ಬೀದರ್ | ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಬಳಿದು ಅವಮಾನ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

Date:

Advertisements
  • ಘಟನಾ ಸ್ಥಳದಲ್ಲಿ ಧರಣಿ ನಡೆಸುತ್ತಿರುವ ಗ್ರಾಮಸ್ಥರು
  • ಸ್ಥಳಕ್ಕೆ ಪೊಲೀಸರ ಭೇಟಿ, ತನಿಖೆ ನಡೆಸುವ ಭರವಸೆ

ಡಾ. ಬಿ ಆರ್ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಸಗಣಿ ಬಳಿದು ವಿರೂಪಗೊಳಿಸಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮರೂರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನಾಮಫಲಕದ ಮೇಲಿರುವ ಅಂಬೇಡ್ಕರ್ ಭಾವಚಿತ್ರಕ್ಕೆ ರಾತ್ರೋರಾತ್ರಿ ಸಗಣಿ ಬಳಿದಿರುವ ಕಿಡಿಗೇಡಿಗಳು ಬಾಬಾ ಸಾಹೇಬರಿಗೆ ಅವಮಾನಿಸಿದ್ದಾರೆ.

ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ ಗ್ರಾಮಸ್ಥರುಮ, ಅಂಬೇಡ್ಕರ್ ಅವರನ್ನು ಅವಮಾನಿಸಿದ ಕಿಡಿಗೇಡಿಗಳು ಯಾರೆಂಬುದು ಪತ್ತೆ ಹಚ್ಚಿ ಬಂಧಿಸುವಂತೆ ಸ್ಥಳದಲ್ಲಿ ಧರಣಿ ನಡೆಸುತ್ತಿದ್ದು, ನ್ಯಾಯ ಒದಗಿಸುವಂತೆ ಪಟ್ಟು ಹಿಡಿದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಘೋಷಣೆ ಕೂಗಿದ್ದಾರೆ.

Advertisements

ಘಟನೆ ಕುರಿತು ಈದಿನ.ಕಾಮ್ ಜೊತೆಗೆಗ್ರಾಮಸ್ಥರೊಬ್ಬರು ಮಾತನಾಡಿ, “ಶನಿವಾರ ರಾತ್ರಿ ಯಾರೋ ಕಿಡಿಗೇಡಿಗಳು ದಲಿತ ಸಂಘರ್ಷ ಸಮಿತಿ ನಾಮಫಲಕದ ಮೇಲಿನ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಬಳಿದು ವಿಕೃತಿ ಮೆರೆದಿದ್ದಾರೆ” ಎಂದು ಕಿಡಿಕಾರಿದರು.

ಬೀದರ್‌

“ಈ ಹಿಂದೆ ಕೂಡ ಇಂತಹ ಘಟನೆ ಗ್ರಾಮದಲ್ಲಿ ಜರುಗಿತು. ಇದೀಗ ಅದೇ ಘಟನೆ ಮತ್ತೆ ನಡೆದಿದೆ. ಅಂಬೇಡ್ಕರ್ ಅವರನ್ನು ಅವಮಾನಿಸಿದ ಕಿಡಿಗೇಡಿಗಳು ಯಾರೆಂಬುದು ತನಿಖೆ ನಡೆಸಿ ಕೂಡಲೇ ಬಂಧಿಸುವಂತೆ ದಸಂಸ ಪದಾಧಿಕಾರಿಗಳು, ದಲಿತ ಸಮುದಾಯದ ಮಹಿಳೆಯರ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ, ಪೋಲಿಸ್ ವರಿಷ್ಠಾಧಿಕಾರಿ ಆಗಮಿಸಿ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಅಂಬೇಡ್ಕರ್‌ ಭಾವಚಿತ್ರಕ್ಕೆ ಮಸಿ ಬಳಿದು ಅಪಮಾನ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ತನಿಖೆ ನಡೆಸುತ್ತೇವೆ

ಈ ಬಗ್ಗೆ ಧನ್ನೂರ ಪೋಲೀಸ್ ಠಾಣೆ ಪಿಎಸ್ಐ ಈದಿನ.ಕಾಮ್ ಜೊತೆಗೆಮಾತನಾಡಿ, “ಅಂಬೇಡ್ಕರ್ ಅವರ ಭಾವಚಿತ್ರವಿರುವ ನಾಮಫಲಕಕ್ಕೆ ರಾತ್ರಿ ಸಗಣಿ ಬಳಿದ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತೇವೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X