ಬೆಂಗಳೂರು | ಮೇ 24ರಿಂದ ಲಾಲ್‌ಬಾಗ್‌ನಲ್ಲಿ ‘ಮಾವು-ಹಲಸು ಮೇಳ’

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಮೇ 24ರಿಂದ ಜೂನ್ 10ರವರೆಗೂ ಮಾವು ಮತ್ತು ಹಲಸಿನ ಮೇಳ ನಡೆಯಲಿದೆ. ಮೇಳ ಮಾಡುವುದಕ್ಕೆ ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್‌ಬಾಗ್ ತೋಟಗಾರಿಕೆ ಇಲಾಖೆ ನಿರ್ಧರಿಸಿದೆ.

ಮೇಳದಲ್ಲಿ ಸುಮಾರು 60 ಮಳಿಗೆಗಳು ಇರಲಿವೆ. ಕೊಪ್ಪಳದ ಕೇಸರ್, ಚಿತ್ರದುರ್ಗ ಮತ್ತು ತುಮಕೂರಿನ ಬಾದಾಮಿ, ರಸಪುರಿ, ಬೆನಿಶಾ, ಮಲಗೋವಾ, ಇಮಾಮ್ಪಸಂದ್ನಂತಹ ಪ್ರಸಿದ್ಧ ತಳಿಗಳೂ ಸೇರಿದಂತೆ ಸೇಂಧೂರ, ನೀಲಂ, ಮಲ್ಲಿಕಾ, ಆಮ್ರಪಾಲಿ, ಬಂಗನಪಲ್ಲಿ, ತೋತಾಪುರಿ, ಸಕ್ಕರೆಗುತ್ತಿ ತಳಿಯ ಹಣ್ಣುಗಳು ಇರಲಿವೆ.‌

ಮಾವಿನ ಮೇಳಕ್ಕೆ ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ ಸೇರಿದಂತೆ ನಾನಾ ಜಿಲ್ಲೆಗಳ ಮಾವು ಬೆಳೆಗಾರರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಮೇಳದಲ್ಲಿ ವಾಣಿಜ್ಯ, ಪಾರಂಪರಿಕ ಮಾವಿನ ತಳಿಗಳ ಜತೆಗೆ ಉಪ್ಪಿನಕಾಯಿಗೆ ಬಳಸುವ ಆಮ್ಲೆಟ್‌, ಮಿಡಿ ಮಾವು ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇರಲಿದೆ.

Advertisements

ಹಣ್ಣುಗಳ ರಾಜ ಮಾವಿನ ಹಣ್ಣು ಮಾರುಕಟ್ಟೆಗಳಲ್ಲಿ ಸದ್ಯ ದುಬಾರಿಯಾಗಿದೆ. ನೀರಿಲ್ಲದೇ, ಬಿಸಿಲಿನ ಝಳಕ್ಕೆ ಬಾರಿ ಮಾವಿನ ಇಳುವರಿ ಕುಂಠಿತಗೊಂಡಿದೆ. ಹೀಗಾಗಿ, ದರ ಕೂಡ ದುಬಾರಿಯಾಗಿದೆ. ಆದರೂ ಬೆಂಗಳೂರಿನ ಜನ ಖರೀದಿಸುತ್ತಿದ್ದಾರೆ. ಪ್ರತಿವರ್ಷ ಮಾವಿನ ಸೀಸನ್ನಲ್ಲಿ ರಾಜ್ಯದಲ್ಲಿ ಸುಮಾರು 15 ಲಕ್ಷ ಟನ್ಮಾವು ಉತ್ಪಾದನೆಯಾಗಬೇಕಿತ್ತು. ಆದರೆ, ಮಳೆಯಿಲ್ಲದ ಪರಿಣಾಮ ಹಾಗೂ ಅಧಿಕ ತಾಪಮಾನದಿಂದಾಗಿ ಕೇವಲ 4-5 ಲಕ್ಷ ಟನ್ನಷ್ಟು ಮಾವಿನ ಫಸಲು ಕಡಿಮೆ ಬಂದಿದೆ. ಹೀಗಾಗಿ, ಬಾರಿ ಮೇಳದಲ್ಲಿ ದರ ಕೊಂಚ ಹೆಚ್ಚು ಇರಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಡಿಯೋ ಕಾಲ್ ಮಾಡಿ ಪತ್ನಿಗೆ ಹೆದರಿಸಲು ಹೋಗಿ ಪತಿ ಸಾವು

ಪ್ರತಿ ವರ್ಷದಂತೆ ವರ್ಷವೂ ಕೂಡ ನಗರದ ಲಾಲ್ಬಾಗ್ನಲ್ಲಿ ಮಾವಿನ ಮೇಳ ನಡೆಯಲಿದ್ದು, ಈಗಾಗಲೇ ಭರ್ಜರಿ ಸಿದ್ಧತೆ ಆರಂಭಗೊಂಡಿದೆ. ಲಾಲ್ಬಾಗ್ ಮಾವು ಮತ್ತು ಹಲಸಿನ ಮೇಳದಲ್ಲಿ ಜಿಕೆವಿಕೆ, ಐಐಎಚ್ಆರ್ ಸೇರಿದಂತೆ ಇತರ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಹಲಸಿನ ತಳಿಗಳು, ರೈತರು ಬೆಳೆದ ನಾನಾ ತಳಿಯ ಹಲಸಿನ ಹಣ್ಣನ್ನು ಮಾರಾಟ ಮಾಡಲಾಗುತ್ತದೆ.

ಮಾವು ಬೆಳೆಯುವ ಪ್ರಮುಖ ಜಿಲ್ಲೆಗಳಾದ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ರೈತರು ರಸಪುರಿ ಮತ್ತು ತೋತಾಪುರಿಯಂತಹ ತಳಿಯ ಹಣ್ಣುಗಳನ್ನು ಮೇಳಕ್ಕೆ ತರಲಿದ್ದಾರೆಎಂದು ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಸಿ.ಜಿ.ನಾಗರಾಜ್ ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X