ಯುಪಿಎ ಸರ್ಕಾರದ ಹಿಂದುಳಿದ ಪ್ರದೇಶದ ಅನುದಾನ ನಿಧಿ ರದ್ದುಗೊಳಿಸಿದ್ದು ಏಕೆ: ಮೋದಿಗೆ ಕಾಂಗ್ರೆಸ್ ಪ್ರಶ್ನೆ

Date:

Advertisements

ಉತ್ತರ ಪ್ರದೇಶದ ಬಾರಾಬಂಕಿ ಹಾಗೂ ಫತೇಫುರ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಕೆಲವು ಪ್ರಶ್ನೆಗಳನ್ನು ಕೇಳಲು ಬಯಸಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಮೋದಿ ಸರ್ಕಾರ ಯುಪಿಎ ಸರ್ಕಾರ ಜಾರಿಗೊಳಿಸಿದ್ದ ಹಿಂದುಳಿದ ಪ್ರದೇಶಗಳ ಅನುದಾನವನ್ನು ಏಕೆ ರದ್ದುಗೊಳಿಸಿತು. ಬಿಜೆಪಿ ಏಕೆ ಮೆಂತ್ಯ ಬೆಳೆಯುವ ರೈತರನ್ನು ಕಡೆಗಣಿಸಿತು. ಅದಲ್ಲದೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿರಂತರವಾಗಿ ಬುದ್ವಾಲ್ ಸಕ್ಕರೆ ಗಿರಣಿಯನ್ನು  ಮರು ಪ್ರಾರಂಭಿಸುವುದಾಗಿ ಸುಳ್ಳು ಹೇಳುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಭಾರತದ ಹಿಂದುಳಿದ ಪ್ರದೇಶದ ಜಿಲ್ಲೆಗಳ ಅಭಿವೃದ್ಧಿಗಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಹಿಂದುಳಿದ ಪ್ರದೇಶ ಅನುದಾನ ನಿಧಿಯನ್ನು 2006ರಲ್ಲಿ ಸ್ಥಾಪಿಸಿತ್ತು. ಈ ಯೋಜನೆಯಿಂದ ಉತ್ತರ ಪ್ರದೇಶದ ಹಿಂದುಳಿದ ಜಿಲ್ಲೆಗಳು 2013ರವರೆಗೂ 4 ಸಾವಿರ ಕೋಟಿ ರೂ. ಅನುದಾನ ಪಡೆದಿವೆ. ಆದರೆ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2015ರಲ್ಲಿ ಈ ಯೋಜನೆ ರದ್ದುಗೊಳಿಸಿ ಹಣ ನೀಡುವುದನ್ನು ನಿಲ್ಲಿಸಿತು. ಇದರಿಂದಾಗಿ ಉತ್ತರ ಪ್ರದೇಶದ ಫತೇಪುರ್‌ ರೀತಿಯ ಜಿಲ್ಲೆಗಳು ಆರ್ಥಿಕ ನೆರವು ಸಿಗದೆ ಗಮನಾರ್ಹ ಹೊಡೆತ ಅನುಭವಿಸಬೇಕಾಯಿತು. ಈ ಪ್ರಶ್ನೆಗೆ ಮೋದಿ ಸರ್ಕಾರ ಖಂಡಿತಾ ಉತ್ತರ ನೀಡಬೇಕು ಎಂದು ಜೈರಾಮ್ ರಮೇಶ್ ಆಗ್ರಹಿಸಿದರು.

Advertisements

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಹಿಂದೂ-ಮುಸ್ಲಿಮ್ ರಾಜಕಾರಣ ಮಾಡುವುದಿಲ್ಲವೇ ನಮ್ಮ ಪ್ರಧಾನಿ!

ಭಾರತವು ವಿಶ್ವದಲ್ಲಿಯೇ ಅತೀ ಹೆಚ್ಚು ಮೆಂತ್ಯ ಎಣ್ಣೆಯನ್ನು ಉತ್ಪಾದಿಸಿ ರಫ್ತು ಮಾಡುವ ದೇಶವಾಗಿದ್ದು, ಉತ್ತರ ಪ್ರದೇಶ ಭಾರತದಲ್ಲಿಯೇ ಶೇ.90 ರಷ್ಟು ಮೆಂತ್ಯ ಎಣ್ಣೆ ಉತ್ಪಾದಿಸುತ್ತದೆ. ಮೋದಿ ಸರ್ಕಾರದ ಮೆಂತ್ಯ ಎಣ್ಣೆಯ ಮೇಲೆ ಜಿಎಸ್‌ಟಿ ಹೆಚ್ಚಿನ ತೆರಿಗೆಯ ಹೇರಿಕೆಯಿಂದಾಗಿ ಉದ್ಯಮಕ್ಕೆ ಆರ್ಥಿಕ ಹೊಡೆತ ಉಂಟಾಗಿದ್ದು, ಮೆಂತ್ಯ ಬೆಳೆಯುವ ರೈತರು ಕೂಡ ಸಂಕಷ್ಟದಲ್ಲಿದ್ದಾರೆ. ಈ ರೈತರನ್ನು ಉತ್ತೇಜಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಲಿಲ್ಲ. ಇದಕ್ಕೂ ನಿರ್ಗಮಿಸುವ ಪ್ರಧಾನಿ ಮೋದಿ ಸರ್ಕಾರ ಉತ್ತರ ನೀಡಬೇಕು ಎಂದು ಜೈರಾಮ್‌ ರಮೇಶ್ ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರಂತರ ಭರವಸೆಗಳ ಹೊರತಾಗಿಯೂ ಬುಂದ್ವಾಲದ ಸಕ್ಕರೆ ಗಿರಣಿ ನಿಷ್ಕ್ರಿಯವಾಗಿದೆ. ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಗೂ ಮುನ್ನ ಬುಂದ್ವಾಲದ ಸಕ್ಕರೆ ಗಿರಣಿಯನ್ನು ಅಭಿವೃದ್ಧಿಪಡಿಸುವುದಾಗಿ ಬಿಜೆಪಿ ಸರ್ಕಾರಗಳು ನೀಡಿದ್ದ ಭರವಸೆಗಳು ಕೇವಲ ಭರವಸೆಗಳಾಗಿ ಉಳಿದಿವೆ. ಇದಕ್ಕೂ ಕೂಡ ಮೋದಿಯವರು ಉತ್ತರ ಕೊಡಬೇಕು ಎಂದು ಜೈರಾಮ್ ರಮೇಶ್ ಆಗ್ರಹಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X