ಪರಿಷತ್‌ ಚುನಾವಣೆ | ಕೈತಪ್ಪಿದ ಟಿಕೆಟ್; ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ

Date:

Advertisements

ವಿಧಾನ ಪರಿಷತ್‌ ಟಿಕೆಟ್‌ ಕೈತಪ್ಪಿದ್ದಕ್ಕೆ ಉಡುಪಿ ಜಿಲ್ಲೆಯ ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿ ವಿರುದ್ಧ ಬಂಡಾಯ ಎದ್ದಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಭಟ್ ಬೇಡಿಕೆ ಇಟ್ಟಿದ್ದರು. ಆದರೆ, ಅವರಿಗೆ ಬಿಜೆಪಿ ಟಿಕೆಟ್ ನೀಡದ ಕಾರಣ, ಬಂಡಾಯದ ಬಾವುಟ ಬೀಸಿದ್ದಾರೆ.

“ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತೇನೆ. ಸೋತರೂ – ಗೆದ್ದರೂ ಬಿಜೆಪಿಯಲ್ಲೇ ಇರುತ್ತೇನೆ. ನನ್ನ ಸ್ಪರ್ಧೆ ಪಕ್ಷ ಅಥವಾ ವ್ಯಕ್ತಿ ವಿರುದ್ಧವಲ್ಲ. ನನಗಾಗಿ, ಜನರ ಸೇವೆಗಾಗಿ ಕೆಲಸ ಮಾಡಲು ಈ ನಿರ್ಧಾರ ಮಾಡಿದ್ದೇನೆ” ಎಂದು ಭಟ್ ಹೇಳಿದ್ದಾರೆ.

Advertisements

“ಕರಾವಳಿಗೆ ಪಕ್ಷದಿಂದ ಅನ್ಯಾಯವಾಗಿದೆ. ಪಕ್ಷದ ವರಿಷ್ಠರು ಟಿಕೆಟ್‌ ಭರವಸೆ ನೀಡಿದ್ದರು. ಈಗ ನಿರ್ಧಾರ ಬದಲಾಗಿದೆ. ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುತ್ತಿರಲಿಲ್ಲ. ಆದರೆ ಹಣ ಬಲ, ಜಾತಿ ಬಲಕ್ಕೆ ಟಿಕೆಟ್ ಸಿಕ್ಕಿದೆ. ಹೀಗಾಗಿ ಜನರೊಂದಿಗೆ ಇದ್ದು ಕೆಲಸ ಮಾಡಲು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ನಿರ್ಧಾರ ಮಾಡಿದ್ದೇನೆ” ಎಂದು ರಘುಪತಿ ಭಟ್ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X