ಮತದಾನದ ಅಂಕಿಅಂಶಗಳನ್ನು ತಕ್ಷಣ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

Date:

Advertisements

ಮತದಾನವಾದ 48 ಗಂಟೆಯೊಳಗೆ ಮತದಾನದ ಅಧಿಕೃತ ಅಂಕಿಅಂಶಗಳನ್ನು ಪ್ರಕಟಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ದಿ ಅಸೋಷಿಯೇಷನ್‌ ಫಾರ್‌ ಡೆಮಾಕ್ರಾಟಿಕ್‌ ರಿಫಾಮ್ಸ್(ಎಡಿಆರ್‌) ಸಂಸ್ಥೆ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದೆ.

ಲೋಕಸಭೆ ಚುನಾವಣೆ ನಡೆಯುತ್ತಿರುವಾಗ ಕೇಂದ್ರ ಚುನಾವಣಾ ಆಯೋಗವು ಮತದಾನದ ಅಂಕಿಅಂಶಗಳನ್ನು ಮತದಾನದ ಹಲವು ದಿನಗಳ ನಂತರ ಪ್ರಕಟಿಸಿದೆ. ಮೊದಲ ಹಂತದ ಮತದಾನ ಏ.19 ರಂದು ನಡೆದಿದ್ದು ಇದನ್ನು 11 ದಿನಗಳ ನಂತರ ಹಾಗೂ ಏ.26ರಂದು ನಡೆದ ಎರಡನೇ ಹಂತದ ಮತದಾನದ ಶೇಕಡಾವಾರು ಪ್ರಮಾಣವನ್ನು 4 ದಿನಗಳ ನಂತರ ಪ್ರಕಟಿಸಲಾಗಿದೆ.

ಚುನಾವಣಾ ದಿನದಲ್ಲಿ ನಡೆದ ಶೇಕಡವಾರು ಪ್ರಮಾಣಕ್ಕೂ ಬಿಡುಗಡೆಗೊಳಿಸಿದ ಶೇಕಡವಾರು ಪ್ರಮಾಣಕ್ಕೂ ಶೇ.5 ರಷ್ಟು ವ್ಯತ್ಯಾಸ ಕಾಣುತ್ತಿದೆ ಎಂದು ಎಡಿಆರ್‌ ತನ್ನ ಅರ್ಜಿಯಲ್ಲಿ ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

“ಅಂಕಿಅಂಶವನ್ನು ಚುನಾವಣಾ ಆಯೋಗವು ಏ.30 ರಂದು ಪತ್ರಿಕಾ ಪ್ರಕಟಣೆ ಮೂಲಕ ಹೊರಡಿಸಿದ್ದು,ಚುನಾವಣೆ ದಿನದಂದು ಸಂಜೆ ನೀಡಿದ ಶೇಕಡವಾರು ಪ್ರಮಾಣಕ್ಕೆ ಹೋಲಿಸಿದರೆ ಶೇ. 5ರಿಂದ 6 ರಷ್ಟು ಮತ ಪ್ರಮಾಣ ಹೆಚ್ಚಾಗಿದೆ. ಎರಡು ಮತ ಪ್ರಮಾಣ ವ್ಯತ್ಯಾಸವಿರುವುದರಿಂದ ಹಲವು ಪ್ರಶ್ನೆಗಳನ್ನು ಮೂಡಿಸಿದ್ದು, ಸಾರ್ವಜನಿಕರಲ್ಲಿ ಅನುಮಾನ ಮೂಡಿಸಿದೆ” ಎಂದು ಎಡಿಆರ್‌ ಪರ ವಕೀಲರಾದ ಪ್ರಶಾಂತ್ ಭೂಷಣ್‌ ತಿಳಿಸಿದ್ದಾರೆ.

“ಈ ಆತಂಕಗಳನ್ನು ನಿವಾರಿಸಿ, ವಾಸ್ತವಾಂಶಗಳನ್ನು ಒದಗಿಸಬೇಕು. ಮತದಾರರ ವಿಶ್ವಾಸವನ್ನು ಎತ್ತಿಹಿಡಿಯಲು ಮತದಾನದ ಅಧಿಕೃತ ಅಂಶಗಳನ್ನು ಒಳಗೊಂಡಿರುವ ಎಲ್ಲ ಮತಗಟ್ಟೆಗಳ ವಿವರಗಳನ್ನು ಫಾರ್ಮ್‌ 17ಸಿ ವಿಭಾಗ-1ರ ಪ್ರತಿಗಳಲ್ಲಿ ಮತದಾನವಾದ 48 ಗಂಟೆಯೊಳಗೆ ತಮ್ಮ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಫಲಿತಾಂಶ ಪ್ರಕಟಗೊಂಡ ನಂತರ ಅಭ್ಯರ್ಥಿವಾರು ಫಲಿತಾಂಶ ಒಳಗೊಂಡಿರುವ ಮಾಹಿತಿಯನ್ನು 17ಸಿ ವಿಭಾಗ-2ರ ಪ್ರತಿಗಳಲ್ಲಿ ವೆಬ್‌ಸೈಟ್‌ ಮೂಲಕ ಅಪ್‌ಲೋಡ್‌ ಮಾಡಬೇಕು ಎಂದು ತಿಳಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X