾಡುವುದನ್ನು ನಿಲ್ಲಿಸಿದ್ದಾರೆ” ಎಂದು ಪ್ರಧಾನಿ ಹೇಳಿದ್ದರು.

“ಖಂಡಿತಾ ಏನೋ ಅಕ್ರಮ ಒಳ ಒಪ್ಪಂದ ನಡೆದಿದೆ. ಐದು ವರ್ಷಗಳಲ್ಲಿ ಅದಾನಿ – ಅಂಬಾನಿಗಳನ್ನು ತೆಗಳುತ್ತಿದ್ದವರು ರಾತ್ರೋ ರಾತ್ರಿ ನಿಲ್ಲಿಸಿದ್ದಾರೆ. ಇದರ ಅರ್ಥ ನೀವು ಲೋಡುಗಟ್ಟಲೆ ಹಣವನ್ನು ಲೂಟಿ ಮಾಡಿದ್ದೀರಿ. ಇದಕ್ಕೆ ನೀವು ದೇಶಕ್ಕೆ ಉತ್ತರಿಸಬೇಕು” ಎಂದು ಪ್ರಧಾನಿ ಹೇಳಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X