ಮುಂದಿನ ಪೀಳಿಗೆಗೆ ದಾರಿ ಮಾಡಿಕೊಡುವ ಬದಲು ಮೋದಿಗೆ ಪ್ರಧಾನಿ ಹುದ್ದೆಯ ಅತಿಯಾಸೆ: ಉದ್ಧವ್ ಠಾಕ್ರೆ

Date:

Advertisements

ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಪೀಳಿಗೆಗೆ ದಾರಿ ಮಾಡಿಕೊಡುವ ಬದಲಾಗಿ ಪ್ರಧಾನಿ ಹುದ್ದೆಯನ್ನು ಮತ್ತೆ ತನ್ನದಾಗಿಸಿಕೊಳ್ಳುವ ಅತಿಯಾಸೆಯನ್ನು ಹೊಂದಿದ್ದಾರೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಟೀಕಿಸಿದರು.

ಥಾಣೆಯಲ್ಲಿ ಹಾಲಿ ಸಂಸದ ಮತ್ತು ತಮ್ಮ ಪಕ್ಷದ ಅಭ್ಯರ್ಥಿ ರಾಜನ್ ವಿಚಾರೆ ಅವರ ಪರವಾಗಿ ಪ್ರಚಾರ ನಡೆಸಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ ಅವರು ತನ್ನನ್ನು ಮತ್ತು ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಅವರನ್ನು ಪದೇ ಪದೇ ಗುರಿಯಾಗಿಸುತ್ತಿರುವ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನು ಓದಿದ್ದೀರಾ?   ನಮ್ಮ ಹಿಂದುತ್ವ ಮನೆ ಒಲೆ ಹೊತ್ತಿಸಿದರೆ ಬಿಜೆಪಿಯ ಹಿಂದುತ್ವ ಮನೆಯನ್ನೇ ಸುಡುತ್ತದೆ: ಉದ್ಧವ್ ಠಾಕ್ರೆ

Advertisements

ಈ ಲೋಕಸಭೆ ಚುನಾವಣೆಯನ್ನು ನಿಷ್ಠೆ ಮತ್ತು ದ್ರೋಹದ ನಡುವಿನ ಘರ್ಷಣೆ ಎಂದು ಕರೆದಿರುವ ಉದ್ಧವ್ ಠಾಕ್ರೆ ಅವರು ಶಿವಸೇನೆ ಮತ್ತು ಥಾಣೆ ನಗರದ ನಡುವಿನ ನಂಟಿನ ಬಗ್ಗೆ ಪ್ರಸ್ತಾಪ ಮಾಡಿ ಜನರಲ್ಲಿ ಮತಯಾಚನೆ ಮಾಡಿದ್ದಾರೆ.

“ಮೋದಿ ಅವರು ತಮ್ಮ ವಾಕ್ಚಾತುರ್ಯದ ಮೂಲಕ ವಿವಾದ ಹುಟ್ಟುಹಾಕುತ್ತಿದ್ದಾರೆ. ಬಹುಮತ ಪಡೆಯುವ ನಿಟ್ಟಿನಲ್ಲಿ ಬಿಜೆಪಿ ರಾಜವಂಶದ ರಾಜಕೀಯದ ಆರೋಪ ಮಾಡುತ್ತಿದೆ” ಎಂದು ಠಾಕ್ರೆ ಆರೋಪಿಸಿದರು.

ಇತ್ತೀಚೆಗೆ ಪ್ರಧಾನಿ ಮೋದಿ ತನ್ನ ಭಾಷಣಗಳಲ್ಲಿ ಠಾಕ್ರೆಯವರ ಶಿವಸೇನೆ ಬಣವನ್ನು ‘ನಕಲಿ ಸೇನೆ’ ಎಂದು ಕರೆದಿದ್ದಾರೆ ಮತ್ತು ಶರದ್ ಪವಾರ್ ಅವರನ್ನು ಅಲೆದಾಡುವ ಆತ್ಮ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಬಿಜೆಪಿ ಬಾಗಿಲು ತೆರೆದರೂ ಹಿಂದಿರುಗಿ ಹೋಗಲ್ಲ: ಉದ್ಧವ್ ಠಾಕ್ರೆ

ಇದಕ್ಕೆ ತಿರುಗೇಟು ನೀಡಿದ ಉದ್ಧವ್ ಠಾಕ್ರೆ, “ಪ್ರಧಾನಿ ಮೋದಿ ಮುಂದಿನ ಪೀಳಿಗೆಗೆ ದಾರಿ ಮಾಡಿಕೊಡುವ ಬದಲು ಪ್ರಧಾನಿ ಹುದ್ದೆಯನ್ನು ತಾನೇ ಮರಳಿ ಪಡೆಯಲು ಉತ್ಸುಕರಾಗಿದ್ದಾರೆ” ಎಂದು ಟೀಕಿಸಿದರು.

ಇನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆಯು ಥಾಣೆ ಲೋಕಸಭಾ ಕ್ಷೇತ್ರಕ್ಕೆ ನರೇಶ್ ಮ್ಹಾಸ್ಕೆ ಅವರನ್ನು ಕಣಕ್ಕಿಳಿಸಿದೆ. ಮುಂಬೈನ ಆರು ಸ್ಥಾನಗಳು ಸೇರಿದಂತೆ 12 ಇತರ ಲೋಕಸಭಾ ಕ್ಷೇತ್ರಗಳಿಗೆ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.

2022ರಲ್ಲಿ ಮೂಲ ಶಿವಸೇನೆಯನ್ನು ವಿಭಜಿಸಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಶಿವಸೇನೆಯ ನಾಯಕ ಏಕನಾಥ್ ಶಿಂದೆಗೆ ಥಾಣೆಯಲ್ಲಿನ ಸ್ಪರ್ಧೆಯು ಪ್ರತಿಷ್ಠೆಯ ಯುದ್ಧವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X