ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಸಚಿವರ ಬಂಧನ

Date:

Advertisements

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರ್ಖಂಡ್‌ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್‌ ಆಲಂ ಅವರನ್ನು ಬುಧವಾರ ಜಾರಿ ನಿರ್ದೇಶನಾಲಯವು ಬಂಧಿಸಿದೆ.

ಆಲಂ ಅವರ ಆಪ್ತ ಕಾರ್ಯದರ್ಶಿಗೆ ಸಂಬಂಧಿಸಿದ ಫ್ಲ್ಯಾಟ್‌ನಿಂದ 35 ಕೋಟಿ ರೂಪಾಯಿಗೂ ಅಧಿಕ ನಗದು ವಶಪಡಿಸಿಕೊಂಡ ಪ್ರಕರಣದಲ್ಲಿ ಈ ಬಂಧನ ಮಾಡಲಾಗಿದೆ.

ಮಂಗಳವಾರ ರಾಂಚಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಆಲಂ ಅವರನ್ನು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ. ಬುಧವಾರ ಮತ್ತೆ ವಿಚಾರಣೆಗೆ ಸಮನ್ಸ್ ನೀಡಲಾಗಿದೆ. ಸುಮಾರು ಆರು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದ್ದು, ತನಿಖೆಗೆ ಸಹಕರಿಸದ ಕಾರಣ ಬಂಧಿಸಲಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ.

Advertisements

ಇದನ್ನು ಓದಿದ್ದೀರಾ?  ಜಾರ್ಖಂಡ್ | ಗೃಹ ಸಹಾಯಕನ ಮನೆಯಲ್ಲಿ ಅಪಾರ ಪ್ರಮಾಣದ ಹಣ ವಶ; ಸಚಿವರೊಂದಿಗೆ ನಂಟು ಆರೋಪ

ಕಳೆದ ವಾರ ರಾಂಚಿಯಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಗೃಹ ಸಹಾಯಕರಾದ ಜಹಾಂಗೀರ್ ಆಲಂ ವಾಸವಾಗಿದ್ದ 2ಬಿಎಚ್‌ಕೆ ಫ್ಲಾಟ್ ಮೇಲೆ ದಾಳಿ ನಡೆಸಿದೆ. ಅಲ್ಲಿಂದ ಸುಮಾರು 35.23 ಕೋಟಿ ರೂಪಾಯಿ ಮತ್ತು ಇತರ ಕಡೆಗಳಲ್ಲಿ 1.5 ಕೋಟಿ ರೂಪಾಯಿಗೂ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟಾಗಿ 37 ಕೋಟಿ ರೂಪಾಯಿ ಇಡಿ ವಶ ಪಡಿಸಿಕೊಂಡಿದೆ.

ಇದಾದ ಮರುದಿನವೇ ಲಾಲ್ ಮತ್ತು ಜಹಾಂಗೀರ್ ಆಲಂ ಅವರನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಬಂಧಿಸಲಾಗಿದ್ದು, ಪ್ರಸ್ತುತ ಇಡಿ ವಶದಲ್ಲಿದ್ದಾರೆ. ಬುಧವಾರ ಜಾರ್ಖಂಡ್ ಸಚಿವ ಅಲಂಗೀರ್‌ ಆಲಂ ಅವರನ್ನು ಬಂಧಿಸಲಾಗಿದೆ.

ಇದನ್ನು ಓದಿದ್ದೀರಾ? ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ನಾದಿನಿ ಬಿಜೆಪಿ ಸೇರ್ಪಡೆ

ಅಲಂಗೀರ್‌ ಆಲಂ 2000ರಲ್ಲಿ ಜಾರ್ಖಂಡ್ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದು ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಹೇಮಂತ್ ಸೊರೆನ್ ಅವರನ್ನು ಇಡಿ ವಶಕ್ಕೆ ತೆಗೆದುಕೊಂಡ ತಿಂಗಳುಗಳ ಬಳಿಕ ಈಗ ಸಚಿವರನ್ನು ಬಂಧಿಸಲಾಗಿದೆ. ಸೋರೆನ್ ಅವರನ್ನು ಅಧಿಕೃತವಾಗಿ ಬಂಧಿಸುವ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದರು.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X