ಸಂದೇಶಖಾಲಿ ಪ್ರಕರಣ | ‘ಬಿಜೆಪಿ ಒತ್ತಡದಿಂದ ದೂರು ನೀಡಿದ್ದೆ’; ಟಿಎಂಸಿ ಕಾರ್ಯಕರ್ತನ ವಿರುದ್ಧದ ಕೇಸ್ ವಾಪಸ್ ಪಡೆದ ಮಹಿಳೆ

Date:

Advertisements

ಸಂದೇಶಖಾಲಿ ಪ್ರಕರಣದಲ್ಲಿ ದೂರು ನೀಡಿದ್ದ ಮೂವರು ಮಹಿಳೆಯರ ಪೈಕಿ ಒಬ್ಬರು ಗುರುವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ವಿರುದ್ಧ ದಾಖಲಿಸಿದ್ದ ದೂರನ್ನು ಹಿಂಪಡೆದಿದ್ದಾರೆ.

“ಖಾಲಿ ಪೇಪರ್‌ಗಳಿಗೆ ಸಹಿ ಹಾಕಲು ಮತ್ತು ಅತ್ಯಾಚಾರದ ದೂರು ದಾಖಲಿಸಲು ಬಿಜೆಪಿ ನನಗೆ ಒತ್ತಡ ಹೇರಿತ್ತು” ಎಂದು ಮಹಿಳೆ ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನು ಓದಿದ್ದೀರಾ?  ಸಂದೇಶ್‌ಖಾಲಿಯಲ್ಲಿ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದ ಬಿಜೆಪಿ ನಾಯಕ; ವಿಡಿಯೋ ಹಂಚಿಕೊಂಡ ಟಿಎಂಸಿ

Advertisements

“ಪಿಎಂಎವೈಗೆ ನನ್ನ ಹೆಸರನ್ನು ಸೇರಿಸುವ ನೆಪದಲ್ಲಿ ಅವರು (ಬಿಜೆಪಿ ನಾಯಕರು) ನನ್ನ ಸಹಿಯನ್ನು ಕೇಳಿದರು. ನಂತರ, ಲೈಂಗಿಕ ಕಿರುಕುಳದ ದೂರು ನೀಡಲು ನನ್ನನ್ನು ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು ಮಹಿಳೆ ತಿಳಿಸಿದ್ದಾರೆ.

“ಟಿಎಂಸಿ ಕಚೇರಿಯೊಳಗೆ ನನ್ನ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ. ತಡರಾತ್ರಿ ಪಕ್ಷದ ಕಚೇರಿಗೆ ಬರುವಂತೆ ನನಗೆ ಯಾರೂ ಎಂದಿಗೂ ಒತ್ತಾಯ ಮಾಡಿಲ್ಲ” ಎಂದು ಮಹಿಳೆ ತಿಳಿಸಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇನ್ನು ಸುಳ್ಳು ಆರೋಪಗಳನ್ನು ಹಿಂಪಡೆದ ಬಳಿಕ ತನ್ನ ಮೇಲೆ ಬೆದರಿಕೆ ಹಾಕಲಾಗುತ್ತಿದೆ ಮತ್ತು ಸಾಮಾಜಿಕ ಬಹಿಷ್ಕಾರ ಹಾಕುವ ಬೆದರಿಕೆಯಿದೆ ಎಂದು ಉಲ್ಲೇಖಿಸಿ ಸಂದೇಶಖಾಲಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಹೊಸ ದೂರು ದಾಖಲಿಸಿದ್ದಾರೆ.

ಸಂದೇಶಖಾಲಿ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಅವರ ಕೈವಾಡವಿದೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ ಸ್ಟಿಂಗ್ ಆಪರೇಷನ್ ವಿಡಿಯೋ ಬಹಿರಂಗವಾದ ಬಳಿಕ ಈ ಬೆಳವಣಿಗೆ ಕಂಡುಬಂದಿದೆ.

“ಇಲ್ಲಿ ಯಾವುದೇ ಅತ್ಯಾಚಾರ ಅಥವಾ ಲೈಂಗಿಕ ಕಿರುಕುಳಗಳು ನಡೆದಿಲ್ಲ. ಪಕ್ಷದ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ನಿರ್ದೇಶನದ ಮೇರೆಗೆ ಮಹಿಳೆಯರು ಅಂತಹ ದೂರುಗಳನ್ನು ನೀಡುವಂತೆ ಮನವೊಲಿಸಲಾಗಿದೆ” ಎಂದು ಬಿಜೆಪಿ ನಾಯಕ ಗಂಗಾಧರ್ ಕೋಯಲ್ ಹೇಳಿರುವ ವಿಡಿಯೋ ವೈರಲ್ ಆಗಿದೆ. ಆದರೆ ಬಿಜೆಪಿ ಮತ್ತು ಗಂಗಾಧರ್ ಕೋಯಲ್ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಇದನ್ನು ಓದಿದ್ದೀರಾ?  ಸಂದೇಶಖಾಲಿ ಪ್ರಕರಣದ ಹಿಂದೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ: ಟಿಎಂಸಿ ಆರೋಪ

ಈ ಹಿಂದೆ ಶಹಜಹಾನ್ ಮತ್ತು ಆತನ ಇಬ್ಬರು ಸಹಾಯಕರು ತಮ್ಮ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದರು. ಈ ಪ್ರಕರಣವನ್ನು ಮುಂದಿಟ್ಟುಕೊಂಡೇ ಸದ್ಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಾರಕ್ಕೆ ಇಳಿದಿದೆ. ಸಂದೇಶಖಾಲಿ ಸಂತ್ರಸ್ತೆಗೆ ಬಿಜೆಪಿ ಟಿಕೆಟ್ ಕೂಡಾ ನೀಡಿದೆ.

ಆದರೆ ಈಗ ಸ್ಟಿಂಗ್ ಆಪರೇಷನ್‌ನಿಂದಾಗಿ ಅಚ್ಚರಿಯ ಮಾಹಿತಿ ಬಹಿರಂಗವಾಗಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಸುವೇಂದು ಅಧಿಕಾರಿ ಮತ್ತು ಇತರರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X