ಸಕಾಲಕ್ಕೆ ಸಿಗದ ವೇತನ; ಎಲೆಕ್ಟ್ರಿಕ್ ಬಸ್‌ ಚಾಲಕರ ಪ್ರತಿಭಟನೆ

Date:

Advertisements

ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಎಲೆಕ್ಟ್ರಿಕ್​ ಬಸ್​ ಚಾಲಕರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಗುತ್ತಿಗೆ ಕೆಲಸ ಮಾಡುತ್ತಿರುವ ಚಾಲಕರು ಬೆಂಗಳೂರಿನ ಶಾಂತಿನಗರ ಡಿಪೋ 3ರ ಮುಂದೆ ಮಂಗಳವಾರ ಧರಣಿ ನಡೆಸಿದ್ದು, ವೇತನಕ್ಕಾಗಿ ಆಗ್ರಹಿಸಿದ್ದಾರೆ.

ಬಿಎಂಟಿಸಿ ಎಲೆಕ್ಟ್ರಿಕ್​ ಬಸ್​ಗಳು ಸರಿಯಾಗಿ ಸೇವೆ ನೀಡುತ್ತಿಲ್ಲ ಎಂಬ ಆರೋಪಗಳು ಇತ್ತೀಚೆಗೆ ಕೇಳಿಬಂದಿದ್ದವು. ಇದೀಗ ಚಾಲಕರು ತಮಗೆ ವೇತನ ನೀಡುತ್ತಿಲ್ಲ ಎಂದು ಆರೋಪಿಸುತ್ತಿದ್ದಾರೆ.

“ಮೊದಲಿಗೆ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಸೇರಿಸಿಕೊಳ್ಳುವಾಗ ಟಾಟಾ ಕಂಪನಿಯಲ್ಲಿ ಕೆಲಸ ಎಂದು ಹೇಳಿದ್ದರು. ಇದೀಗ, ಆರ್ಯ ಕಂಪನಿಯಲ್ಲಿ ಕೆಲಸ ನೀಡಿದ್ದಾರೆ. ಅಲ್ಲದೇ, ತಿಂಗಳಿಗೆ ₹26 ಸಾವಿರ ವೇತನ ನೀಡುತ್ತೇವೆ ಎಂದಿದ್ದರು. ಆದರೀಗ, ಕೇವಲ ₹18 ಸಾವಿರ ನೀಡುತ್ತಿದ್ದಾರೆ. ಬರುವ ವೇತನದಲ್ಲಿ ಕಡಿತ ಮಾಡುತ್ತಿರುವ ಹಣ ಪಿಎಫ್‌ ಖಾತೆಗೂ ಜಮೆ ಆಗುತ್ತಿಲ್ಲ. ವಸತಿ ಸೌಲಭ್ಯ ನೀಡುತ್ತೇವೆ ಎಂದಿದ್ದರು. ಇದೀಗ ಅದೂ ಇಲ್ಲ” ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

“ನಮಗೆ ಸರಿಯಾಗಿ ತಿಂಗಳಿಗೆ ವೇತನ ಆಗುತ್ತಿಲ್ಲ. ಜತೆಗೆ ನಾವು ಡ್ಯೂಟಿ ಮತ್ತು ಓಟಿ ಸೇರಿ (8ಗಂಟೆ ಡ್ಯೂಟಿ ಮತ್ತು 8ಗಂಟೆ ಓಟಿ) ಅಂದರೆ ತಿಂಗಳಲ್ಲಿ 40-42 ಸಾವಿರ ರೂ. ವರೆಗೆ ದುಡಿದ್ದೇವೆ. ಆದರೆ, ನಮಗೆ ಸುಮಾರು 42 ಸಾವಿರ ರೂಪಾಯಿ ಕೊಡುವ ಬದಲಿಗೆ ಕೇವಲ 18-20 ಸಾವಿರ ರೂಪಾಯಿ ಮಾತ್ರ ಕೊಟ್ಟಿದ್ದಾರೆ. ಈ ಪುರುಷಾರ್ಥಕ್ಕೆ ನಾವು ಡ್ಯೂಟಿ ಏಕೆ ಮಾಡಬೇಕು” ಎಂದು ಪ್ರತಿಭಟನೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್ ಲೈಂಗಿಕ ಹಗರಣ | ಸಂತ್ರಸ್ತೆಯರಿಗೆ ರಕ್ಷಣೆ ನ್ಯಾಯ ಹಾಗೂ ಅಪರಾಧಿಗಳಿಗೆ ಶಿಕ್ಷೆ ನೀಡಬೇಕೆಂದು ಆಗ್ರಹ ಸಮಾವೇಶ

“ಸುಮಾರು 180 ಮಂದಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು ನಿತ್ಯ ಕೆಲಸ ಮಾಡುತ್ತಿದ್ದೇವೆ. ನಮ್ಮನ್ನು ನೇಮಕ ಮಾಡಿಕೊಳ್ಳುವಾಗ ತಿಂಗಳಿಗೆ 22 ಸಾವಿರ ರೂಪಾಯಿ ವೇತನ ಮತ್ತು ಇತರ ಭತ್ಯೆಗಳನ್ನು ಕೊಡಲಾಗುವುದು ಎಂದು ಹೇಳಿದ್ದರು. ಜತೆಗೆ ಓಟಿ ಮಾಡಿದರೆ ನೀವು ಡಬಲ್‌ ವೇತನ ಪಡೆಯಬಹುದು ಎಂದಿದ್ದರು. ಆದರೆ, ವೇತನವನ್ನೇ ಸರಿಯಾಗಿ ಕೊಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಎಂಟಿಸಿಯಲ್ಲಿ ಒಟ್ಟು 6842 ಬಸ್​​ಗಳಿವೆ. ಅದರಲ್ಲಿ ಸಾಮಾನ್ಯ 5642 ಬಸ್​​ಗಳಿದ್ದರೆ, 600 ಎಸಿ ಬಸ್​​ಗಳಿವೆ. 600 ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳಿವೆ. ಡಿಪೋ-3 ಒಂದರಲ್ಲೇ 113 ಎಲೆಕ್ಟ್ರಿಕ್​ ಬಸ್​ಗಳು ಸಂಚರಿಸುತ್ತೇವೆ. ಇಲ್ಲಿ ಚಾಲಕರು ಮೂರು ಶಿಫ್ಟ್​​​ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X