ಐಪಿಎಲ್ | ಪ್ಲೇ-ಆಫ್ ಪ್ರವೇಶಿಸಿದರೂ ಸೋಲಿನ ಸುಳಿಯಿಂದ ಹೊರಬರದ ರಾಜಸ್ಥಾನ್ ರಾಯಲ್ಸ್!

Date:

Advertisements

ಈ ಬಾರಿಯ ಐಪಿಎಲ್‌ನಲ್ಲಿ ಒಂದು ಕಡೆ ಆರ್‌ಸಿಬಿ ತಂಡ ಸತತ ಐದು ಪಂದ್ಯದಲ್ಲಿ ಗೆದ್ದು ಪ್ಲೇ ಆಫ್ ಪ್ರವೇಶಿಸಲು ಹೋರಾಟ ನಡೆಸುತ್ತಿದ್ದರೆ, ಪ್ಲೇ-ಆಫ್ ಪ್ರವೇಶಿಸಿದ್ದರೂ ಕೂಡ ರಾಜಸ್ಥಾನ್ ರಾಯಲ್ಸ್ ತಂಡ ಸೋಲಿನ ಸುಳಿಯಿಂದ ಇನ್ನೂ ಹೊರಬಂದಿಲ್ಲ.

ಹೌದು. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ತಂಡವು ಸತತವಾಗಿ ನಾಲ್ಕನೇ ಪಂದ್ಯದಲ್ಲೂ ಕೂಡ ಸೋಲು ಅನುಭವಿಸಿದೆ. ರಾಜಸ್ಥಾನ್ ರಾಯಲ್ಸ್ ಕೆಕೆಆರ್ ವಿರುದ್ಧ ಕೊನೆಯ ಪಂದ್ಯವನ್ನು ಮೇ 19ರಂದು ಆಡಲಿದೆ.

ಮೇ 15ರಂದು ಗುವಾಹಟಿಯ ಬರ್ಸಾಪುರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 65ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

Advertisements

ಸತತ 4ನೇ ಸೋಲು ಅನುಭವಿಸಿದ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್ 2024ರ ಪ್ಲೇಆಫ್‌ಗೆ ಪ್ರವೇಶ ಪಡೆದಿದ್ದರೂ, ಅಗ್ರ 2ರಲ್ಲಿ ಲೀಗ್ ಹಂತ ಮುಗಿಸಲು ಅವಕಾಶವನ್ನು ಕೈ ಚೆಲ್ಲಿಕೊಂಡಿದೆ‌. ಇನ್ನು ಐಪಿಎಲ್ 2024ರ ಪ್ಲೇಆಫ್‌ನಿಂದ ಹೊರಬಿದ್ದಿರುವ ಪಂಜಾಬ್ ಕಿಂಗ್ಸ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೇರಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ್ ರಾಯಲ್ಸ್ ತಂಡವು, ರಿಯಾನ್ ಪರಾಗ್ ಅವರ 48 ರನ್‌ಗಳ ಸ್ಕೋರ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 144 ರನ್ ಕಲೆಹಾಕಲಷ್ಟೇ ಶಕ್ತವಾಗಿತ್ತು.

145 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡ ಹಂಗಾಮಿ ನಾಯಕ ಸ್ಯಾಮ್ ಕರ್ರಾನ್ ಅವರ ಅಮೋಘ ಅರ್ಧಶತಕದ ಸಾಹಸದಿಂದ 18.5 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು.

ಸ್ಯಾಮ್ ಕರನ್, 41 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ ಅಜೇಯ 63 ರನ್ ಬಾರಿಸಿದರೆ, ಜಿತೇಶ್ ಶರ್ಮಾ 20 ಎಸೆತಗಳಲ್ಲಿ 2 ಸಿಕ್ಸರ್‌ಗಳ ಮೂಲಕ 22 ರನ್ ಗಳಿಸಿದರು. ಇನ್ನು ಅಶುತೋಷ್ ಶರ್ಮಾ 11 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಅಜೇಯ 17 ರನ್ ಗಳಿಸಿದರು.

ಬೌಲಿಂಗ್‌ನಲ್ಲಿ ರಾಜಸ್ಥಾನ ಪರ ಅವೇಶ್ ಖಾನ್ 28 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಯಜುವೇಂದ್ರ ಚಹಾಲ್ 31 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಟ್ರೆಂಟ್ ಬೌಲ್ಟ್ ಒಂದು ವಿಕೆಟ್ ಪಡೆದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X