ಒಂಟಿ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನದ ಸರ ಕಳವು ಮಾಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ.
ದಿವ್ಯಾ (36) ಮೃತ ಮಹಿಳೆ. ಗಂಡ ಗುರುಮೂರ್ತಿ ಸಲೂನ್ ಕೆಲಸಕ್ಕೆ ಹೋಗಿದ್ದಾರೆ. ಈ ವೇಳೆ ದಿವ್ಯಾ ಮನೆಯಲ್ಲಿ ಒಂಟಿಯಾಗಿದ್ದರು. ಈ ಸಮಯದಲ್ಲಿ ಏಕಾಏಕಿ ಮನೆಗೆ ಬಂದ ಆರೋಪಿ ಮಹಿಳೆ ಕೊಲೆಗೈದು ಕುತ್ತಿಯಲ್ಲಿದ್ದ ಚೈನ್ ಕಳವು ಮಾಡಿದ್ದಾನೆ.
ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಮೃತದೇಹವನ್ನು ಆರ್ಆರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಪ್ರವಾಹ ನಿಭಾಯಿಸಲು ತಂತ್ರಜ್ಞಾನದ ಬಳಕೆಗೆ ಮುಂದಾದ ಬಿಬಿಎಂಪಿ
ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭ ಮಾಡಿದ್ದು, ಪೊಲೀಸರು ಗಂಡನನ್ನು ವಿಚಾರಣೆ ನಡೆಸಿದ್ದಾರೆ. ಆತ ತಾನು ಸಲೂನ್ಗೆ ಹೋಗಿದ್ದಾಗ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ. ದಿವ್ಯಾಳ ಕೊರಳಲ್ಲಿದ್ದ ಚಿನ್ನದ ಸರ ಕೂಡ ನಾಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.