ಪ್ರಜ್ವಲ್‌ ಪ್ರಕರಣ | ಮೊಬೈಲ್ ಮಾನದಂಡದಲ್ಲಿ ತನಿಖೆ ಮಾಡಿದರೆ 15 ಲಕ್ಷ ಬಳಕೆದಾರರೂ ತಪ್ಪಿತಸ್ಥರಾಗುತ್ತಾರೆ: ಪ್ರೀತಂ ಗೌಡ

Date:

Advertisements

ಪೆನ್​ ಡ್ರೈವ್ ಪ್ರಕರಣದಲ್ಲಿ ಬಂಧನ ಆಗಿರುವ ಆರೋಪಿಗಳು ನನ್ನ ಪಿಎ ಅಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹೇಳಿದರು.

ಹಾಸನ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನನ್ನ ಕಚೇರಿಯಲ್ಲಿ 40-50ಕ್ಕಿಂತ ಹೆಚ್ಚು ಜನ ಕೆಲಸ ಮಾಡುತ್ತಾರೆ. ಒಬ್ಬ ಪೆನ್ ​ಡ್ರೈವ್​ನಲ್ಲಿ ಹಾಕಿ ನೋಡಿದರೆ ಅಪರಾಧ ಅಂದರೆ ಹೇಗೆ” ಎಂದು ಪ್ರಶ್ನಿಸಿದರು.

“ಹಾಸನದಲ್ಲಿ 2 ಲಕ್ಷ ಮೊಬೈಲ್ ಇದ್ದರೆ ಎಲ್ಲ ಮೊಬೈಲ್​ನಲ್ಲೂ ಇರುತ್ತೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಯಾಕೆಂದರೆ ಯಾರು ಬೇಕು ಅಂತಾ ತರಿಸಿಕೊಂಡಿರುವುದಿಲ್ಲ. ಎಸ್​ಐಟಿ ಇದೇ ಮಾನದಂಡದಲ್ಲಿ ತನಿಖೆ ಮಾಡುತ್ತದೆ ಅಂತಾದರೆ ಜಿಲ್ಲೆಯಲ್ಲಿ 15 ಲಕ್ಷ ಮೊಬೈಲ್ ಬಳಕೆದಾರರು ತಪ್ಪಿತಸ್ಥರಾಗುತ್ತಾರೆ” ಎಂದರು.

Advertisements

“ನಮ್ಮ ಕಚೇರಿಯಲ್ಲಿ ಸಂಬಳಕ್ಕೆ ಕೆಲಸ ಮಾಡುವವರು ಇದ್ದಾರೆ. ವಾಲಂಟರಿಯಾಗಿ ಕೆಲಸ ಮಾಡುವವರೂ ಇದ್ದಾರೆ. ಏಪ್ರಿಲ್ 23ರಂದು ಲಾಯರ್ ಪೆನ್ ಡ್ರೈವ್ ತಂದು ಕೊಟ್ಟಿದ್ದಾರೆ. ಹಾಗಂತ ಲಾಯರ್ ಮೇಲೆ ಕೇಸ್ ದಾಖಲಿಸಲು ಆಗುತ್ತಾ? ನಾನು ಯಾರಿಗೂ ವಕ್ತಾರ ಆಗಲು ರೆಡಿ ಇಲ್ಲ. ಸಂತ್ರಸ್ತರ ವಿಡಿಯೋ ಹರಿಬಿಡಬಾರದು ಎಂಬುದು ನನ್ನ ನಿಲುವು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್‌ ಪೆನ್‌ ಡ್ರೈವ್ ಪ್ರಕರಣ | ಎಸ್‌ಐಟಿ ಬಲೆಗೆ ಬೀಳುತ್ತಿರುವ ಬಿಜೆಪಿ ನಾಯಕರ ಆಪ್ತರು

“ತನಿಖೆ ನಡೆಯುತ್ತಿರುವಾಗ ಆರೋಪಿಗಳ ಬಗ್ಗೆ ಮಾತಾಡುವುದು ಸರಿಯಲ್ಲ. ಯಾರು ಏನು ಮಾಡಿದ್ದಾರೆ ಅಂತಾ ತನಿಖೆ ಮೂಲಕ ಗೊತ್ತಾಗುತ್ತದೆ. ಯಾವುದೇ ಕಾರಣಕ್ಕೂ ಅಶ್ಲೀಲ ವೀಡಿಯೋಗಳನ್ನು ಇಟ್ಟುಕೊಳ್ಳಬೇಡಿ. ಫಾರ್ವರ್ಡ್ ಮಾಡಬೇಡಿ ಅಂತಾ ನಮ್ಮ ಕಾರ್ಯಕರ್ತರಿಗೆ ಹೇಳಿದ್ದೆ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X