ಹೆಚ್ಚು ಮಕ್ಕಳಿರುವವರು ಎಂದಿದ್ದು ಮುಸ್ಲಿಮರಿಗಲ್ಲ – ಬಡವರಿಗೆ: ಪ್ರಧಾನಿ ಮೋದಿ

Date:

Advertisements

ನಾನು ಮುಸ್ಲಿಮರನ್ನು ಉಲ್ಲೇಖಿಸಿ ನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂಬ ಪದಗಳನ್ನು ಹೇಳಿಲ್ಲ. ನಾನು ಮುಸ್ಲಿಮರ ಬಗ್ಗೆ ಮಾತ್ರ ಮಾತನಾಡಿಲ್ಲ. ಪ್ರತಿ ಬಡ ಕುಟುಂಬಗಳ ಬಗ್ಗೆ ಮಾತನಾಡಿದ್ದೇನೆ ಎಂದು ಪ್ರಧಾನಿ ಮೋದಿ ತಮ್ಮ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ, ರಾಜಸ್ಥಾನದ ಬನ್ಸ್‌ವಾರದಲ್ಲಿ ಮಾತನಾಡಿದ್ದ ಮೋದಿ, “ಕಾಂಗ್ರೆಸ್‌ ʼನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ದೇಶದ ಸಂಪತ್ತನ್ನು ಹಂಚುತ್ತದೆ” ಎಂದು ಹೇಳಿದ್ದರು. ಅವರ ಹೇಳಿಕೆ, ದ್ವೇಷದಿಂದ ಕೂಡಿದ್ದು, ಕೋಮು ದ್ವೇಷವನ್ನು ಪ್ರಚೋದಿಸುತ್ತದೆ ಎಂದು ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದೀಗ, ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. “ಮುಸ್ಲಿಮರ ಮೇಲಿನ ಪ್ರೀತಿಯನ್ನು ನಾನು ಮಾರಾಟ ಮಾಡುವುದಿಲ್ಲ. ನಾನು ವೋಟ್ ಬ್ಯಾಂಕ್‌ಗಾಗಿ ಕೆಲಸ ಮಾಡುವುದಿಲ್ಲ. ನಾನು ʼಸಬ್ಕಾ ಸಾಥ್, ಸಬ್ಕಾ ವಿಕಾಸ್ʼಅನ್ನು ನಂಬುತ್ತೇನೆ” ಎಂದು ನ್ಯೂಸ್‌೧೮ಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

Advertisements

“ನನಗೆ ಆಘಾತವಾಗಿದೆ. ಹೆಚ್ಚು ಮಕ್ಕಳಿರುವವರ ಬಗ್ಗೆ ಮಾತನಾಡುವಾಗ, ನಾನು ಮುಸ್ಲಿಮರ ಬಗ್ಗೆ ಹೇಳುತ್ತಿದ್ದೇನೆಂದು ಯಾರು ಹೇಳಿದರು? ಬಡ ಕುಟುಂಬಗಳಲ್ಲಿಯೂ ಇದೇ ಪರಿಸ್ಥಿತಿ ಇದೆ. ಬಡತನ ಇರುವಲ್ಲಿ, ಹೆಚ್ಚು ಮಕ್ಕಳಿರುತ್ತಾರೆ. ಅವರು ತಮ್ಮ ಸಾಮಾಜಿಕ ಪರಿಸ್ಥಿತಿಯನ್ನು ಲೆಕ್ಕಿಸದೆ ಮಕ್ಕಳನ್ನು ಹೊಂದುತ್ತಾರೆ. ಸರ್ಕಾರ ತಮ್ಮ ಮಕ್ಕಳ ಕಾಳಜಿವಹಿಸಬೇಕೆಂದು ಬಯಸುತ್ತಾರೆ” ಎಂದು ಹೇಳಿದ್ದಾರೆ.

ತಾವು ಮುಖ್ಯಮಂತ್ರಿಯಾಗಿದ್ದಾಗ ಗುಜರಾತ್‌ನಲ್ಲಿ ನಡೆದ ಗೋಧ್ರಾ ನಂತರದ ಗಲಭೆಗಳನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, “2002ರ ಗೋಧ್ರಾ ಗಲಭೆ ನಂತರ ತಮ್ಮ ವಿರೋಧಿಗಳು ಮುಸ್ಲಿಮರ ಮನಸ್ಸಿನಲ್ಲಿ ತಮ್ಮ ಪ್ರಾಮುಖ್ಯತೆಗೆ ಕಳಂಕ ತಂದಿದ್ದಾರೆ” ಎಂದು ಹೇಳಿದರು.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರು ತಮಗೆ ಮತ ಹಾಕುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮೋದಿ, “ದೇಶದ ಜನತೆ ನನಗೆ ಮತ ಹಾಕುತ್ತಾರೆ. ನಾನು ಹಿಂದು-ಮುಸ್ಲಿಮರು ಎಂದು ವಿಭಜಿಸುವ ದಿನ, ನಾನು ಸಾರ್ವಜನಿಕ ಜೀವನದಲ್ಲಿರುವ ಅರ್ಹತೆ ಕಳೆದುಕೊಳ್ಳುತ್ತೇನೆ. ನಾನು ಹಿಂದು-ಮುಸ್ಲಿಂ ಎಂದು ವರ್ಗೀಕರಿಸುವುದಿಲ್ಲ. ಇದು ನನ್ನ ಪ್ರತಿಜ್ಞೆ” ಎಂದರು.

ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಪ್ರಧಾನಿ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ವಾರಣಾಸಿಯಲ್ಲಿ ಏಳನೇ ಹಂತದ ಮತದಾನ ಜೂನ್ 1 ರಂದು ನಡೆಯಲಿದೆ. ಮತಗಳ ಎಣಿಕೆ ಜೂನ್ 4 ರಂದು ನಡೆಯಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X