ಮುಸ್ಲಿಮರನ್ನು ಗುರುತಿಸಲು ಪಾಕ್‌ ಧ್ವಜದ ಗ್ರಾಫಿಕ್ಸ್ ಬಳಕೆ: ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್

Date:

Advertisements

ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿ ಬಗ್ಗೆ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಸುವರ್ಣ ನ್ಯೂಸ್‌ ಕನ್ನಡ ಸುದ್ದಿ ವಾಹಿನಿಯು ಮುಸ್ಲಿಮರನ್ನು ಗುರುತಿಸಲು ಪಾಕಿಸ್ತಾನದ ಧ್ವಜವನ್ನು ಬಳಿಸಿ, ಆಕ್ರೋಶಕ್ಕೆ ಗುರಿಯಾಗಿದೆ. ಇದೀಗ, ತಮ್ಮ ತಪ್ಪಿಗೆ ವಿಷಾಧ ವ್ಯಕ್ತಪಡಿಸಿದೆ.

ಇತ್ತಿಚೆಗೆ ಬಿಡುಗಡೆಯಾದ ವರದಿಯಲ್ಲಿ ದೇಶದಲ್ಲಿ ಹಿಂದೂಗಳ ಜನ ಸಂಖ್ಯೆ ಇಳಿಕೆಯಾಗಿದೆ ಹಾಗೂ ಮುಸ್ಲಿಮರ ಜನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಹೇಳಲಾಗಿದೆ. ಇದನ್ನೇ ದಾಳವಾಗಿಸಿಕೊಂಡಿರುವ ಹಲವಾರು ಮಾಧ್ಯಮಗಳು ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷಪೂರಿತ ಸುದ್ದಿ, ಕಾರ್ಯಕ್ರಮಗಳನ್ನು ನಡೆಸುತ್ತಿವೆ.

ವರದಿ ಬಗ್ಗೆ ಸುವರ್ಣ ನ್ಯೂಸ್‌ನಲ್ಲಿ ಪ್ರಸಾರವಾದಿ ಸುದ್ದಿಯಲ್ಲಿ ಹಿಂದುಗಳನ್ನು ಗುರುತಿಸಲು ಭಾರತ ರಾಷ್ಟ್ರಧ್ವಜವನ್ನೂ, ಮುಸ್ಲಿಮರನ್ನು ಗುರುತಿಸಲು ಪಾಕಿಸ್ತಾನದ ಧ್ವಜದ ಗ್ರಾಫಿಕ್ಸ್‌ಗಳನ್ನು ಬಳಸಲಾಗಿತ್ತು. ಮುಸ್ಲಿಮರನ್ನು ಪಾಕಿಸ್ತಾನಿಗಳೆಂದು ಬಿಂಬಿಸುವ ಆ ಗ್ರಾಫಿಕ್ ಬಳಕೆಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ, ಸುದ್ದಿ ವಾಹಿನಿಯು ವಿಷಾಧ ವ್ಯಕ್ತಪಡಿಸಿದೆ.

Advertisements

 

“ಇದು ಉದ್ದೇಶಪೂರ್ವಕವಾಗಿ ಆದ ತಪ್ಪಲ್ಲ. ಆಕಸ್ಮಿಕವಾಗಿ ಈ ತಪ್ಪು ಜರುಗಿದೆ. ತಪ್ಪು ಗೊತ್ತಾದಕೂಡಲೇ ಗ್ರಾಫಿಕ್ಸ್ ಬದಲಾಯಿಸಲಾಗಿದೆ. ಈ ಅಚಾತುರ್ಯಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇವೆ” ಎಂದು ಸುವರ್ಣ ನ್ಯೂಸ್ ನಲ್ಲಿ ಶನಿವಾರ ನಿರೂಪಕಿಯೊಬ್ಬರು ಹೇಳಿದ್ದಾರೆ.

 

ಸುವರ್ಣ ನ್ಯೂಸ್‌ ಎಸಗಿದ ಈ ಕೃತ್ಯದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಮಹಮದ್ ಜುಬೇರ್ ಅವರು ಟ್ವೀಟರ್‌ನಲ್ಲಿ ಸುವರ್ಣ ನ್ಯೂಸ್ ಕಾರ್ಯಕ್ರಮದ ವಿಡಿಯೋ ಹಂಚಿಕೊಂಡಿದ್ದಾರೆ. ಈ ಕುರಿತು ಕಾನೂನು ಕ್ರಮ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಮಾಧ್ಯಮ ಮುಖವಾಡ ಹಾಕಿಕೊಂಡ ಕೋಮುವಾದಿ ಸಮಾಜಕಂಟಕ ಚಾನಲ್ ಮತ್ತು ಪಕ್ಷದ ಏಜೆಂಟ್ , ಅಜಿತ್ ಸಂಘಪರಿವಾರ ಮತ್ತು ಬಿಜೆಪಿ ಯವರೊಂದಿಗೆ ಬಹಿರಂಗವಾಗಿಯೇ ಚಟುವಟಿಕೆ ಇದೆ,,ಈ ಚಾನೆಲ್ ನಲ್ಲಿ ಬಹುತೇಕ ವಿರೋಧ ಪಕ್ಷಗಳ ವೀರೋಧಿ ಸುದ್ದಿ ಬಿಟ್ಟರೆ ವಾಸ್ತವ ಸಂಗತಿ ತುಂಬಾ ವಿರಳ,, ಇಂಥಾ ಚಾನಲ್ ಗಳ ಅವಶ್ಯಕತೆ ಇದೆಯಾ,,ಸರಕಾರ ಇಂಥವರಿಗೆ ರಿಯಾಯಿತಿ ಯಾಕೆ ಕೊಡಬೇಕು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X