‘ಅಕ್ಬರ್‌ಪುರ ಹೆಸರು ಯಾಕೆ?’; ಉತ್ತರ ಪ್ರದೇಶದಲ್ಲಿ ಮತ್ತೆ ಹೆಸರು ಬದಲಾವಣೆಯ ಸುಳಿವು ನೀಡಿದ ಯೋಗಿ

Date:

Advertisements

ಅಕ್ಬರ್‌ಪುರ ನಗರದ ಹೆಸರನ್ನು ಉಚ್ಚರಿಸುವುದರಿಂದ ಬಾಯಿಗೆ ಕೆಟ್ಟ ರುಚಿ ಬರುತ್ತದೆ. ಖಚಿತವಾಗಿರಿ, ಇವೆಲ್ಲವೂ ಬದಲಾಗುತ್ತವೆ. ನಾವು ನಮ್ಮ ರಾಷ್ಟ್ರದಿಂದ ವಸಾಹತುಶಾಹಿಯ ಎಲ್ಲ ಕುರುಕುಗಳನ್ನು ತೊಡೆದುಹಾಕಬೇಕು ಮತ್ತು ನಮ್ಮ ಪರಂಪರೆಯನ್ನು ಗೌರವಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಆ ಮೂಲಕ, ಆ ರಾಜ್ಯದಲ್ಲಿ ಮತ್ತೆ ಹೆಸರು ಬದಲಾವಣೆ ನಡೆಸುವ ಸುಳಿವು ನೀಡಿದ್ದಾರೆ.

ಮುಸ್ಲಿಮರ ವಿರುದ್ಧದ ದ್ವೇಷ ಬಿತ್ತುತ್ತಲೇ ಬಿಜೆಪಿ ರಾಜಕೀಯ ಮಾಡುತ್ತಿದೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಕೋಮು ಆಡಳಿತ ನಡೆಸುತ್ತಿದ್ದಾರೆ. ಈ ಹಿಂದೆ, ಅಲ್ಲಿನ ಎಲ್ಲ ಸರ್ಕಾರಿ ಕಟ್ಟಡಗಳಿಗೂ ಕೇಸರಿ ಬಣ್ಣ ಬಳಿಸಿದ್ದ ಯೋಗಿ, ಹಲವಾರು ನಗರಗಳ ಹೆಸರನ್ನೂ ಬದಲಿಸಿದ್ದರು. ಇದೀಗ, ಮತ್ತೆ ಹೆಸರು ಬದಲಾವಣೆಯ ಸೂಚನೆ ನೀಡಿದ್ದಾರೆ. ಅಕ್ಬರ್‌ಪುರವನ್ನು ಅಕ್ಷರಪುರವೆಂದು ಬದಲಿಸುವ ಮಾತನಾಡಿದ್ದಾರೆ.

ಅಕ್ಬರ್‌ಪುರದ ಆಚೆಗೆ, ಅಲಿಗಢ್, ಅಜಮ್‌ಗಢ್, ಷಹಜಹಾನ್‌ಪುರ, ಗಾಜಿಯಾಬಾದ್, ಫಿರೋಜಾಬಾದ್, ಫರೂಕಾಬಾದ್ ಮತ್ತು ಮೊರಾದಾಬಾದ್ ಸೇರಿದಂತೆ ರಾಜ್ಯದೊಳಗಿನ ಹಲವಾರು ಜಿಲ್ಲೆಗಳ ಹೆಸರನ್ನು ಬದಲಾಯಿಸಲು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Advertisements

ಈ ಹಿಂದೆ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಗೌರವಾರ್ಥವಾಗಿ ರಾಜ್ಯದಲ್ಲಿ ಹಲವಾರು ರಸ್ತೆಗಳು, ಉದ್ಯಾನವನಗಳು ಮತ್ತು ಕಟ್ಟಡಗಳಿಗೆ ವಾಯಪೇಯಿ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿತ್ತು.

ಹೆಚ್ಚುವರಿಯಾಗಿ, ದೇಶದ ನಾಲ್ಕನೇ ಜನನಿಬಿಡ ಜಂಕ್ಷನ್ ಆಗಿರುವ ಐಕಾನಿಕ್ ಮುಘಲ್ಸರಾಯ್ ರೈಲು ನಿಲ್ದಾಣವನ್ನು ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್ ಎಂದು ಬದಲಿಸಲಾಗಿತ್ತು.

2019ರ ಕುಂಭಮೇಳಕ್ಕೆ ಮುನ್ನ, ಅಲಹಾಬಾದ್‌ಅನ್ನು ಪ್ರಯಾಗ್‌ರಾಜ್ ಎಂದು ಮರುನಾಮಕರಣ ಮಾಡಲಾಗಿತ್ತು.

ಇತ್ತೀಚೆಗೆ, ಅಲಿಗಢ ನಗರವನ್ನು ಹರಿಗಢ ಎಂದು ಮರುನಾಮಕರಣ ಮಾಡಬೇಕೆಂದು ಅಲ್ಲಿನ ಪಾಲಿಕೆ ಒತ್ತಾಯಿಸಿ, ನಿರ್ಣಯವನ್ನು ಅಂಗೀಕರಿಸಿದೆ. ಅಲ್ಲದೆ, ಫಿರೋಜಾಬಾದ್ ಅನ್ನು ಚಂದ್ರನಗರ ಎಂದು, ಮೈನ್‌ಪುರಿಯನ್ನು ಮಾಯಾಪುರಿ ಎಂದು ಮರುನಾಮಕರಣ ಮಾಡಲು ಪ್ರಸ್ತಾಪ ಸಲ್ಲಿಸಲಾಗಿದೆ.

ಉತ್ತರ ಪ್ರದೇಶ ಪ್ರೌಢ ಶಿಕ್ಷಣ ರಾಜ್ಯ ಸಚಿವೆ ಗುಲಾಬ್ ದೇವಿ ಅವರು ತಮ್ಮ ತವರು ಜಿಲ್ಲೆ ಸಂಭಾಲ್ ಹೆಸರನ್ನು ಪೃಥ್ವಿರಾಜ್ ನಗರ ಅಥವಾ ಕಲ್ಕಿ ನಗರ ಎಂದು ಬದಲಾಯಿಸಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿಯ ಮಾಜಿ ಶಾಸಕಿ ದೇವಮಣಿ ದ್ವಿವೇದಿ ಅವರು ಸುಲ್ತಾನ್‌ಪುರ ಜಿಲ್ಲೆಯ ಹೆಸರನ್ನು ಕುಶಭವನಪುರ ಎಂದು ಬದಲಾಯಿಸಬೇಕೆಂದು ಆಗ್ರಹಿಸಿದ್ದಾರೆ. ಸಹರಾನ್‌ಪುರದ ದಿಯೋಬಂದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬ್ರಜೇಶ್ ಸಿಂಗ್ ಕೂಡ ದೇವ್ಬಂದ್ ಅನ್ನು ದೇವವೃಂದವೆಂದು ಮರುನಾಮಕರಣ ಮಾಡಲು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X