ವಿಧಾನ ಪರಿಷತ್ ಚುನಾವಣೆ | ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಒಂದು ಕ್ಷೇತ್ರ ಜೆಡಿಎಸ್‌ಗೆ

Date:

Advertisements

ಕರ್ನಾಟಕ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಜೂನ್ 3ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಈ ಚುನಾವಣೆಗೆ ಬಿಜೆಪಿಯು ತನ್ನ ಅಭ್ಯರ್ಥಿಗಳನ್ನು ಶನಿವಾರ(ಮೇ 11) ಪ್ರಕಟಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿಯು ಮುಂದುವರಿದಿದ್ದು, ಒಂದು ಕ್ಷೇತ್ರವನ್ನು ಬಿಜೆಪಿ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ.

ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಿಸಿದ್ದು, “ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಅಮರನಾಥ್ ಪಾಟೀಲ್, ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಎ.ದೇವೇಗೌಡ, ಆಗ್ನೆಯ ಶಿಕ್ಷಕರ ಕ್ಷೇತ್ರಕ್ಕೆ ವೈ.ಎ.ನಾರಾಯಣಸ್ವಾಮಿ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಈ.ಸಿ.ನಿಂಗರಾಜು ಅವರನ್ನು ಅಭ್ಯರ್ಥಿಯನ್ನಾಗಿಸಲಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೈಋತ್ಯ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಜೆಡಿಎಸ್‌ ಇನ್ನೂ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿಲ್ಲ.

Advertisements

ಇದನ್ನು ಓದಿದ್ದೀರಾ? ಜಿಲ್ಲೆಗಳ ರಾಜಧಾನಿ ಹೆಸರೇಳಿ: ವ್ಯಾಪಕ ಟ್ರೋಲ್‌ಗೆ ಗುರಿಯಾದ ಪ್ರಧಾನಿ ಮೋದಿಯ ಚುನಾವಣಾ ಭಾಷಣ!

ಆರು ಸ್ಥಾನಗಳಿಗೆ ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಮೇ 16 ಕೊ‌ನೆಯ ದಿನವಾಗಿದೆ. ಇನ್ನು ನಾಮಪತ್ರ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ. ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X