ಸಚಿವರ ಮಾತನಾಡುವ ಶೈಲಿ ನಮ್ಮ ಸಾವಿರಾರು ಮತಗಳನ್ನು ಹಾಳು ಮಾಡಿದೆ: ಬಿಜೆಪಿ ಶಾಸಕ

Date:

Advertisements

“ಸಚಿವರೊಬ್ಬರ ಮಾತಿನ ಶೈಲಿಯು ಲೋಕಸಭಾ ಚುನಾವಣೆಯ ಪಕ್ಷದ ಸಾವಿರಾರು ಮತಗಳನ್ನು ಹಾಳು ಮಾಡಿದೆ” ಎಂದು ಬಿಜೆಪಿ ಶಾಸಕ ಮೃಣಾಲ್ ಸೈಕಿಯಾ ಹೇಳಿದ್ದಾರೆ.

ಖುಮ್ಟೈ ಶಾಸಕರಾದ ಮೃಣಾಲ್ ಸೈಕಿಯಾ ಅವರು ಬಿಜೆಪಿ ಸಚಿವ ಜಯಂತ ಮಲ್ಲ ಬರುವಾ ಸಾರ್ವಜನಿಕವಾಗಿ ಪಕ್ಷದ ಒಳ ವಿಚಾರಗಳನ್ನು ಮಾತನಾಡುವುದನ್ನು ತಡೆಯುವಂತೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಮನವಿ ಮಾಡಿದ್ದಾರೆ.

“ಗೌರವಾನ್ವಿತ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೇ, ದಯವಿಟ್ಟು ಸಚಿವ ಜಯಂತ ಮಲ್ಲ ಬರುವಾ ಅವರಿಗೆ ಪಕ್ಷದ ವ್ಯವಹಾರಗಳ ಬಗ್ಗೆ ಮಾತನಾಡದಂತೆ ತಿಳಿಸಿ. ಈ 2024ರ ಚುನಾವಣೆಯಲ್ಲಿ ಅವರ ಮಾತಿನ ಶೈಲಿ ಈಗಾಗಲೇ ಅಸ್ಸಾಂನಲ್ಲಿ ಸಾವಿರಾರು ಮತಗಳನ್ನು ಹಾಳು ಮಾಡಿದೆ ಎಂಬುವುದನ್ನು ಅವರು ಅರ್ಥ ಮಾಡಿಕೊಳ್ಳಬೇಕು” ಎಂದು ಮೃಣಾಲ್ ಸೈಕಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಪಕ್ಷದ ಸೋಲಿಗೆ ಬಿಜೆಪಿಯನ್ನು ದೂಷಿಸಲಾಗದು: ಕಾಂಗ್ರೆಸ್ ನಾಯಕ

ಬಿಜೆಪಿ ಹಳೆಯ ನಾಯಕರುಗಳ ವಿರುದ್ಧವಾಗಿ ಜಯಂತ ಮಲ್ಲ ಬರುವಾ ಅವರು ಹೇಳಿಕೆಗಳನ್ನು ನೀಡಿದ್ದರು. ಪಕ್ಷಕ್ಕೆ ಸಮರ್ಪಣೆ ಅತ್ಯಂತ ಮುಖ್ಯವಾಗಿದ್ದು ನಮ್ಮ ನಾಯಕರು ಎಷ್ಟು ಸಮಯವನ್ನು ನೀಡುತ್ತಾರೆ ಎಂದು ಬರುವಾ ಬಹಿರಂಗವಾಗಿ ಪ್ರಶ್ನಿಸಿದ್ದರು.

ಪಕ್ಷದ ನಾಯಕತ್ವವನ್ನು ಸಾರ್ವಜನಿಕವಾಗಿ ಟೀಕಿಸಿದ್ದಕ್ಕಾಗಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಶಾಸಕ ಅಶೋಕ್ ಶರ್ಮಾ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು ಇದಾದ ಬಳಿಕ ಬರುವಾ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗಳು ಮತದಾನದ ದಿನದಂದು ಪಕ್ಷದ ವಿರುದ್ಧ ಮತದಾರರನ್ನು ಪ್ರಚೋದಿಸುತ್ತದೆ ಎಂದು ಬಿಜೆಪಿಯ ಇತರೆ ನಾಯಕರು ಆರೋಪಿಸಿದ್ದಾರೆ.

ಕೆಲವು ಸಮಯದಿಂದ ಅಸ್ಸಾಂನಲ್ಲಿ ಬಿಜೆಪಿ ತನ್ನ ಹಳೆಯ ಮತ್ತು ಹೊಸ ಕಾರ್ಯಕರ್ತರ ನಡುವಿನ ಘರ್ಷಣೆಯಿಂದ ಪ್ರಭಾವಕ್ಕೆ ಒಳಗಾಗಿದೆ. ಶರ್ಮಾ ಹಿರಿಯ ಬಿಜೆಪಿ ನಾಯಕರಾಗಿದ್ದರೆ, ಬರುವಾ ಈ ಹಿಂದೆ ಕಾಂಗ್ರೆಸ್‌ನಲ್ಲಿ ಇದ್ದವರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X