ಮತ ಚಲಾವಣೆಯ ಅಂಕಿಅಂಶ ಪ್ರಕಟಕ್ಕಾಗಿ ‘ಇಂಡಿಯಾ’ ಒಕ್ಕೂಟದ ನಾಯಕರಿಂದ ಚುನಾವಣಾ ಆಯೋಗದ ಭೇಟಿ

Date:

Advertisements

ಆದಷ್ಟು ಶೀಘ್ರ ಮೂರು ಹಂತಗಳ ಲೋಕಸಭಾ ಚುನಾವಣೆಯ ಮತದಾನದ ನಿಖರವಾದ ಅಂಕಿಅಂಶಗಳನ್ನು ಪ್ರಕಟಿಸಲು ಹಾಗೂ ಎನ್‌ಡಿಎ ಒಕ್ಕೂಟ ಚುನಾವಣಾ ಪ್ರಚಾರದಲ್ಲಿ ಕೋಮುವಾದ ಬಳಸುತ್ತಿರುವುದರ ವಿರುದ್ಧ ದೂರು ಸಲ್ಲಿಸಲು ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳನ್ನು ‘ಇಂಡಿಯಾ’ ಒಕ್ಕೂಟದ ನಾಯಕರು ಇಂದು ಸಂಜೆ ಭೇಟಿಯಾಗಲಿದ್ದಾರೆ.

ಇಂಡಿಯಾ ಒಕ್ಕೂಟದ ನಾಯಕರು ಒಟ್ಟಾಗಿ ಭೇಟಿಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಈ ಮೊದಲು ಮಾರ್ಚ್‌ನಲ್ಲಿ ದೆಹಲಿ ಮುಖ್ಯಮಂತ್ರಿ ಬಂಧನದ ವಿರುದ್ಧ ಹಾಗೂ ಕೇಂದ್ರೀಯ ತನಿಖಾ ಸಂಸ್ಥೆಗಳು ವಿಪಕ್ಷ ನಾಯಕರನ್ನು ಬಂಧಿಸುವುದನ್ನು ತಡೆಯಬೇಕೆಂದು ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದರು. ಆದರೆ ಆಯೋಗವು ಕೇಂದ್ರೀಯ ತನಿಖಾ ಸಂಸ್ಥೆಗಳ ಬಗ್ಗೆ ಮಧ್ಯಸ್ಥಿಕೆ ವಹಿಸಲು ನಿರಾಕರಿಸಿತ್ತು.

ಆರಂಭದಲ್ಲಿ ಸಭೆಯನ್ನು ಗುರುವಾರ(ಮೇ.9) ಸಂಜೆ ಎಂದು ನಿರ್ಧರಿಸಲಾಗಿತ್ತು. ಆದರೆ ತಡ ರಾತ್ರಿಯಲ್ಲಿ ಶುಕ್ರವಾರಕ್ಕೆ ನಿಗದಿಪಡಿಸಲಾಯಿತು ಎಂದು ವಿಪಕ್ಷ ಮೂಲಗಳು ತಿಳಿಸಿವೆ.

Advertisements

ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ ಒಕ್ಕೂಟದ ನಾಯಕರಿಗೆ ಚುನಾವಣಾ ಆಯೋಗದ ಬಗ್ಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಚುನಾವಣಾ ಆಯೋಗವು ನೈಜ ಮತದಾನದ ಅಂಕಿಅಂಶವನ್ನು ಪ್ರಕಟಪಡಿಸಲು ಹಾಗೂ ಮತದಾನದ ಅಂಕಿಅಂಶವನ್ನು ಬಿಡುಗಡೆ ಮಾಡದಿರುವುದಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದರು.

ಈ ಸುದ್ದಿ ಓದಿದ್ದಾರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

ಅಲ್ಲದೆ ಮುಂದಿನ ಹಂತಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸದಿರುವುದು ವಿಷಾದನೀಯ ಎಂದು ಖರ್ಗೆ ಬೇಸರ ವ್ಯಕ್ತಪಡಿಸಿದ್ದರು.

ತೃಣಮೂಲ ಕಾಂಗ್ರೆಸ್ ಕೂಡ ಚುನಾವಣಾ ಆಯೋಗಕ್ಕೆ ಪತ್ರ ಬರೆದು ತಕ್ಷಣವೇ ಮತದಾರರ ನೈಜ ಅಂಕಿಅಂಶಗಳು ಹಾಗೂ ಇತರ ವಿವರಗಳನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿತ್ತು.

ಚುನಾವಣಾ ಆಯೋಗವು ಮೊದಲ ಹಂತದ ಮತದಾನ ನಡೆದ 11 ದಿನಗಳ ನಂತರ ಹಾಗೂ ಎರಡನೇ ಹಂತದ ಮತದಾನ ನಡೆದ 4 ದಿನದ ನಂತರ ಮತದಾನದ ಶೇಕಡವಾರು ಪ್ರಮಾಣವನ್ನು ಬಿಡುಗಡೆಗೊಳಿಸಿತ್ತು. ಅಲ್ಲದೆ ಎರಡು ಕಡೆಗಳಲ್ಲಿ ಚುನಾವಣಾ ಆಯೋಗವು ಮತದಾನದ ನಿರ್ದಿಷ್ಟ ಅಂಕಿಅಂಶಗಳನ್ನು ಒದಗಿಸಿಲ್ಲ.

ಒಟ್ಟು ಮತದಾನದ ವಿವರವನ್ನು ನೀಡುತ್ತಿದ್ದ ಮತದಾರರ ಮತದಾನದ ಆಪ್‌ನಲ್ಲಿ ಮೊದಲ ಹಂತದ ಮತದಾನ ನಡೆಯುವ ಸಂದರ್ಭದಲ್ಲಿ ಒಟ್ಟು ಮತದಾನದ ವಿವರವನ್ನು ನೀಡಿರಲಿಲ್ಲ. ಮೂರನೇ ಹಂತದ ಮತದಾನದ ವೇಳೆಯಲ್ಲಿ ಇದನ್ನು ಪ್ರಾರಂಭಿಸಲಾಯಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X