ನಾನು ಸಿಎಂ ಕುರ್ಚಿಯ ಆಕಾಂಕ್ಷಿಯಲ್ಲ : ಮಲ್ಲಿಕಾರ್ಜುನ ಖರ್ಗೆ

Date:

Advertisements
  • ‘ವಿಪಕ್ಷಗಳು ಒಂದಾದರೆ ಬಿಜೆಪಿಯನ್ನು ಕಿತ್ತೆಸೆಯಬಹುದು’
  • ‘ಬೊಮ್ಮಾಯಿ ಭ್ರಷ್ಟಾಚಾರಕ್ಕೆ ಸ್ವಪಕ್ಷದ ನಾಯಕರೇ ಬೇಸತ್ತಿದ್ದಾರೆ’

ನಾನು ಕರ್ನಾಟಕದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ. ನಾನೇ ಅನೇಕ ಮುಖ್ಯಮಂತ್ರಿಗಳನ್ನು ನೇಮಿಸುವವನು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ತಾವು ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನೀವು ಮುಖ್ಯಮಂತ್ರಿ ಕುರ್ಚಿಯ ‘ರೇಸ್‌’ನಲ್ಲಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾನು ಕರ್ನಾಟಕ ಸಿಎಂ ಆಕಾಂಕ್ಷಿಯಲ್ಲ. ನಾನು ಅನೇಕ ಮುಖ್ಯಮಂತ್ರಿಗಳನ್ನು ನೇಮಿಸುತ್ತೇನೆ” ಎಂದಿದ್ದಾರೆ.

Advertisements

“ಚುನಾವಣೆ ನಂತರ ಶಾಸಕರು ಯಾರನ್ನು ಆಯ್ಕೆ ಮಾಡುತ್ತಾರೆ ಎನ್ನುವುದರ ಮೇಲೆ ಕಾಂಗ್ರೆಸ್ ಹೈಕಮಾಂಡ್‌ ಮುಖ್ಯಮಂತ್ರಿ ಯಾರಾಗುತ್ತಾರೆ ಎಂದು ತೀರ್ಮಾನಿಸುತ್ತದೆ. ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ” ಎಂದು ಹೇಳಿದ್ದಾರೆ.

“ನಾವು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಈ ಮೊದಲು ಮಾಡಿದ್ದೇವೆ. ಹಾಗಾಗಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. ಈ ಬಾರಿ ನಮ್ಮ ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡುತ್ತಿದೆ” ಎಂದು ಹೇಳಿದ್ದಾರೆ.

“ಈಗಿನ ಬಿಜೆಪಿಯ ರಾಜ್ಯ ಸರ್ಕಾರ ಭ್ರಷ್ಟ ಸರ್ಕಾರ. ಸಾರ್ವಜನಿಕರು ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಬಯಸುತ್ತಾರೆ” ಎಂದು ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆ ಕುರಿತು ಮಾತನಾಡಿದ ಅವರು, “ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಹೋರಾಡಿದರೆ ಬಿಜೆಪಿ ಹೊರಬೀಳಲಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲಿಂಗಾಯತ ಹೇಳಿಕೆ ವಿವಾದ | ಬಿಜೆಪಿ ತನಗೆ ಬೇಕಾದಂತೆ ವಿಡಿಯೋ ತಿರುಚಿದೆ: ಸಿದ್ದರಾಮಯ್ಯ

ಖಾಸಗಿ ವಾಹಿನಿಯ ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, “ಬಿಜೆಪಿಯು ಲಿಂಗಾಯತ ಸಮುದಾಯವನ್ನು ಕಡೆಗಣಿಸುತ್ತಿದೆ” ಎಂದು ಆರೋಪಿಸಿದ್ದಾರೆ.

“ಬಿಜೆಪಿಯೊಳಗೆ ಅಂತರ್‌ಯುದ್ಧ ನಡೆಯುತ್ತಿದೆ. ಬಿ ಎಲ್ ಸಂತೋಷ್‌ ಬಿಜೆಪಿಯ ಎಲ್ಲ ನಾಯಕರನ್ನು ಮುಗಿಸಲು ಹೊರಟಿದ್ದಾರೆ. ಬಿ ಎಸ್ ಯಡಿಯೂರಪ್ಪ ಅಂತಹವನ್ನೇ ಬಿಜೆಪಿ ಕಸದ ಬುಟ್ಟಿಗೆ ಹಾಕಿದೆ” ಎಂದು ಹೇಳಿದ್ದಾರೆ.

“ಭಾರತ ಕಂಡ ಅತ್ಯಂತ ಭ್ರಷ್ಟ ಸರ್ಕಾರವನ್ನು ಬಸವರಾಜ ಬೊಮ್ಮಾಯಿ ನಡೆಸುತ್ತಿದ್ದಾರೆ ಎಂಬುದನ್ನು ಮನಗಂಡು ಬಿಜೆಪಿಯ ಅನೇಕ ನಾಯಕರು ಕಾಂಗ್ರೆಸ್‌ಗೆ ಬಂದಿದ್ದಾರೆ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X