ಭಾರತದ ಚುನಾವಣೆ ತಿರುವು ಪಡೆಯುತ್ತಿದೆಯೆ? ಹಿರಿಯ ಪತ್ರಕರ್ತ ಎನ್ ರಾಮ್ ಪ್ರಶ್ನೆ

Date:

Advertisements

ಲೋಕಸಭೆ ಚುನಾವಣೆಯ ಮೂರು ಹಂತಗಳ ಮತದಾನ ಪೂರ್ಣಗೊಂಡಿದ್ದು ಬಹುತೇಕ 284 ಕ್ಷೇತ್ರಗಳ ಮತದಾನ ಮುಕ್ತಾಯವಾಗಿದೆ. ಈ ಹಂತದಲ್ಲಿ ಭಾರತದ ಚುನಾವಣೆ ತಿರುವು ಪಡೆಯುತ್ತಿರುವ ಬಗ್ಗೆ ಹಿರಿಯ ಪತ್ರಕರ್ತ ಎನ್ ರಾಮ್ ಪ್ರಶ್ನಿಸಿದ್ದಾರೆ.

ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಷೇರು ಮಾರುಕಟ್ಟೆಗಳು, ಮಾನದಂಡ ಸೂಚ್ಯಂಕಗಳು ಸೇರಿದಂತೆ ಇತರ ಸೂಚ್ಯಂಕಗಳ ನಡುವೆ ಖಂಡಿತವಾಗಿಯೂ ಭಾರತದ ಚುನಾವಣೆ ತಿರುವು ಪಡೆಯುತ್ತಿರುವುದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಇಂಡಿಯಾ ಒಕ್ಕೂಟ ಹೆಚ್ಚು ಪಕ್ಷಗಳೊಂದಿಗೆ ಮೈತ್ರಿ ಹೊಂದಿಲ್ಲ. ಆದರೆ ಈ ಒಕ್ಕೂಟವು ಆಂತರಿಕ ವಿರೋಧಾಭಾಸಗಳೊಂದಿಗಿನ ಕಾರ್ಯತಂತ್ರದ ರಾಜಕೀಯ ವ್ಯವಸ್ಥೆಯನ್ನು ಹೊಂದಿದೆ. ಇದು ಕ್ಷೇತ್ರಗಳ ಮೇಲೂ ಪರಿಣಾಮ ಬೀರುತ್ತಲಿದ್ದು, ಕೆಲ ರಾಜ್ಯಗಳಲ್ಲಿ ಮೈತ್ರಿ ಉತ್ತಮ ಸ್ಥಿತಿಯಲ್ಲಿದೆ. ಅದಲ್ಲದೆ ಅಭಿಪ್ರಾಯ ಸಮೀಕ್ಷೆಗಳು ಊಹಿಸಿರುವುದಕ್ಕಿಂತ ಗಮನಾರ್ಹವಾಗಿ ಉತ್ತಮವಾಗಿವೆ ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

ಇಂಗ್ಲೆಂಡ್ ಮಾಜಿ ಪ್ರಧಾನಿ ವಿನ್‌ಸ್ಟನ್‌ ಚರ್ಚಿಲ್ ಅವರು ಹೇಳಿಕೆಯನ್ನು ಇದೇ ಸಂದರ್ಭದಲ್ಲಿ ಎನ್ ರಾಮ್ ಉಲ್ಲೇಖಿಸಿದ್ದಾರೆ.

ಎರಡನೆಯ ಮಹಾಯುದ್ಧದ ಅಂತ್ಯದಲ್ಲಿ ಹಿರಿಯ ಬ್ರಿಟಿಷ್ ಜನರಲ್‌ಗೆ ವಿನ್‌ಸ್ಟನ್‌ ಚರ್ಚಿಲ್ ಅವರು ಹೇಳಿದ್ದ ಪ್ರಸಿದ್ಧ ಮಾತೊಂದು ಇಲ್ಲಿ ನೆನಪಿಗೆ ಬರುತ್ತದೆ. “ಮಿತ್ರರಾಷ್ಟ್ರಗಳೊಂದಿಗೆ ಹೋರಾಡುವುದಕ್ಕಿಂತ ಒಂದೇ ಒಂದು ಕೆಟ್ಟ ವಿಷಯವೆಂದರೆ ಅದು ಅವರಿಲ್ಲದೆ ಹೋರಾಡುವುದು!” ಎಂದು ಹೇಳಿದ್ದಾರೆ.

ಯೂಟ್ಯೂಬರ್ ಧ್ರುವ್ ರಾಠೀ ಕೂಡ ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಸಮುದ್ರದ ಅಲೆಯಬ್ಬರ ಮಗ್ಗುಲು ಬದಲಿಸಿದೆ…ಬೀಸಲಿದೆ ಚಂಡಮಾರುತವೊಂದು. ಒಂದೊಂದಾಗಿ ಹುಸಿ ಪ್ರಚಾರಕ್ಕೆ ಕಡಿವಾಣ ಬೀಳುತ್ತಿದೆ ಎಂದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X