ಟಿಎಂಸಿ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಹಣ: ವಿಡಿಯೋ ವೈರಲ್

Date:

Advertisements

ಲೈಂಗಿಕ ಹಗರಣ ಹಾಗೂ ಭೂಕಬಳಿಕೆ ಆರೋಪದಲ್ಲಿ ಬಂಧಿತರಾಗಿರುವ ಸ್ಥಳೀಯ ಟಿಎಂಸಿ ನಾಯಕ ಶಹಜಹಾನ್‌ ಶೇಖ್‌ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡ 70 ಮಹಿಳೆಯರಿಗೆ 2 ಸಾವಿರ ರೂ. ನೀಡಲಾಗಿದೆ ಎಂಬ ಹೇಳಿಕೆಯನ್ನು ಸ್ಥಳೀಯ ಬಿಜೆಪಿ ನಾಯಕನೊಬ್ಬ ಹೇಳುತ್ತಿರುವ ವಿಡಿಯೋ ಎಲ್ಲಡೆ ವೈರಲ್‌ ಆಗುತ್ತಿದೆ.

45 ನಿಮಿಷಗಳ ಈ ವಿಡಿಯೋದಲ್ಲಿ ಸಂದೇಶ್‌ಖಾಲಿ ಮಂಡಲ್‌ನ ಅಧ್ಯಕ್ಷ ಗಂಗಾಧರ್‌ ಕಾಯಲ್‌ ಎಂಬಾತ ಮಹಿಳೆಯರು ಹಣ ಸ್ವೀಕರಿಸಿದ್ದಾರೆ ಎಂಬ ಹೇಳಿಕೆ ನೀಡಿದ್ದಾನೆ. ಈ ಮೊದಲು ಇದೇ ವ್ಯಕ್ತಿ ಮಹಿಳೆಯರ ಅತ್ಯಾಚಾರ ಆರೋಪ ಸುಳ್ಳು ಎಂದು ಕೆಲ ದಿನಗಳ ಹಿಂದೆ ಹೇಳಿದ್ದ ವಿಡಿಯೋ ವೈರಲ್‌ ಆಗಿತ್ತು.

ಲೈಂಗಿಕ ಹಗರಣ ಹಾಗೂ ಭೂಕಬಳಿಕೆ ಆರೋಪದಲ್ಲಿ ಬಂಧಿತನಾಗಿರುವ ಶೇಖ್‌ ಶಹಜಹಾನ್‌ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕೆ 70 ಮಹಿಳೆಯರು ತಲಾ 2 ಸಾವಿರ ರೂ ಸ್ವೀಕರಿಸಿದ್ದಾರೆ ಎಂದು ಹೇಳುವ ದೃಶ್ಯ ವಿಡಿಯೋದಲ್ಲಿ ದಾಖಲಾಗಿದೆ.

Advertisements

“50 ಮತಗಟ್ಟೆಗಳಲ್ಲಿ 2.5 ಲಕ್ಷ ರೂ. ನಗದು ಅಗತ್ಯವಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸುವ ಶೇ.30 ಮಂದಿ ಮಹಿಳೆಯರೆ ಆಗಿರುತ್ತಾರೆ. ಎಸ್‌ಸಿ,ಎಸ್‌ಟಿ ಹಾಗೂ ಒಬಿಸಿ ಅವರನ್ನು ತೃಪ್ತಿಪಡಿಸಲು ಅವರಿಗೆ ಉತ್ತಮ ಸಂಭಾವನೆ ನೀಡಬೇಕು. ಈ ಸಂದರ್ಭದಲ್ಲಿ ಮಹಿಳೆಯರು ಪೊಲೀಸರ ಮುಂದೆ ಮೊದಲ ಸಾಲಿನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು” ಎಂದು ದೃಶ್ಯದಲ್ಲಿ ಗಂಗಾಧರ್‌ ಕಾಯಲ್‌ ಹೇಳುತ್ತಾನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

ಟಿಎಂಸಿ ವಕ್ತಾರ ರಿಜು ದತ್‌, ಸಂದೇಶ್‌ಖಾಲಿಯನ್ನು ಪ್ರಚೋದಿಸುವ ಬಿಜೆಪಿಯ ನಕಲಿ ನಿರೂಪಣೆಗಳು ನಿಜವಾಗುತ್ತಿವೆ. ಈಗ ಬಿಡುಗಡೆಯಾಗುತ್ತಿರುವ ವಿಡಿಯೋಗಳಲ್ಲಿ ಮಹಿಳೆಯರು ಕಾಣಿಸಿಕೊಳ್ಳುತ್ತಿದ್ದಾರೆ. ಈ ವಿಡಿಯೋಗಳನ್ನು ಕೆಲವು ದಿನಗಳಿಂದ ಟಿಎಂಸಿ ಹಂಚಿಕೊಳ್ಳುತ್ತಿದೆ.

ಮೇ.4 ರಂದು ಬಿಡುಗಡೆಗೊಂಡಿದ್ದ ವಿಡಿಯೋದಲ್ಲಿ ಪ್ರತಿಪಕ್ಷದ ನಾಯಕ ಸುವೆಂದು ಅಧಿಕಾರಿಯ ಆದೇಶದ ಮೇರೆಗೆ ಪ್ರತಿಭಟನೆಗಳನ್ನು ನಡೆಸಲಾಗಿದ್ದು, ಇದರ ಹಿಂದಿನ ಸಂಪೂರ್ಣ ಪಿತೂರಿ ಸುವೆಂದು ಎಂದು ಸಂದೇಶ್‌ಖಾಲಿ ಮಂಡಲ್‌ನ ಅಧ್ಯಕ್ಷ ಗಂಗಾಧರ್‌ ಕಾಯಲ್‌ ಹೇಳಿದ್ದ.

ಆದರೆ ಟಿಎಂಸಿ ನಾಯಕರ ಈ ಆರೋಪಗಳನ್ನು ತಳ್ಳಿಹಾಕಿರುವ ಬಿಜೆಪಿ ನಾಯಕರು ಚುನಾವಣೆಗಾಗಿ ಈ ರೀತಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ,

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X