ರಂಜಾನ್ ವೇಳೆ ಗಾಜಾದ ಮೇಲೆ ಬಾಂಬ್ ಹಾಕಬೇಡಿ ಎಂದು ಹೇಳಿದ್ದೆ ಎಂದ ಮೋದಿ: ನೆಟ್ಟಿಗರಿಂದ ತರಾಟೆ

Date:

Advertisements

ಪ್ರಧಾನಿ ನರೇಂದ್ರ ಮೋದಿ ಮಾಧ್ಯಮವೊಂದಕ್ಕೆ ಇಸ್ರೇಲ್‌ – ಗಾಜಾದ ಬಗ್ಗೆ ನೀಡಿರುವ ಹೇಳಿಕೆಯೊಂದು ಎಲ್ಲೆಡೆ ವೈರಲ್‌ ಆಗುತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿಯನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

”ಅದು ರಂಜಾನ್‌ ತಿಂಗಳ ಸಂದರ್ಭವಾಗಿತ್ತು. ನಾನು ನನ್ನ ವಿಶೇಷ ರಾಯಭಾರಿಯನ್ನು ಇಸ್ರೇಲ್‌ಗೆ ಕಳುಹಿಸಿ ಅಲ್ಲಿನ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರಿಗೆ ರಂಜಾನ್‌ನ ಸಂದರ್ಭದಲ್ಲಿ ಗಾಜಾದ ಮೇಲೆ ಬಾಂಬ್‌ ಹಾಕಬೇಡಿ ಎಂದು ತಿಳಿಸುವಂತೆ ಹೇಳಿದ್ದೆ. ಅವರು ಅದನ್ನು ಅನುಸರಿಸಲು ಎಲ್ಲ ಪ್ರಯತ್ನಗಳನ್ನು ಮಾಡಿದರು. ಆದರೆ ಕೊನೆಯಲ್ಲಿ ಎರಡು ಮೂರು ದಿನಗಳ ಕಾಲ ಹೋರಾಟ ನಡೆಯಿತು” ಎಂದು ಸಂದರ್ಶನವೊಂದರಲ್ಲಿ ಪ್ರಧಾನಿ ಹೇಳಿದ್ದರು.

ಪ್ರಧಾನಿ ನೀಡಿದ ಈ ಹೇಳಿಕೆ ಎಲ್ಲೆಡೆ ಟ್ರೋಲ್‌ಗೆ ಒಳಗಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿಯ ಹೇಳಿಕೆಯನ್ನು ಪ್ರಶ್ನಿಸುತ್ತಿರುವ ನೆಟ್ಟಿಗರು ಇವರು ಮಣಿಪುರ ಒಂದನ್ನು ಬಿಟ್ಟು ಪ್ರಪಂಚದ ಎಲ್ಲ ರಾಷ್ಟ್ರಗಳ ಯುದ್ಧಗಳನ್ನು ನಿಲ್ಲಿಸಿದ್ದಾರೆ ಎಂದು ಟೀಕಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಹಿಂದೂ-ಮುಸ್ಲಿಮ್ ರಾಜಕಾರಣ ಮಾಡುವುದಿಲ್ಲವೇ ನಮ್ಮ ಪ್ರಧಾನಿ!

ಈಶಾನ್ಯ ರಾಜ್ಯ ಆಂತರಿಕ ಸಂಘರ್ಷದಿಂದ ಗಲಭೆಗಳು ಉಂಟಾಗಿ ನೂರಾರು ಜನರು ಪ್ರಾಣ ಕಳೆದುಕೊಂಡರು. ಸಾವಿರಾರು ಜನ ತಮ್ಮ ಸ್ವಂತ ಆಸ್ತಿಪಾಸ್ತಿ ಬಿಟ್ಟು ಬೇರೆಡೆ ತಮ್ಮ ನೆಲೆ ಬದಲಾಯಿಸಿದರು. ಭಾರತ ಇತಿಹಾಸದಲ್ಲಿಯೇ ಇಂತಹ ಘೋರ ಘಟನೆ ನಡೆದರೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ಮಣಿಪುರದ ಬಗ್ಗೆ ಒಂದು ಮಾತು ಆಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ದೇಶವೇ ಮಣಿಪುರದ ಆಂತರಿಕ ಸಂಘರ್ಷದ ಬಗ್ಗೆ ಕಂಬನಿ ಮಿಡಿದರೂ ಪ್ರಧಾನಿ ಏಕೆ ಮಾತನಾಡಲಿಲ್ಲ ಕೆಲವರು ಪ್ರಶ್ನಿಸಿದ್ದಾರೆ. ಮತ್ತೂ ಕೆಲವರು ಮಣಿಪುರವು ಪ್ರಧಾನಿಯ ಪಠ್ಯದ ವಿಷಯದಲ್ಲಿ ಇಲ್ಲ ಎಂದು ಕುಟುಕಿದ್ದಾರೆ. ಇನ್ನೂ ಕೆಲವರು ಬಹುಶಃ ನಡ್ಡಾ ಹಾಗೂ ಅಮಿತ್‌ ಶಾ ಅವರನ್ನು ಇಸ್ರೇಲ್‌ಗೆ ಯುದ್ಧ ನಿಲ್ಲಿಸಲು ಕಳಿಸಿರಬೇಕು ಎಂದು ಕುಹುಕವಾಡಿದ್ದಾರೆ.

ಅದಲ್ಲದೆ ಮಾಧ್ಯಮದಲ್ಲಿ ಸಂದರ್ಶನದಲ್ಲಿ ಕುಳಿತು ಪ್ರಶ್ನೆ ಕೇಳುತ್ತಿದ್ದ ನಾಲ್ವರು ಪತ್ರಕರ್ತರು ಕೂಡ ಮೋದಿಯನ್ನು ಆರಾಧಿಸುವ ಗೋಧಿ ಮಾಧ್ಯಮ ಪತ್ರಕರ್ತರಾಗಿದ್ದು, ಇಂತಹ ಪತ್ರಕರ್ತರು ಸರ್ಕಾರದ ದುರಾಡಳಿತವನ್ನು ಪ್ರಶ್ನಿಸುವುದನ್ನು ಬಿಟ್ಟು ಪ್ರಧಾನಿಯ ಸುಳ್ಳುಗಳಿಗೆ ತಲೆಯಾಡಿಸುತ್ತಿರುವುದನ್ನು ಕೂಡ ಹಲವರು ಟ್ರೋಲ್‌ ಮಾಡಿದ್ದಾರೆ.

https://x.com/VeeryaSorry/status/1791338756500533492

 

 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X